ಶರನ್ನವರಾತ್ರಿ ಉತ್ಸವಕ್ಕೆ ಸಾಂಪ್ರದಾಯಿಕ ತೆರೆ
Team Udayavani, Oct 11, 2019, 5:36 AM IST
ಸೋಮವಾರಪೇಟೆ: ಪಟ್ಟಣದ ಬಸವೇಶ್ವರ ದೇವಾಲಯ ಹಾಗೂ ಸೋಮೇಶ್ವರ ದೇವಾಲಯಗಳಲ್ಲಿ ನಡೆಯುತ್ತಿದ್ದ ಶರನ್ನವರಾತ್ರಿ ಉತ್ಸವ ಮಂಗಳವಾರ ಸಾಂಪ್ರದಾಯಿಕ ತೆರೆ ಕಂಡಿದೆ. ನವರಾತ್ರಿಯ ಅಂಗವಾಗಿ ಕಳೆದ ಹತ್ತು ದಿನಗಳಿಂದ ಈ ದೇವಾಲಯಗಳಲ್ಲಿ ಶರನ್ನವರಾತ್ರಿ ಉತ್ಸವ ನಡೆಸಲಾಗುತ್ತಿತ್ತು. 9 ದಿನ ಪ್ರತಿನಿತ್ಯ ಒಂದೊಂದು ಅಲಂಕಾರ ವಿಶೇಷ ಪೂಜೆಗಳಿಂದ ದೇವಿ ಚಾಮುಂಡೇಶ್ವರಿ ಆರಾಧನೆ ನಡೆಸಲಾಗಿತ್ತು. 10ನೇ ದಿನ ವಿಜಯ ದಶಮಿಯಂದು ಸೋಮೇಶ್ವರ ದೇವಾಲಯದಲ್ಲಿ ಪ್ರತಿಪ್ರತಿಷ್ಠಾಪಿಸಿದ ದೇವಿಯ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿರಿಸಿ ಮಂಗಳವಾದ್ಯ ಘೋಷ ಹಾಗೂ ವಿವಿಧ ಕಲಾ ತಂಡಗಳೊಡನೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ದು ಆನೆಕೆರೆಯಲ್ಲಿ ವಿಸರ್ಜಿಸಿ ಬನ್ನಿ ಮರ ಕಡಿಯುವ ಮೂಲಕ ಉತ್ಸವಕ್ಕೆ ತೆರೆ ಎಳೆಯಲಾಯಿತು.
ಬಸವೇಶ್ವರ ದೇವಾಲಯದಲ್ಲಿ ದೇವಿ ಚಾಮುಂಡೇಶ್ವರಿ ಮೂರ್ತಿಗೆ ಪಂಚಾಮೃತಾಭಿಷೇಕ, ಅಷ್ಟೋತ್ತರ, ಕುಂಕುಮಾರ್ಚನೆಯೊಂದಿಗೆ ದೇವಿ ಮಹಾತೆ¾ ಪಾರಾಯಣ ನಡೆಯಿತು. ಅನಂತರ ಬಾಳೆ ಕಡಿದು, ಬನ್ನಿ ಮುಡಿದು, ವಿಜಯ ದಶಮಿ ಆಚರಿಸಿ ದೇವಿಗೆ ಉಯ್ನಾಲೊತ್ಸವದ ಅನಂತರ ವಿಶೇಷ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನೆರವೇರಿತು. ಈ ಸಂಧರ್ಭ ದೇವಿಗೆ ವಿವಿಧ ವಿಶೇಷ ತಿನಿಸುಗಳ ಆಲಂಕಾರ ಮಾಡಲಾಗಿತ್ತು. ಎರಡು ದೇವಾಲಯಗಳಲ್ಲೂ ಕಳೆದ ಹತ್ತು ದಿನಗಳಿಂದ ಪ್ರತಿನಿತ್ಯ ನೂರಾರು ಭಕ್ತರು ಶರನ್ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡು ಕೃತಾರ್ಥರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ