ಕಾಡಾನೆ ಹಾವಳಿ: ಬಿಟ್ಟಂಗಾಲ ಗ್ರಾಮಸ್ಥರ ಪ್ರತಿಭಟನೆ


Team Udayavani, Sep 28, 2019, 5:09 AM IST

Z-PROTEST

ಮಡಿಕೇರಿ: ಬಿಟ್ಟಂಗಾಲ ಗ್ರಾಮ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದಿಂದ ನಿರಂತರ ಕಾಡಾನೆ ಹಾವಳಿಯಿಂದ ರೈತರುಕಂಗಾಲಾಗಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಹಾವಳಿ ತಡೆಗಟ್ಟದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರು ಪಟ್ಟಣದ ಗಡಿಯಾರ ಕಂಬದ ಬಳಿಯಿಂದಗಾಂಧಿನಗರದಲ್ಲಿರುವಅರಣ್ಯ ಭವನದವರಗೆ ಮೆರವಣಿಗೆ ನಡೆಸಿದರಲ್ಲದೆ, ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಸ್ಥರ ಪರವಾಗಿ ಮಾತನಾಡಿದ ಪುಡಿಯಂಡ ರಾಮಚ್ಚ ಅವರು , ಬಿಟ್ಟಂಗಾಲ ಗ್ರಾಮದಲ್ಲಿಇಂದು ಕೂಡ ಐದಾರು ಕಾಡಾನೆಗಳು ನಿರಂತರ ಬೆಳೆ ಹಾನಿ ಮಾಡುತ್ತಿದ್ದು ಭತ್ತದ ಕೃಷಿ, ಕಾಫಿ ಗಿಡ, ಅಡಿಕೆ, ಬಾಳೆ ಗಿಡ ಮತ್ತು ಫ‌ಸಲು ನಾಶವಾಗಿದೆ. ಇದರಿಂದಾಗಿ ಮುಂದೆ ಯಾವ ಕೃಷಿ ಮಾಡಬೇಕು ಮತ್ತು ಮುಂದಿನ ಭವಿಷ್ಯದ ಬಗ್ಗೆ ಚಿಂತಿಸುವ ಸ್ಥಿತಿ ಬಂದಿದೆ ಎಂದರು.

ಕಳೆದ ಜೂನ್‌ ತಿಂಗಳಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ಕಾಡಾನೆ ದಾಳಿ ನಡೆಸಿ ಬಾಲಕ ಗಾಯಗೊಂಡಿದ್ದು, ಆತನಿಗೆಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಅರಣ್ಯ ಅಧಿಕಾರಿಗಳು ಕಾಡಾನೆ ಹಾವಳಿ ತಡೆಗಟ್ಟುವಲ್ಲಿಕಾಳಜಿ ತೋರುತ್ತಿಲ್ಲ ಎಂದು ಪುಡಿಯಂಡ ರಾಮಚ್ಚ ಅವರು ಆರೋಪಿಸಿದರು.

ಪ್ರತಿಭಟನಾಕಾರರಿಂದ ಮನವಿ ಸ್ವಿಕರಿಸಿದ ಅರಣ್ಯ ವಲಯಧಿಕಾರಿ ಗೋಪಾಲ್‌ ಅವರು ಮಾತನಾಡಿ, ಕಾಡಾನೆಗಳನ್ನು ಓಡಿಸಲು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಆದರೆ ಅವುಗಳನ್ನು ಓಡಿಸುವಲ್ಲಿ ಅನೇಕ ಅಡೆ ತಡೆ ಎದುರಾಗುತ್ತಿದೆ.ಆದ್ದರಿಂದ ಶಾಲಾ ಬಾಲಕನ ಮೇಲೆ ಆನೆ ದಾಳಿ ಬಳಿಕ ಹಿರಿಯ ಅಧಿಕಾರಿಗಳ ಮೂಲಕ ನಾವು ಸರಕಾರಕ್ಕೆ ಮನವಿ ಸಲ್ಲಿಸಿ ಆನೆಗಳ ಸ್ಥಳಾಂತರಕ್ಕೆಮನವಿ ಮಾಡಿದ್ದೇವೆ. ಸರಕಾರ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ಮಾತ್ರ ಅದಕ್ಕೆ ಪರಿಹಾರಕಂಡು ಹಿಡಿಯಲು ಸಾಧ್ಯ ಎಂದು ಹೇಳಿದರು.

ಬಿಟ್ಟಂಗಾಲ, ಕೊಳತೋಡು, ನಲ್ವತ್ತೂಕ್ಲು ಗ್ರಾಮದಗಳಲ್ಲಿ ಓಡಾಡುವ ಐದಾರು ಆನೆಗಳನ್ನು ಸ್ಥಳಾಂತರ ಮಾಡುವ ವಿಚಾರದಲ್ಲಿಸ್ಥಳೀಯ ಶಾಸಕರ ಗಮನಕ್ಕೂ ತರಲಾಗಿದೆ ಎಂದ ಗೋಪಾಲ್‌ ಅವರು, ಪರಿಹಾರ ವಿತರಣೆ ಆಗಿಲ್ಲ ಎಂಬ ವಿಚಾರ ಸರಿಯಲ್ಲ. ಸರಕಾರದಿಂದ ಹಣ ಬಿಡುಗಡೆಯಾದಂತೆ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಅನುಮತಿ ದೊರೆಯುವವರಗೆ ರೈತರು ಸಹಕಾರ ನೀಡಬೇಕೆಂದು ಅವರು ವಿನಂತಿಸಿದರು

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.