ಪೊನ್ನಂಪೇಟೆ: ಶಿಕ್ಷಕಿಯನ್ನು ಗುಂಡಿಕ್ಕಿ ಕೊಂದು ವ್ಯಕ್ತಿ ಆತ್ಮಹತ್ಯೆ


Team Udayavani, Jun 15, 2019, 10:37 AM IST

mad

ಗೋಣಿಕೊಪ್ಪಲು: ಶಿಕ್ಷಕಿಯನ್ನು ಗುಂಡು ಹಾರಿಸಿ ಕೊಲೆಗೈದು, ಬಳಿಕ ಆರೋಪಿಯೂ ಅದೇ ಕೋವಿಯಿಂದ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಬಾಳೆಲೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಬಾಳೆಲೆ ನಿವಾಸಿ, ಗೋಣಿಕೊಪ್ಪಲು ಲಯನ್ಸ್‌ ಶಾಲೆಯ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (45) ಕೊಲೆಯಾದವರು. ಮಾಚಿಮಾಡ ಜಗದೀಶ್‌ (55) ಆರೋಪಿ. ಬಾಳೆಲೆ ಪೊಲೀಸ್‌ ಉಪಠಾಣೆ ಮುಂಭಾಗದಲ್ಲೇ ಘಟನೆ ನಡೆದಿದೆ.

ಪ್ರಕರಣದ ವಿವರ
ಆಶಾ ಅವರು ಶುಕ್ರವಾರ ಬೆಳಗ್ಗೆ 8:15ಕ್ಕೆ ಶಾಲೆಯ ಬಸ್ಸಿಗಾಗಿ ಕಾಯುತ್ತಿದ್ದಾಗ ಕಾಫಿ ತೋಟದಿಂದ ದುಷ್ಕರ್ಮಿ ಒಂಟಿ ನಳಿಕೆಯ ಕೋವಿಯಿಂದ ಗುಂಡು ಹಾರಿಸಿದ್ದಾನೆ. ಪರಿಣಾಮ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟರು. ಬಳಿಕ ಆರೋಪಿಯು ಆಶಾ ಮೃತಪಟ್ಟ ಸ್ಥಳದಿಂದ 20 ಅಡಿ ದೂರದ ಕಾಫಿ ತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿಕ್ಷಕಿಯನ್ನು ರಕ್ಷಿಸಲು ಮುಂದಾದ ಸ್ಥಳೀಯ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ವೈ.ಕೆ. ದಿನೇಶ್‌ ಹಾಗೂ ತೋಟದ ಕಾರ್ಮಿಕ ಪಿ.ಬಿ. ಪೆಮ್ಮಿ ಮೇಲೂ ಆರೋಪಿ ಗುಂಡು ಹಾರಿಸಿ ಗಾಯಗೊಳಿಸಿದ್ದಾನೆ.

ಬೆಳಗ್ಗಿನಿಂದಲೇ ಕಾದು ಕುಳಿತಿದ್ದ!
ಶಿಕ್ಷಕಿಯನ್ನು ಕೊಲ್ಲಲು ಆರೋಪಿಯು ಆಕೆಯ ಮನೆಯ ಸಮೀಪ ಬೆಳಗ್ಗಿನಿಂದಲೇ ಕಾದು ಕುಳಿತಿದ್ದ. ಆಶಾ ಕಾವೇರಮ್ಮ ಮನೆಯಿಂದ ಹೊರಬಂದ ಕೂಡಲೇ ಗುಂಡು ಹಾರಿಸಿದ್ದರೂ ಅದು ಗುರಿ ತಪ್ಪಿತ್ತು. ಬಳಿಕ ಆಕೆಯನ್ನು ಮನೆಯಿಂದ 100 ಮೀ. ದೂರದ ಮುಖ್ಯ ರಸ್ತೆಯ ಬದಿಯಲ್ಲಿರುವ ಕೊಡವ ಸಮಾಜದ ಸಮೀಪದಲ್ಲಿ ಕೊಲೆ ಮಾಡಿದ್ದಾನೆ.

ಹಿಂದೆ ಸ್ನೇಹಿತರಾಗಿದ್ದರು
ಹಲವು ವರ್ಷಗಳಿಂದ ಆಶಾ ಕಾವೇರಮ್ಮ ಹಾಗೂ ಜಗದೀಶ್‌ ನಡುವೆ ಗಾಢವಾದ ಸ್ನೇಹವಿತ್ತು ಹಾಗೂ ಎರಡು ವರ್ಷಗಳಿಂದ ಸ್ನೇಹದಲ್ಲಿ ಬಿರುಕು ಮೂಡಿತ್ತು. ಇವರ ನಡುವಿನ ಲೇವಾದೇವಿ ವಹಿವಾಟಿನಿಂದಾಗಿ ಸ್ನೇಹ ಮುರಿದು ಬಿದ್ದಿತ್ತು ಎನ್ನಲಾಗುತ್ತಿದೆ. ಬಳಿಕ ಆಕೆಯೊಂದಿಗೆ ಸ್ನೇಹವನ್ನು ಮರುಸ್ಥಾಪಿಸಲು ಜಗದೀಶ್‌ ಬ್ಲ್ಯಾಕ್‌ವೆುಲ್‌ ತಂತ್ರ ಅನುಸರಿಸಿದ್ದ. ಶಿಕ್ಷಕಿಯ ಫೋಟೋವನ್ನು ನೀಲಿ ಚಿತ್ರ ತಾರೆಯ ಫೋಟೋದೊಂದಿಗೆ ಸೇರಿಸಿ ಬ್ಲ್ಯಾಕ್‌ವೆುಲ್‌ ಮಾಡುತ್ತಿದ್ದ. ಈ ಸಂಬಂಧ ಗೋಣಿಕೊಪ್ಪಲು ಠಾಣೆಯಲ್ಲಿ ದೂರು ದಾಖಲಾಗಿ ಜಗದೀಶ್‌ ಜೈಲುವಾಸ ಅನುಭವಿಸಿದ್ದ. ಇದೇ ಕೋಪದಿಂದ ಶಿಕ್ಷಕಿಯ ಮನೆ ಸಮೀಪ ತೆರಳಿ ಹಲವು ಬಾರಿ ಕೊಲೆ ಬೆದರಿಕೆಯೊಡ್ಡಿದ್ದ. ಈ ಬಗ್ಗೆಯೂ ಶಿಕ್ಷಕಿಯು ಎಸ್‌ ಪಿಗೆ ದೂರು ನೀಡಿದ್ದರು.

ಸಿಸಿ ಕೆಮರಾ ಅಳವಡಿಸಿದ್ದ ಶಿಕ್ಷಕಿ
ಈತನ ವರ್ತನೆಯಿಂದ ಬೆದರಿದ್ದ ಶಿಕ್ಷಕಿ ತನ್ನ ಮನೆಯ ಸುತ್ತಲು ಸಿ.ಸಿ.ಕೆಮರಾ ಅಳವಡಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಎಸ್‌ ಪಿ ಡಾ| ಸುಮನ್‌ ಪನ್ನೇಕರ್‌ ಅವರು, ಹತ್ಯೆ ಹಿಂದಿನ ನಿಖರ ಕಾರಣ ತನಿಖೆ ಬಳಿಕವಷ್ಟೆ ಸ್ಪಷ್ಟವಾಗಬಹುದು. ಹಳೆ ವೈಷಮ್ಯ ಘಟನೆಗೆ ಕಾರಣವೆಂದು ಶಂಕಿಸಲಾಗಿದೆ ಎಂದರು. ವಿರಾಜಪೇಟೆ ಡಿವೈಎಸ್‌ಪಿ ನಾಗಪ್ಪ, ಗೋಣಿಕೊಪ್ಪಲು ಸಿಐ ಬಿ.ಎಸ್‌. ಶ್ರೀಧರ್‌, ಪೊನ್ನಂಪೇಟೆ ಠಾಣಾಧಿಕಾರಿ ಮಹೇಶ್‌, ಗೋಣಿಕೊಪ್ಪಲು ಠಾಣಾಧಿ ಕಾರಿ ಶ್ರೀಧರ್‌ ಹಾಗೂ ಸಿಬಂದಿ ಎಸ್‌ಪಿ ಜತೆ ಗಿದ್ದರು.

ಉತ್ತಮ ಶಿಕ್ಷಕಿ
ಆಶಾ ಕಾವೇರಮ್ಮ ಅವರು ಇಬ್ಬರು ಪುತ್ರಿಯರೊಂದಿಗೆ ಗ್ರಾಮದಲ್ಲಿ ಉತ್ತಮ ಜೀವನ ನಡೆಸುತ್ತಿದ್ದರು. ಓರ್ವ ಪುತ್ರಿ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು, ಮತ್ತೂಬ್ಬಳು ಅಂತಿಮ ಪದವಿ ವಿದ್ಯಾರ್ಥಿ. ಆಶಾ ತನ್ನ ಶಾಲೆಯಲ್ಲಿ ಉತ್ತಮ ಶಿಕ್ಷಕಿ ಎಂದು ಹೆಸರು ಗಳಿಸಿದ್ದರು.

ಕ್ರಿಮಿನಲ್‌ ಹಿನ್ನೆಲೆ
ಜಗದೀಶ್‌ ಬಗ್ಗೆ ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಈತ ಹಲವಾರು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಬಗ್ಗೆ ಪೊನ್ನಂಪೇಟೆ ಹಾಗೂ ಗೋಣಿ ಕೊಪ್ಪಲು ಠಾಣೆಯಲ್ಲಿ ದೂರು ದಾಖಲಾಗಿದೆ. ಇದೇ ಕಾರಣದಿಂದ ಸಾರ್ವಜನಿಕರಿಂದಲೂ ಪೆಟ್ಟು ತಿಂದಿದ್ದ ಉದಾಹರಣೆಗಳಿವೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.