ನಿವೇಶನ ಹಕ್ಕಿಗೆ ಒತ್ತಾಯ: ಆದಿವಾಸಿ ಹಕ್ಕು ಸಮನ್ವಯ ಸಮಿತಿ ಪ್ರತಿಭಟನೆ


Team Udayavani, Mar 15, 2017, 5:46 PM IST

niveshana.jpg

ಮಡಿಕೇರಿ: ಕೊಡಗು ಜಿಲ್ಲೆಯ ಆದಿವಾಸಿಗಳಿಗೆ ನಿವೇಶನ ಹಾಗೂ ಭೂಮಿಯ ಹಕ್ಕನ್ನು ತಕ್ಷಣ ಮಂಜೂರು ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ನಗರದ ಫೀ|ಮಾ| ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಮಿತಿಯ ಪ್ರಮುಖರು ಸರಕಾರದ ನಿರ್ಲಕ್ಷ್ಯದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಮಿತಿಯ ಜಿಲ್ಲಾ ಸಂಚಾಲಕ ವೈ.ಕೆ.ಗಣೇಶ್‌ ಜಿಲ್ಲೆಯ ಮೂಲ ನಿವಾಸಿಗಳಾಗಿರುವ ಆದಿವಾಸಿಗಳು ತಲೆತಲಾಂತರದಿಂದ ಇಲ್ಲೇ ಹುಟ್ಟಿ ಬೆಳೆದು ಬಂದಿದ್ದರೂ, ವಾಸಿಸಲು ಸೂರಿಲ್ಲದೆ ಪರದಾಡುತ್ತಿದ್ದಾರೆ. ಹೋರಾಟಗಳಿಂದ ಮಾತ್ರ ಸರಕಾರದ ಗಮನ ಸೆಳೆಯಬೇಕಾದ ಪರಿಸ್ಥಿತಿ ಬಂದೊದಗಿದ್ದು, ಜಿಲ್ಲೆಯಲ್ಲಿರುವ ಹೆಚ್ಚಿನ ಬುಡಕಟ್ಟು ಜನರಿಗೆ ಅಧಿಕೃತ ದಾಖಲೆಗಳು ಇಲ್ಲದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಹೆಚ್ಚಿನವರು ತೋಟಗಳ ಲೈನ್‌ಮನೆಗಳಲ್ಲಿ ವಾಸಿಸುತ್ತಿದ್ದು, ಪಡಿತರ ಚೀಟಿ, ಗುರುತಿನ ಚೀಟಿ, ಆಧಾರ್‌ಕಾರ್ಡ್‌, ಬ್ಯಾಂಕ್‌ ಖಾತೆ, ಜಾತಿ ಸರ್ಟಿಫಿಕೇಟ್‌ಗಳು ದೊರಕುತ್ತಿಲ್ಲ. ಇದೇ ಕಾರಣದಿಂದ ವಸತಿ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು. ಸರಕಾರ ತಕ್ಷಣ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಸಾಲದಿಂದ ಸಂಕಷ್ಟದಲ್ಲಿರುವ ಆದಿವಾಸಿಗಳನ್ನು ಜೀತಮುಕ್ತಗೊಳಿಸಬೇಕು ಎಂದು ಗಣೇಶ್‌ ಒತ್ತಾಯಿಸಿದರು.

ಬೇಡಿಕೆಗಳು: ನಿವೇಶನ ಮತ್ತು ಭೂಮಿ ಹಕ್ಕನ್ನು ಕೂಡಲೇ ಮಂಜೂರು ಮಾಡಬೇಕು, ಮೂಲ ಆದಿವಾಸಿಗಳು ನೆಲೆ ನಿಂತಿರುವ ಮತ್ತು ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು, ಆದಿವಾಸಿಗಳು ವಾಸಿಸುತ್ತಿರುವ ಹಾಡಿಗಳು ಅಥವಾ ಕಾಲೊನಿಗಳಿಗೆ ಕುಡಿಯುವ ನೀರು, ಶೌಚಾಲಯ, ವಿದ್ಯುತ್‌, ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಅರಣ್ಯ ಇಲಾಖೆಯ ಹುದ್ದೆಗಳಿಗೆ ಆದಿವಾಸಿಗಳನ್ನು ನೇಮಿಸಿಕೊಳ್ಳಬೇಕು, ವಿದ್ಯಾವಂತ ಆದಿವಾಸಿ ಯುವ ಜನರಿಗೆ ಸರಕಾರಿ ಮತ್ತು ಖಾಸಗಿ ವಲಯದಲ್ಲೂ ಉದ್ಯೋಗ ಮೀಸಲಾತಿ ನೀಡಬೇಕು ಮತ್ತು ಈ ಜವಾಬ್ದಾರಿಯನ್ನು ಸರಕಾರ ಮತ್ತು ಜಿಲ್ಲಾಡಳಿತವೇ ನಿಭಾಯಿಸಬೇಕು, ಆದಿವಾಸಿಗಳಿಗೆ ಸೇರಬೇಕಾದ ಭೂಮಿಯನ್ನು  ಪ್ರಭಾವಿಗಳು ಸ್ವಾಧೀನಪಡಿಸಿಕೊಂಡಿದ್ದು, ಅದನ್ನು ಮರಳಿ ಆದಿವಾಸಿಗಳಿಗೆ ನೀಡಲು ಕ್ರಮ ಕೈಗೊಳ್ಳಬೇಕು, ಆದಿವಾಸಿಗಳನ್ನು ವಂಚಿಸಿ ಭೂಮಿ ಕಸಿದುಕೊಂಡಿರುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು, ಆದಿವಾಸಿಗಳು ಮತ್ತು ದಲಿತರ ಶ್ಮಶಾನ ಒತ್ತುವರಿಯಾಗಿದ್ದರೆ ಅದನ್ನು ವಶಪಡಿಸಿಕೊಂಡು ಮರಳಿ ಆಯಾ ಸಮುದಾಯಗಳಿಗೆ ನೀಡಬೇಕು. ಸ್ಮಶಾನ ಇಲ್ಲದವರಿಗೆ ಶ್ಮಶಾನ ಜಾಗ ಗುರುತಿಸಿ ನೀಡಬೇಕು, ಪಾಲೆಮಾಡುವಿನಲ್ಲಿ ಬಡ ಕುಟುಂಬಗಳು ಶವ ಸಂಸ್ಕಾರ ಮಾಡುತ್ತಿದ್ದ ಭೂಮಿಯನ್ನೇ ಸ್ಥಳೀಯ ನಿವಾಸಿಗಳಿಗೆ ಸ್ಮಶಾನಕ್ಕಾಗಿ ಬಿಟ್ಟುಕೊಡಬೇಕು.

ಪ್ರತಿಭಟನೆಯಲ್ಲಿ ಸಿಪಿಐಎಂ ರಾಜ್ಯ ಸಮಿತಿ ಸದಸ್ಯರಾದ ಎಸ್‌.ವೈ. ಗುರುಶಾಂತ್‌, ಸಮಿತಿಯ ಪ್ರಮುಖರಾದ ವೈ.ಕೆ.ರವಿ, ಜೆ.ಕೆ.ಮಿಲನ್‌, ವೈ.ಜಿ. ಪ್ರೇಮಾ, ಮಂಜುಳಾ, ಜೆ.ಪಿ. ಕಮಲಾಕ್ಷಿ, ವೈ.ಕೆ. ತಮ್ಮು ಮತ್ತಿತರರು ಪಾಲ್ಗೊಂಡಿದ್ದರು. ಪ್ರತಿಭಟನಕಾರರು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.