ಪತಿಗಾಗಿ ಇಬ್ಬರು ಪತ್ನಿಯರ ಜಗಳ: ತಂಗಿಯನ್ನೇ ಕೊಲೆಗೈದು ಪರಾರಿಯಾದ ಸಹೋದರಿ!
Team Udayavani, Jan 5, 2020, 10:31 AM IST
ವಿರಾಜಪೇಟೆ: ಇಬ್ಬರು ಪತ್ನಿಯರ ಜಗಳ ಒಬ್ಬಾಕೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ವಿರಾಜಪೇಟೆಯ ಬಳಂಜಬೆರೆಯಲ್ಲಿ ನಡೆದಿದೆ.
ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕಿನ ಬಳಂಜಬೆರೆಯ ಕಾಫಿ ಎಸ್ಟೇಟ್ ನ ಲೈನ್ ಮನೆಯಲ್ಲಿ ಈ ಕೊಲೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ವಶಿಕಾ ದೇವಿ (27) ಎಂದು ಗುರುತಿಸಲಾಗಿದೆ. ಆಕೆಯ ಸಹೋದರಿ ಅಶಿಕಾ ಕೊಲೆ ಗೈದ ಆರೋಪಿಯಾಗಿದ್ದು, ಆಕೆ ಪರಾರಿಯಾಗಿದ್ದಾಳೆ.
ಕಾಫಿ ತೋಟದಲ್ಲಿ ಕೆಲಸ ಮಾಡುವ ಜಾರ್ಖಂಡ್ ಮೂಲದ ದಯಾನಂದ್ ಎಂಬಾತ ಕಳೆದ ಏಳು ವರ್ಷಗಳ ಹಿಂದೆ ಅಶಿಕಾಳನ್ನು ಮದುವೆಯಾಗಿದ್ದ. ಇದಾದ ಕೆಲವೇ ವರ್ಷಗಳ ನಂತರ ಅಶಿಕಾಳ ಸಹೋದರಿ ವಶಿಕಾಳನ್ನು ಪ್ರೀತಿಸಿ ವಿವಾಹವಾಗಿದ್ದ. ಈ ಮೂವರೂ ಒಂದೇ ಮನೆಯಲ್ಲಿ ಸಂಸಾರ ನಡೆಸುತ್ತಿದ್ದರು.
ಇತ್ತೀಚೆಗೆ ಕೆಲ ದಿನಗಳಿಂದ ಅಶಿಕಾ ಮತ್ತು ವಶಿಕಾ ನಡುವೆ ಜಗಳವಾಗುತ್ತಿತ್ತು. ಶನಿವಾರ ಸಂಜೆ ಕಾಫಿ ತೋಟದಿಂದ ಬಂದ ನಂತರ ಮನೆಯಲ್ಲಿ ಇವರಿಬ್ಬರಿಗೂ ಜಗಳವಾಗಿದೆ. ಅದು ವಿಪರೀತಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಅಕ್ಕ ಅಶಿಕಾ ತಂಗಿ ವಶಿಕಾಳನ್ನು ಕತ್ತಿಯನ್ನು ಕಡಿದು ಕೊಲೆಗೈದು ಪರಾರಿಯಾಗಿದ್ದಾಳೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ