ಡಿ. 9- 16 ಟೂರ್‌ ಆಫ್ ನೀಲಗಿರೀಸ್‌: ವಿಶ್ವದ 110 ಮಂದಿ ಭಾಗಿ


Team Udayavani, Dec 7, 2018, 12:17 PM IST

7-december-6.gif

ಮಡಿಕೇರಿ: ರೈಡ್‌ ಎ ಸೈಕಲ್‌ ಪ್ರತಿಷ್ಠಾನದ ವತಿಯಿಂದ ಆಯೋಜಿತ 11ನೇ ಆವೃತ್ತಿಯ ಟೂರ್‌ ಆಫ್ ನೀಲಗಿರೀಸ್‌ ನಲ್ಲಿ ಈ ಬಾರಿ ಸೈಕ್ಲಿಸ್‌ rಗಳು ಕುಶಾಲಗರ ಮೂಲಕ ಕೊಡಗು ಪ್ರವೇಶಿಸಲಿದ್ದು, 950 ಕಿಲೋ ಮೀಟರ್‌ ಗೂ ಅಧಿಕ ದೂರವನ್ನು ತಮ್ಮ ಸೈಕಲ್‌ ಯಾತ್ರೆಯ ಸಂದರ್ಭ ಕ್ರಮಿಸಲಿದ್ದಾರೆ.

ಕರ್ನಾಟಕ, ಕೇರಳ ಹಾಗೂ ತಮಿಳುನಾಡುಗಳಲ್ಲಿ ವ್ಯಾಪಿಸಿರುವ ಪಶ್ಚಿಮಘಟ್ಟದ, ನೀಲಗಿರೀಸ್‌ ಜೀವವೈವಿಧ್ಯತೆಯ ತಾಣಗಳಲ್ಲಿ ಈ ಸೈಕಲ್‌ ಪ್ರಯಾಣ ಸಾಗಲಿದೆ. ವಿಶ್ವದ 110 ಸೈಕಲ್‌ ಸವಾರರು 2018ರ ಟೂರ್‌ ಆಫ್ ನೀಲಗಿರೀಸ್‌ ನ ಪ್ರಯಾಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಪೈಕಿ 13 ದೇಶಗಳ 29 ಅಂತಾರಾಷ್ಟ್ರೀಯ ರೈಡರ್‌ ಗಳು (23 ಪುರುಷ ಹಾಗೂ 6 ಮಹಿಳೆಯರು) ಹಾಗೂ 17 ಮಹಿಳಾ ರೈಡರ್‌ ಗಳು ಭಾಗವಹಿಸಲಿದ್ದಾರೆ.

ಮೈಸೂರಿನಲ್ಲಿ ಆರಂಭವಾಗಲಿರುವ ಸೈಕಲ್‌ ಯಾತ್ರೆ ಹಾಸನ, ಕುಶಾಲನಗರ, ಸುಲ್ತಾನ್‌ ಬತ್ತೇರಿ, ಊಟಿ , ಕಲ್ಪೆಟ್ಟ ಮಾರ್ಗವಾಗಿ ಸಾಗಿ ಮೈಸೂರಿಗೆ ಮರಳುವುದರೊಂದಿಗೆ ಸಮಾಪನಗೊಳ್ಳಲಿದೆ. ಸೈಕಲಿಂಗ್‌ ನ 4ನೇ ದಿನ ಸುಲ್ತಾನ್‌ ಬತ್ತೇರಿಯಿಂದ ಊಟಿಗೆ ಹೋಗುವ ಮಾರ್ಗದಲ್ಲಿ ಸೈಕ್ಲಿಸ್ಟ್‌ಗಳು ಕಡಿದಾದ ಕಲ್ಹಟ್ಟಿ ಘಾಟ್‌ ಏರಬೇಕಿರುತ್ತದೆ. ಇದು ವಿಶ್ವದ ಅತ್ಯಂತ ಕಠಿಣ ಸೈಕ್ಲಿಂಗ್‌ ಆರೋಹಣಗಳಲ್ಲಿ ಒಂದಾಗಿದೆ. ಡಿಸೆಂಬರ್‌ 10 ರಂದು ಹಾಸನದಿಂದ ಪ್ರಾರಂಭವಾಗಿ ಸಕಲೇಶಪುರ ಹಾಗೂ ಸೋಮವಾರಪೇಟೆ ಮೂಲಕ 143 ಕಿ.ಮೀ ಕ್ರಮಿಸಿ ಸಂಜೆ 6 ಗಂಟೆಗೆ ಸೈಕಲಿಸ್ಟ್‌ ಗಳು ಕುಶಾಲನಗರ ತಲುಪಲಿದ್ದಾರೆ.

ಡಿಸೆಂಬರ್‌ 11ರಂದು ಬೆಳಗ್ಗೆ ಕುಶಾಲನಗರದಿಂದ ದುಬಾರೆ ಆನೆ ಶಿಬಿರ, ಗೋಣಿಕೊಪ್ಪಲು, ಕುಟ್ಟ ಹಾಗೂ ತೋಲ್ಪಟ್ಟಿ ಅರಣ್ಯ ಮೂಲಕ 145 ಕಿ.ಮೀ ಕ್ರಮಿಸಿ ಸುಲ್ತಾನ್‌ ಬತೇರಿಯನ್ನು ಸೈಕಲ್‌ ಸವಾರರು ತಲುಪಲಿದ್ದಾರೆ.

ಎಂಟು ದಿನಗಳ ಸೈಕ್ಲಿಂಗ್‌ ಪ್ರಯಾಣದಲ್ಲಿ (ಡಿಸೆಂಬರ್‌ 9 ರಿಂದ 16 ) ಸೈಕ್ಲಿಸ್ಟ್‌ ಗಳು ಹಲವಾರು ನೈಸರ್ಗಿಕ ತಾಣಗಳನ್ನು ವೀಕ್ಷಿಸಲಿದ್ದಾರೆ. ಕಡಿದಾದ ಕಣಿವೆಗಳು, ಕಾಫಿ-ಟೀ ಸಸ್ಯರಾಶಿಗಳು, ಮೂರು ವನ್ಯಜೀವಿ ಅಭಯಾರಣ್ಯಗಳು ಹಾಗೂ ಗಿರಿಶಿಖರಗಳನ್ನೂ ಹಾದುಹೋಗಲಿದ್ದಾರೆ .

ಸೈಕಲ್‌ ಮೂಲಕ ಪ್ರಕೃತಿಯ ಅನುಭವ ಪಡೆಯುವ ಅಪೂರ್ವ ಅವಕಾಶವೇ ಟೂರ್‌ ಆಫ್ ನೀಲಗಿರೀಸ್‌ ಆಗಿದ್ದು ಎಂದು ಹೇಳುವ ಈ ಸೈಕಲ್‌ ಯಾತ್ರೆಯ ಆಯೋಜಕ ಸಂಸ್ಥೆಯಾದ ರೈಡ್‌ ಎ ಸೈಕಲ್‌ ಪ್ರತಿಷ್ಠಾ ನದ ಸಹ ಸಂಸ್ಥಾಪಕ ದೀಪಕ್‌ ಮಾಜಿ ಪಾಟೀಲ್‌, ಪ್ರತಿ ಆವೃತ್ತಿಯ ಟಿಎಫ್ಎನ್‌ ಕೂಡ ರೈಡರ್‌ ಗಳ ನೆನಪಿನಲ್ಲಿ ಉಳಿಯುತ್ತದೆ. ಮತ್ತೊಮ್ಮೆ ನಿಸರ್ಗದ ಅನುಭವ ಪಡೆಯುವ ಸಲುವಾಗಿ ಮರಳಿ ಬರುತ್ತಾರೆ ಎಂದು ಹೇಳಿದರು.

ಈ ವರ್ಷ ಉಳಿದೆಲ್ಲಾ ವರ್ಷಗಳ ದಾಖಲೆಯ ಅಂತಾರಾಷ್ಟ್ರೀಯ ರೈಡರ್‌ ಗಳನ್ನು ಟಿಎಫ್ಎನ್‌ ಆಕರ್ಷಿಸುವುದರೊಂದಿಗೆ, ದೇಶ ಹಾಗೂ ವಿದೇಶದಿಂದ 17 ಮಹಿಳಾ ಸೈಕ್ಲಿಸ್ಟ್‌ ಗಳು ಸ್ಪಧಿ9ಸುತ್ತಿದ್ದಾರೆ ಎಂದು ದೀಪಕ್‌ ಮಾಜಿ ಪಾಟೀಲ್‌ ಮಾಹಿತಿ ನೀಡಿದ್ದಾರೆ. ಸಾಮಾನ್ಯ ರೀತಿಯಲ್ಲಿ ಆರಂಭ ಪಡೆದುಕೊಂಡಿದ್ದ ಟಿಎಫ್ಎನ್‌, ಭಾರತದ ಅತಿದೊಡ್ಡ ಹಾಗೂ ಪ್ರೀತಿ ಪಾತ್ರ ಬೈಕ್‌ ಟೂರ್‌ ಎನಿಸಿಕೊಂಡಿದೆ. ಆ ಮೂಲಕ ಸೈಕ್ಲಿಂಗ್‌ ಭೂಪಟದಲ್ಲಿ ಭಾರತದ ಹೆಸರೂ ಕಾಣಿಸಿಕೊಳ್ಳುವಂತೆ ಮಾಡಿದ ಹಿರಿಮೆ ಹೊಂದಿದೆ.

ಸಾಹಸದ ಅನುಭವ ನೀಡುವ ಸೈಕ್ಲಿಂಗ್‌ ಅನ್ನು ವೃತ್ತಿಪರವಾಗಿ ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಉತ್ಸಾಹಿಗಳ ಪಾಲಿಗೆ ಟಿಎಫ್ಎನ್‌ ಇತ್ತೀಚಿನ ವರ್ಷಗಳಲ್ಲಿ ಉತ್ತಮ ಆಯ್ಕೆ ಎನಿಸಿಕೊಂಡಿದೆ. ಈ ಬಾರಿಯ ಯಾತ್ರೆಯಲ್ಲಿ ಕಿರಣ್‌ ಕುಮಾರ್‌ ರಾಜು, ಪ್ರಸಕ್ತ ಇಂಡಿಯಾ ಎಂಟಿಬಿ ಚಾಂಪಿಯನ್‌ ಮತ್ತು ನವೀನ್‌ ಜಾನ್‌, ಪ್ರಸಕ್ತ ಇಂಡಿಯಾ ರೋಡ್‌ ಮಾಜಿ ಚಾಂಪಿಯನ್‌ ಸೇರಿದಂತೆ ಪ್ರಸಿದ್ಧ ಸೈಕ್ಲಿಸ್ಟ್‌ ಗಳು ಟಿಎಫ್ಎನ್‌ 2018ರಲ್ಲಿ ಪೆಡಲ್‌ ಮಾಡಲಿದ್ದಾರೆ.

1984ರ ಒಲಿಂಪಿಕ್‌ ಸೈಕ್ಲಿಂಗ್‌ ನಲ್ಲಿ ಚಿನ್ನದ ಪದಕ ವಿಜೇತರಾಗಿದ್ದ ಅಲೆಕ್ಸಿಗ್ರೇವಲ್‌ – ಟಿಎಫ್ಎನ್‌ 2017ರಲ್ಲಿ ಪೆಡಲ್‌ ಮಾಡಿದ್ದ ಅಲೆಕ್ಸಿಗ್ರೇವಲ್‌ ಈ ಆವೃತ್ತಿಯಲ್ಲಿ ಸ್ವಯಂ ಸೇವಕರಾಗಿದ್ದು , ಮಹತ್ತರ ಗುರಿಯೊಂದಿಗೆ ಭಾಗವಹಿಸುತ್ತಿರುವ ಯುವ ಪ್ರತಿಭಾನ್ವಿತ ಸವಾರರಿಗೆ ಸಲಹೆಗಾರರಾಗಲಿರುವುದು ವಿಶೇಷ ಎಂದು ರೈಡ್‌ ಎ ಸೈಕಲ್‌ ಪ್ರತಿಷ್ಠಾನದ ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ. 

ಭಾರತೀಯ ಸೈಕ್ಲಿಸ್ಟ್‌ ಗಳು ಮಾತ್ರವಲ್ಲದೆ, ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಸೈಕ್ಲಿಸ್ಟ್‌ ಗಳು ಈ ಪ್ರಯಾಣದಲ್ಲಿ ಪಾಲ್ಗೊಳ್ಳಲೆಂದೇ ಭಾರತಕ್ಕೆ ಆಗಮಿಸುತ್ತಿದ್ದಾರೆ. ಡೆನ್ಮಾರ್ಕ್‌ನಿಂದ 7 ಸೈಕ್ಲಿಸ್ಟ್‌ ಗಳು, ಅಮೆರಿಕದಿಂದ 4, ಆಸ್ಟ್ರೇಲಿಯಾ, ಜರ್ಮನಿ ಹಾಗೂ ಇಂಗ್ಲೆಂಡ್‌ ನಿಂದ ತಲಾ ಮೂರು, ಬೆಲ್ಜಿಯಂ ಮತ್ತು ಕೆನಡಾದಿಂದ ತಲಾ 2, ಆಸ್ಟ್ರಿಯಾ, ಗ್ರೀಸ್‌, ಮಲೇಷ್ಯಾ, ಫಿಲಿಫೈನ್ಸ್‌ ಮತ್ತು ಪೋಲೆಂಡ್ನಿಂದ ತಲಾ ಒಬ್ಬ ಸೈಕ್ಲಿಸ್ಟ್‌ ಗಳು ಈ ಬಾರಿ ಪಾಲ್ಗೊಳ್ಳಲಿದ್ದಾರೆ. 

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.