ಮಕ್ಕಂದೂರು, ಮೊಣ್ಣಂಗೇರಿ ನಿವಾಸಿಗಳಲ್ಲಿ ಆತಂಕ; ನೆರವಿನ ನಿರೀಕ್ಷೆ


Team Udayavani, Jul 23, 2018, 6:10 AM IST

zzz.jpg

ಮಡಿಕೇರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ  ಗಾಳಿ, ಮಳೆಗೆ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಗೊಳಗಾಗಿದ್ದು, ಕೋಟ್ಯಂತರ ರೂ.ನಷ್ಟ ಸಂಭವಿಸಿದೆ. ಇದರ ನಡುವೆಯೇ ಕೆಲವು ಗ್ರಾಮಗಳಲ್ಲಿ ಭೂಮಿ ಬಾಯಿ ಬಿಡತೊಡಗಿದೆ.

ಮಡಿಕೇರಿ ತಾಲೂಕಿನ ಮಕ್ಕಂದೂರು ಹಾಗೂ ಎರಡನೇ ಮೊಣ್ಣಂಗೇರಿ ಗ್ರಾಮದಲ್ಲಿ ಕಿ.ಮೀ. ನಷ್ಟು ದೂರ ಭೂಮಿ ಬಿರುಕು ಬಿಟ್ಟಿದ್ದು, ದಿನದಿಂದ ದಿನಕ್ಕೆ ಇದರ ದೂರ ವ್ಯಾಪಿಸುತ್ತಲೇ ಇದೆ. ಮಕ್ಕಂದೂರು ದೇವಾಲಯದಿಂದ ಸ್ವಲ್ಪ ದೂರದಲ್ಲಿ ಭೂಮಿ ಬಾಯಿ ಬಿಡುತ್ತಿರುವುದರಿಂದ ಮಂಜುನಾಥ್‌ ಅ‌ವರಿಗೆ ಸೇರಿದ ಹಂಚಿನ ಮನೆ ಸಂಪೂರ್ಣವಾಗಿ ಬಿರುಕು ಬಿಟ್ಟಿದ್ದು, ಅಪಾಯದ ಮುನ್ಸೂಚನೆಯನ್ನು ನೀಡಿದೆ. ಸುಮಾರು 15 ಲಕ್ಷ ರೂ.ವೆಚ್ಚದ ಈ ಮನೆ ಅಡಿಪಾಯದಿಂದಲೇ ಬಿರುಕು ಬಿಟ್ಟು ಮೇಲ್ಚಾವಣಿಯವರೆಗೂ ಗೋಡೆ ಬೀಳುವ ಸ್ಥಿತಿಯಲ್ಲಿದೆ. ಮನೆಯ ಪಕ್ಕದಲ್ಲಿರುವ ತೋಟದಿಂದಲೇ ಭೂಮಿ ಬಿರುಕು ಬಿಟ್ಟಿದ್ದು, ಇದು ಮನೆಯ ಭಾಗವನ್ನೂ ವ್ಯಾಪಿಸಿದೆ.

ಮಂಜುನಾಥ್‌ ಅವರ ಅನುಭವದ ಪ್ರಕಾರ ಜು.9 ರಂದು ಮಕ್ಕಂದೂರು ಭಾಗದಲ್ಲಿ ಲಘು ಭೂಕಂಪನವಾದ ಅನಂತರ ಭೂಮಿಯಲ್ಲಿ ಬಿರುಕು ಹೆಚ್ಚಾಗಿದೆ. 7 ವರ್ಷಗಳ ಹಿಂದೆ ಇದೇ ರೀತಿ ಭೂಮಿ ಕಂಪಿಸಿ ಸಣ್ಣಪುಟ್ಟ ಬಿರುಕು ಕಾಣಿಸಿಕೊಂಡಿತ್ತು. ಆದರೆ ಈ ಬಾರಿಯ ಭೂಕಂಪನ ಬಲವಾಗಿದ್ದ ಕಾರಣ ಮತ್ತು ಅತಿ ಮಳೆಯಿಂದ ಮನೆಯೇ ಕುಸಿಯುವ ಹಂತದಲ್ಲಿದೆ ಎಂದು ಮಂಜುನಾಥ್‌ ಬೇಸರ ವ್ಯಕ್ತಪಡಿಸಿದ್ದಾರೆ.
 
2ನೇ ಮೊಣ್ಣಂಗೇರಿಯಲ್ಲೂ 
ಮತ್ತೂಂದೆಡೆ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಎರಡನೇ ಮೊಣ್ಣಂಗೇರಿಯಲ್ಲಿ  ಭೂಮಿ ಬಾಯೆ¤ರೆದಿದೆ. ಈ ಹಿಂದೆ ಬಿರುಕುಬಿಟ್ಟ ಸ್ಥಳದಲ್ಲಿಯೇ ಭೂಮಿ ಬಿರುಕು ಬಿಟ್ಟು ಆತಂಕ ಮೂಡಿಸಿದೆ.

ಬೆಟ್ಟ-ಗುಡ್ಡಗಳಿಂದ ಕೂಡಿರುವ ಪ್ರದೇಶವಾಗಿರುವ ಎರಡನೇ ಮೊಣ್ಣಂಗೇರಿ ಯಲ್ಲಿ ಭೂಮಿ ಸುಮಾರು ಎರಡು ಕಿ.ಮೀ ವರೆಗೆ ಬಿರುಕುಬಿಟ್ಟಿದೆ. ಮೂರು ದಿನಗಳ ಹಿಂದೆ ಸಣ್ಣದಾಗಿ ಬಿರುಕು ಬಿಟ್ಟಂತೆ ಗೋಚರಿಸಿದ ಭೂಮಿಯಲ್ಲಿ ಈಗ ದೊಡ್ಡದಾಗಿ ಬಿರುಕು ಕಾಣಿಸಿಕೊಂಡಿದೆ. ಕಾಂಕ್ರೀಟ್‌ ರಸ್ತೆ ಕೂಡ ಸೀಳಿ ಹೋಗಿದ್ದು, ಸುಮಾರು 4 ಇಂಚುಗಳಷ್ಟು ಅಗಲದಲ್ಲಿ ಬಿರುಕು ಬಿಟ್ಟಿದೆ. ಸ್ಥಳೀಯ ನಿವಾಸಿ ಬಾಬು ಪೂಜಾರಿ ಎಂಬುವವರ ಮನೆಯ ಅಂಗಳದ ಮೂಲಕ ಬಿರುಕು ಮೂಡಿದ್ದು, ಮನೆಗೆ ಯಾವುದೇ ಹಾನಿಯಾಗಿಲ್ಲ.

2013ರಲ್ಲಿ ಕೂಡ ಇದೇ ಪ್ರದೇಶದ ರಸ್ತೆಯಲ್ಲಿ ಭಾರೀ ಬಿರುಕು ಕಾಣಿಸಿ ಕೊಂಡು, ಕೆಲವು ಮನೆಗಳು ಬಿರುಕು ಬಿಟ್ಟಿದ್ದವು. ಆದರೆ ಈ ಬಾರಿ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿಲ್ಲ. ಸ್ಥಳಕ್ಕೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿ ರೇೆಷ್ಮಾ  ತಹಶೀಲ್ದಾರ್‌ ಕುಸುಮಾ ಹಾಗೂ ಗ್ರಾಮಾಂತರ ಠಾಣಾ—ಕಾರಿ ಚೇತನ್‌ ಕಂದಾಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅತಿವೃಷ್ಟಿ ಆತಂಕ ಇನ್ನೂ ಇದೆ 
ಜಿಲ್ಲೆಯಲ್ಲಿ ಗಾಳಿ, ಮಳೆ ಕಡಿಮೆ ಯಾಗಿದ್ದರೂ ಮಡಿಕೇರಿ ತಾಲೂಕಿನಲ್ಲಿ ನಿರಂತರ ಸುರಿಯುತ್ತಿರುವ  ಶೀತಗಾಳಿ, ಮಳೆ ಗ್ರಾಮೀಣ ಭಾಗದಲ್ಲಿ ಆತಂಕವನ್ನು ಹೆಚ್ಚಿಸಿದೆ. ಕಳೆದ ಒಂದು ತಿಂಗಳ ಮಹಾಮಳೆಯಿಂದ ಭೂಮಿ ಮೆದುವಾಗಿ ಅಪಾಯದಂಚಿನಲ್ಲಿದೆ. ಪರಿಸ್ಥಿತಿ ಹೀಗಿರುವಾಗಲೇ ನಿರಂತರ ಸಾಧಾರಣ ಮಳೆಯಾಗುತ್ತಿರುವುದರಿಂದ ಭೂಮಿಯಲ್ಲಿ ಬಿರುಕು ಹೆಚ್ಚಾಗುತ್ತಿದೆ. ಗ್ರಾಮೀಣರಲ್ಲಿ ಅವೃಷ್ಟಿಯ ಆತಂಕ ಮುಂದುವರೆದಿದ್ದು, ನುರಿತ ಅಧಿಕಾರಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ.  

ಜಿ.ಪಂ.ಅಧ್ಯಕ್ಷರ ಭೇಟಿ,ಪರಿಶೀಲನೆ
ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್‌ ಸ್ಥಳಕ್ಕೆ ಭೇಟಿ ನೀಡಿದ್ದು, ಅಂತರ್ಜಲ ಮಟ್ಟ ಹೆಚ್ಚಾಗಿ, ಜಲ ಉಕ್ಕುತ್ತಿರುವುದರಿಂದ ಭೂಮಿ ಬಿರುಕು ಬಿಡುತ್ತಿದೆ ಮತ್ತು ಮನೆಗೆ ಹಾನಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಕ್ಕಂದೂರು ಗ್ರಾ.ಪಂ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡ ಭೇಟಿ ನೀಡಿದ್ದು, ಮಂಜುನಾಥ್‌ ಅವರಿಗೆ ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ. ಆದರೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಮನೆಯನ್ನು ಕಳೆದುಕೊಳ್ಳುತ್ತಿರುವ ಬಗ್ಗೆ ಮಂಜುನಾಥ್‌ ದು:ಖ ವ್ಯಕ್ತಪಡಿಸಿದ್ದಾರೆ. 

 ಅಂತರ್ಜಲ ಕಾರಣ 
ಅಧಿಕ ಮಳೆಯಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದೆ, ಮಳೆ ಕಡಿಮೆಯಾದ ಬಳಿಕ ಯಥಾ ಸ್ಥಿತಿಗೆ ಮರಳಲಿದೆ  ಕಳೆದ ವರ್ಷದ ಮಳೆಗೂ ಹೀಗೆ ಆಗಿತ್ತು 
– ರೇಷ್ಮಾ
ಭೂ ,ಗಣಿ ವಿಜ್ಞಾನ ಇಲಾಖೆ ಅಧಿಕಾರಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.