ಅಶುಚಿತ್ವ: ನಿರ್ಮಲ ಗ್ರಾಮ ಪ್ರಶಸ್ತಿಯನ್ನು ಹಿಂದಿರುಗಿಸಲು ಆಗ್ರಹ
Team Udayavani, Apr 7, 2017, 3:01 PM IST
ಮಡಿಕೇರಿ: ನೆಲ್ಯಹುದಿಕೆೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಡಾವಣೆೆಗಳು ಗಬ್ಬೆದ್ದು ನಾರುತ್ತಿದ್ದು, ಅಶುಚಿತ್ವದ ವಾತಾವರಣದಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆಯೆಂದು ಆತಂಕ ವ್ಯಕ್ತಪಡಿಸಿರುವ ಸ್ವತ್ಛತೆ, ಪರಿಸರ ಹಾಗೂ ನೈರ್ಮಲ್ಯ ಜಾಗೃತಿ ಸಮಿತಿ, ಗ್ರಾಮ ಪಂಚಾಯ್ತಿಗೆ ನೀಡಲಾಗಿರುವ ನಿರ್ಮಲ ಗ್ರಾಮ ಪ್ರಶಸ್ತಿಯನ್ನು ಸರಕಾರಕ್ಕೆ ಹಿಂದಿರುಗಿಸಬೇಕೆಂದು ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಹೊಸಮನೆ ವಸಂತ ಕುಮಾರ್, ಕಸ ವಿಲೇವಾರಿ ಬಗ್ಗೆ ಕಾಳಜಿ ತೋರದ ಗ್ರಾಮ ಪಂಚಾಯ್ತಿ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿದರು. ಗ್ರಾಮದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಎಲ್ಲಾ ಅಂಗಡಿ ಮಳಿಗೆಗಳಲ್ಲಿ ಪ್ಲಾಸ್ಟಿಕ್ಗಳನ್ನು ಬಳಸಲಾಗುತ್ತಿದೆ. ಚರಂಡಿಯಲ್ಲಿ ಶೌಚಾಲಯದ ನೀರು ಹರಿಯುತ್ತಿದ್ದು, ಈ ನೀರು ಕಾವೇರಿ ನದಿಯನ್ನು ಸೇರುತ್ತಿರುವುದರಿಂದ ರೋಗ ಭೀತಿ ಎದುರಾಗಿದೆ.
ಕಳೆೆದ ವರ್ಷ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಲೇರಿಯ ರೋಗ ಕಾಣಿಸಿಕೊಂಡಿತ್ತು. ಈ ವರ್ಷವೂ ಕಾವೇರಿ ನದಿ ಕಲುಷಿತಗೊಂಡು ಕಪ್ಪು ಬಣ್ಣಕ್ಕೆ ಪರಿವರ್ತನೆಯಾಗಿದ್ದು, ಈ ನೀರನ್ನು ಬಳಸುವವರಿಗೆ ಚರ್ಮದ ಕಾಯಿಲೆ ಕಾಡಿದೆ. ನೆಲ್ಯಹುದಿಕೇರಿ ಒಂದು ಕೊಳಚೆ ಪ್ರದೇಶವಾಗಿ ಮಾರ್ಪಟ್ಟಿದ್ದು, ಅಕ್ಕಪಕ್ಕದ ಗ್ರಾಮಗಳ ನಿವಾಸಿಗಳು ಕೂಡ ಕಸದ ರಾಶಿಯನ್ನು ತಂದು ಹಾಕುತ್ತಿದ್ದಾರೆ. ಎಲ್ಲೆಂದರಲ್ಲಿ ಮೀನು ಮಾಂಸದ ತ್ಯಾಜ್ಯ ಬಿದ್ದಿದ್ದು, ನೊಣಗಳ ಹಾವಳಿ ಹೆಚ್ಚಾಗಿದೆ ಎಂದರು.
ಇದರಿಂದ ಹೊಟೇಲ್ಗಳ ವ್ಯಾಪಾರ ವಹಿವಾಟಿಗೂ ಅಡ್ಡಿಯಾಗುತ್ತಿದ್ದು, ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆಗಳಿದೆ ಎಂದು ವಸಂತ ಕುಮಾರ್ ತಿಳಿಸಿದರು.
ಇತ್ತೀಚೆಗೆ ನೆಲ್ಯಹುದಿಕೇರಿ ಗ್ರಾಮ ಪಂಚಾಯ್ತಿಗೆ ನಿರ್ಮಲ ಗ್ರಾಮ ಪ್ರಶಸ್ತಿ ಲಭ್ಯವಾಗಿದ್ದು, ಗ್ರಾಮದಲ್ಲಿ ಅಶುಚಿತ್ವದ ವಾತಾವರಣ ಇರುವುದರಿಂದ ಈ ಪ್ರಶಸ್ತಿಯನ್ನು ಹಿಂದಿರುಗಿಸುವುದು ಸೂಕ್ತವೆಂದು ಅಭಿಪ್ರಾಯಪಟ್ಟರು.
ಕಂದಾಯ ಅಧಿಕಾರಿಗಳು ಕಸ ವಿಲೇವಾರಿಗೆ ಸೂಕ್ತ ಜಾಗವನ್ನು ಗುರುತಿಸಿ ನೀಡಬೇಕೆಂದು ಒತ್ತಾಯಿಸಿದ ಅವರು, ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾಡಳಿತ ಶುಚಿತ್ವಕ್ಕೆ ಆದ್ಯತೆ ನೀಡದಿದ್ದಲ್ಲಿ ಪಕ್ಷಾತೀತವಾಗಿ ತೀವ್ರ ರೀತಿಯ ಹೋರಾಟವನ್ನು ರೂಪಿಸುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಎ.ಕೆ.ಅಬ್ದುಲ್ಲ, ಉಪಾಧ್ಯಕ್ಷರಾದ ಗ್ರೇಸಿ ಮಣಿ, ಪ್ರಮುಖರಾದ ಮಣಿ ಮೊಹಮ್ಮದ್, ಟಿ.ಸಿ. ಅಶೋಕ್ ಹಾಗೂ ಫ್ರಾನ್ಸಿಸ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್