ಮಡಿಕೇರಿ – ಮಂಗಳೂರು ಹೆದ್ದಾರಿಯಲ್ಲಿ ಇಂದು ರಾತ್ರಿ ವಾಹನ ಸಂಚಾರ ಬಂದ್
Team Udayavani, Aug 9, 2022, 9:06 PM IST
ಅರಂತೋಡು: ಮಡಿಕೇರಿ- ಮಂಗಳೂರು ಹೆದ್ದಾರಿಯಲ್ಲಿ ಮಣ್ಣು ಕುಸಿತದ ಪರಿಣಾಮ ಇಂದು ರಾತ್ರಿ 9 ಗಂಟೆಯಿಂದ ನಾಳೆ ಬೆಳಗ್ಗೆ 6.30 ಗಂಟೆವರೆಗೆ ಎಲ್ಲಾ ವಾಹನ ಸಂಚಾರ ಬಂದ್ ಮಾಡಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮದೆನಾಡು ಬಳಿ ಗುಡ್ಡ ಕುಸಿತದ ಆತಂಕ ಎದುರಾಗಿದ್ದು,ರಾಷ್ಟ್ರೀಯ ಹೆದ್ದಾರಿ ಸಹಾಯಕ ಇಂಜಿನಿಯರ್ ಅವರಿಂದ ಕೊಡಗು ಜಿಲ್ಲಾಧಿಕಾರಿಗೆ ಮನವಿ ಮಾಡಲಾದ ಹಿನ್ನಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಇದನ್ನೂ ಓದಿ: ಸಿಎಂ ಬದಲಾವಣೆ ವದಂತಿ: ಊಹಾಪೋಹಗಳ ಮೇಲೆ ಕಾಂಗ್ರೆಸ್ ರಾಜಕಾರಣ; ಸಚಿವ ಸುನಿಲ್ ಕುಮಾರ್
ಮದೆನಾಡು ಬಳಿ ಗುಡ್ಡ ಕುಸಿತದ ಆತಂಕ ಹಿನ್ನೆಲೆ ವಾಹನ ಪ್ರಯಾಣಿಕರಿಗೆ ಅಪಾಯ ಸಾಧ್ಯತೆ ಇದ್ದು, ರಸ್ತೆ ಸಂಚಾರ ಬಂದ್ ಮಾಡಿ ಆದೇಶ ನೀಡಿದ್ದಾರೆ.