ಕೊಡಗು ಕಾಂಗ್ರೆಸ್‌ನಲ್ಲಿ ಢೋಂಗಿ ನಾಯಕರಿದ್ದಾರೆ : ಮುತ್ತಪ್ಪ ಟೀಕೆ


Team Udayavani, Apr 29, 2018, 8:00 AM IST

Z-NAPANDA-MUTHAPPA.jpg

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ತಾವು ಸಂಘಟಿಸಿದ ಕಾಂಗ್ರೆಸ್‌ ಪಕ್ಷಕ್ಕೆ ಧಕ್ಕೆಯಾಗಬಾರದು ಮತ್ತು ಜಾತ್ಯತೀತ ಮತಗಳು ಹಂಚಿ ಹೋಗಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್‌ಗೆ ಬಂಡಾಯವಾಗಿ ತಾವು ಸಲ್ಲಿಸಿದ ನಾಮಪತ್ರವನ್ನು ಹಿಂಪಡೆದಿರುವುದಾಗಿ ಐಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯ ನಾಗಿದ್ದ ನನಗೆ ಟಿಕೆಟ್‌ ಸಿಗುವ ನಿರೀಕ್ಷೆ ಇತ್ತಾದರೂ ಕೊನೆ ಕ್ಷಣದಲ್ಲಿ ಅದು ಬೇರೆಯವರ ಪಾಲಾಯಿತು. ಬಿಜೆಪಿಯನ್ನು ಸೋಲಿಸಲೇಬೇಕೆಂದು ಕಾರ್ಯೋನ್ಮುಖನಾದ‌ ನನಗೆ ಟಿಕೆಟ್‌ ಸಿಗದ ಕಾರಣ ಬಂಡಾಯವಾಗಿ ನಾಮಪತ್ರ ಸಲ್ಲಿಸಬೇಕಾಯಿತು ಎಂದು ಸ್ಪಷ್ಟಪಡಿಸಿದರು.

ಪಕ್ಷದ ರಾಜ್ಯ ಮುಖಂಡರು, ಸಚಿವರುಗಳಾದ ಡಿ.ಕೆ. ಶಿವಕುಮಾರ್‌, ಎಂ.ಆರ್‌. ಸೀತಾರಾಂ ಅವರುಗಳು ನನ್ನೊಂದಿಗೆ ಚರ್ಚಿಸಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಸಿದರು. ಕೋರ್‌ ಕಮಿಟಿ ಹಾಗೂ ಹಿತೈಷಿಗಳ ಸಭೆಯಲ್ಲಿ ಚರ್ಚಿಸಿ ನಾವು ಕಟ್ಟಿ ಬೆಳೆಸಿದ ಕಾರ್ಯಕರ್ತರ ತಂಡ ಹಾಳಾಗಬಾರದೆಂದು ಸಾಧಕ ಬಾಧಕಗಳ ಕುರಿತು ಚಿಂತಿಸಲಾಯಿತು.  ಜಾತ್ಯತೀತ ಮತಗಳು ಹಂಚಿ ಹೋಗುವುದನ್ನು ತಪ್ಪಿಸಿ ಜಿಲ್ಲೆಯ ಎರಡು ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಲು ನಿರ್ಣಯ ಕೈಗೊಳ್ಳಲಾಯಿತು ಎಂದು ನಾಪಂಡ ಮುತ್ತಪ್ಪ ತಿಳಿಸಿದರು.

ಕಾಂಗ್ರೆಸ್‌ ಗೆಲ್ಲಬೇಕು ಎನ್ನುವ ಯೋಜನೆ ಮತ್ತು ಯೋಚನೆ ಇಲ್ಲದವರು ನನ್ನ ವಿರುದ್ಧ ಅನಾವಶ್ಯಕ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡುವ ಪಕ್ಷದ ಕೆಲವು ಡೋಂಗಿ ನಾಯಕರುಗಳಿಗೆ ತಕ್ಕ ಪಾಠ ಕಲಿಸಬೇಕು ಎನ್ನುವ ಉದ್ದೇಶ ಇತ್ತಾದರೂ ಅದು ಸಾಧ್ಯವಾಗಲಿಲ್ಲ. ನಾನು ಕಾಂಗ್ರೆಸ್‌ ಪಕ್ಷದ ಮೇಲೆ ಹಿಡಿತ ಸಾಧಿಸುತ್ತೇನೆ ಎಂಬ ಉದ್ದೇಶದಿಂದ ನನಗೆ ಟಿಕೆಟ್‌ ಸಿಗಬಾರದು ಎಂದು ಕೆಲವರು ಷಡ್ಯಂತ್ರ ನಡೆಸಿದ್ದರು, ನಾನು ಕಾರ್ಯಕರ್ತರ ಬಳಿಯೇ ಇರುವ ನಾಯಕನಾಗಿದ್ದು, ಪಕ್ಷದೊಳಗಿರುವ ಢೋಂಗಿ ನಾಯಕರು ಕಾರ್ಯಕರ್ತರ ನೋವಿಗೆ ಸ್ಪಂದಿಸುತ್ತಿಲ್ಲವೆಂದು ಟೀಕಿಸಿದರು.

ಅನಿವಾರ್ಯವಾಗಿ ಕಾಂಗ್ರೆಸ್‌ ಪಕ್ಷದ ಗೆಲುವಿಗಾಗಿ ಮುಂದಾಗಲೇ ಬೇಕಾಗಿದೆ. ನಮ್ಮ ಕಾರ್ಮಿಕ ಘಟಕದಲ್ಲಿ 21 ಲಕ್ಷ ಸದಸ್ಯರಿದ್ದು, ನನ್ನ ಅಧ್ಯಕ್ಷತೆಯ ಸಂಘಟನೆಯಲ್ಲಿ 3.50 ಲಕ್ಷ ಸದಸ್ಯರಿದ್ದಾರೆ. ಇವರ ಹಿತವನ್ನು ಕಾಯುವ ಉದ್ದೇಶದಿಂದಲೂ ನಾಮ ಪತ್ರ ಹಿಂಪಡೆಯಬೇಕಾಯಿತು ಎಂದು ನಾಪಂಡ ಮುತ್ತಪ್ಪ ಸಮರ್ಥಿಸಿಕೊಂಡರು.

ಹೈಕಮಾಂಡ್‌ ಸಲಹೆ ಹಿನ್ನೆಲೆ ಕಾಂಗ್ರೆಸ್‌ ಪಕ್ಷದ ಹೆಸರಿನಿಂದಲೂ ನಾಮ ಪತ್ರ ಸಲ್ಲಿಸಿದ್ದೆ, ಆದರೆ ಅದು ಬಿ ಫಾರಂ ಇಲ್ಲದ ಕಾರಣ ಈಗಾಗಲೇ ತಿರಸ್ಕೃತಗೊಂಡಿದೆ. ಕಳೆದ ಬಾರಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಸ್ಥಾನದಲ್ಲಿದ್ದ ಕಾಂಗ್ರೆಸ್‌ ಪಕ್ಷವನ್ನು ಈ ಬಾರಿ ಒಂದನೇ ಸ್ಥಾನಕ್ಕೆ ತರುವುದೇ ನಮ್ಮ ಗುರಿಯಾಗಿದ್ದು, ಕ್ಷೇತ್ರದ ಅಭ್ಯರ್ಥಿಯನ್ನು ಪ್ರಬಲಗೊಳಿಸುತ್ತೇವೆ ಎಂದು ಮುತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಕೊಡಗು ಬಿಜೆಪಿಯ ಭದ್ರಕೋಟೆ ಅಲ್ಲವೆಂದು ಅಭಿಪ್ರಾಯಪಟ್ಟ ನಾಪಂಡ ಮುತ್ತಪ್ಪ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ವಿಳಂಬ ಧೋರಣೆ ತೋರುತ್ತಿರುವುದೇ ಬಿಜೆಪಿ ಗೆಲುವಿಗೆ ಕಾರಣ ಎಂದು ವಿಶ್ಲೇಷಿಸಿದರು.

ಜಿಲ್ಲಾಧ್ಯಕ್ಷ ಸ್ಥಾನ ಸಿಗಲಿದೆ  
ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವ ಸಂದರ್ಭ ಪಕ್ಷದ ಪ್ರಮುಖರು ನನಗೆ ಜಿಲ್ಲಾಧ್ಯಕ್ಷ ಸ್ಥಾನ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಇನ್ನು ಎರಡು ತಿಂಗಳಿನಲ್ಲಿ ಜಿಲ್ಲಾಧ್ಯಕ್ಷ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಅಧಿಕಾರ ವಹಿಸಿಕೊಂಡ ನಂತರ ಢೋಂಗಿ ನಾಯಕರು ಪಕ್ಷದಲ್ಲಿರಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಉಸ್ತುವಾರಿ ಸಚಿವರು ಬರುವಾಗ, ಹೋಗುವಾಗ ಕಾರಿನಲ್ಲಿ ಕುಳಿತು ಢೋಂಗಿ ನಾಯಕತ್ವ ಮಾಡಿದವರು ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ವಿಫ‌ಲರಾಗಿದ್ದಾರೆ ಎಂದು ಮುತ್ತಪ್ಪ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಐಎನ್‌ಟಿಯುಸಿ ಪ್ರಧಾನ ಕಾರ್ಯದರ್ಶಿ ನಾಪಂಡ ಮುದ್ದಪ್ಪ, ಜಿಲ್ಲಾಧ್ಯಕ್ಷ ಟಿ.ಪಿ. ಹಮೀದ್‌, ಪ್ರಮುಖರಾದ ಹೊಸಬೀಡು ಹೂವಯ್ಯ, ಅಜ್ಜಳ್ಳಿ ರವಿ ಹಾಗೂ ಕಿಶೋರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.