ಸಾವು ಗೆದ್ದು ಬಂದವರ ಮಡುಗಟ್ಟಿದ ಮಾತು


Team Udayavani, Aug 21, 2018, 6:25 AM IST

kodagu-floodheavy-rain.jpg

ಮಡಿಕೇರಿ: ಕೊಡಗಿನಲ್ಲಿ ಸುರಿದ ಮಳೆ ದಿಗ್ಬಂಧನದಿಂದ ಮುಕ್ಕೋಡ್ಲು, ಮಕ್ಕಂದೂರು, ಕಾಲೂರು ಗ್ರಾಮಗಳು ಅಪಾರ ಹಾನಿಗೆ ಒಳಗಾಗಿದ್ದು, ಮೂರು ದಿನದಿಂದ ಮಹಾಮಳೆಗೆ ಸಿಲುಕಿ ಬಿಡಿಸಿಕೊಂಡು ಬಂದವರ ಸ್ಥಿತಿ ರೋಚಕವಾಗಿದೆ. ಪ್ರವಾಹದ ನಡುವೆ ತಮ್ಮ ಮನೆಯಲ್ಲಿ ಸುಮಾರು 100ಕ್ಕೂ ಅಧಿಕ ಗ್ರಾಮಸ್ಥರೊಂದಿಗೆ ಸಿಲುಕಿಕೊಂಡಿದ್ದ ಜಿಪಂ ಮಾಜಿ ಅಧ್ಯಕ್ಷ ರವಿ ಕುಶಾಲಪ್ಪ ಅವರ ಪ್ರಕಾರ ಯಾರೂ ಕೂಡ ಅವರನ್ನು ರಕ್ಷಿಸಿಲ್ಲ. ಜೀವ ಉಳಿಸಿಕೊಳ್ಳಲು ಬೆಟ್ಟ ಗುಡ್ಡ, ಕಾಡು ಮೇಡುಗಳನ್ನು ದಾಟಿ ಡಾಂಬರು ರಸ್ತೆಗೆ ತಲುಪಿದ ಬಳಿಕವಷ್ಟೇ ಗ್ರಾಮಸ್ಥರನ್ನು ಕಾರ್ಯಾಚರಣೆ ತಂಡ ಭೇಟಿಯಾಗಿದೆ.

ಜಲಾವೃತವಾದ ಗ್ರಾಮ: ಆ.15 ರಿಂದ ಮಹಾಮಳೆ ಪ್ರತಿ ಗಂಟೆಗೂ ಹೆಚ್ಚುತ್ತಾ ಎರಡು ದಿನ ನಿರಂತವಾಯಿತು. ಗ್ರಾಮಕ್ಕೆ ಗ್ರಾಮವೇ ಜಲಾವೃತವಾಯಿತು. ಅಪಾಯವನ್ನು ಅರಿತ ಸುಮಾರು 74 ಮಂದಿ ತಂತಿಪಾಲದ ದೊಡ್ಡ ಗುಡ್ಡದ ಮೇಲೆ ಹತ್ತಿ ಕುಳಿತರು. ಜಿಲ್ಲಾಡಳಿತದಿಂದ ಕಾರ್ಯಾಚರಣೆ ಮಾಡದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಕುಶಾಲಪ್ಪ ಅವರ ಮನೆಯಲ್ಲಿ ಆಶ್ರಯ ಕಲ್ಪಿಸಿಕೊಡಲಾಯಿತು.

“ತಮ್ಮ ಮನೆಯಲ್ಲೇ ಎಲ್ಲರಿಗೂ ಊಟದ ವ್ಯವಸ್ಥೆ  ಮಾಡಲಾಯಿತು. ಗ್ರಾಮದಲ್ಲಿ ಮಳೆ ನಿಲ್ಲದೆ, ಕೆಸರು ನೀರಿನಿಂದ ದ್ವೀಪದಂತಾದಾಗ ಇನ್ನು ಜಿಲ್ಲಾಡಳಿತವನ್ನು ಕಾಯುವುದು ಬೇಡವೆಂದು ಧೈರ್ಯ ಮಾಡಿ ಗ್ರಾಮದಿಂದ ಹೊರ ನಡೆಯಲು ಪ್ರಾರಂಭಿಸಿದೆವು’ ಎನ್ನುತ್ತಾರೆ ರವಿ ಕುಶಾಲಪ್ಪ.

ಪ್ರಯಾಣ: ಹಗ್ಗ ಹಾಗೂ ಮರ ಕತ್ತರಿಸುವ ಯಂತ್ರದೊಂದಿಗೆ ಉಟ್ಟ ಬಟ್ಟೆಯಲ್ಲೆ ಎಲ್ಲರೂ ಹೊರಟೆವು. ಪ್ರವಾಹದಲ್ಲಿ ಸಂಪರ್ಕ ಸೇತುವೆ ಮುಳುಗಿದ್ದರಿಂದ ಹಗ್ಗದ ಮೂಲಕ ಸೇತುವೆ ದಾಟಿ 3 ಕಿ.ಮೀ. ದೂರ ನಡೆದೆವು. ಆ ಮಾರ್ಗದಲ್ಲಿ ದೊಡ್ಡ ಪ್ರವಾಹ ಹರಿಯುತ್ತಿದ್ದುದರಿಂದ ಮರವೊಂದನ್ನು ಬೀಳಿಸಿ ಆ ಮರದ ಆಸರೆಯಿಂದ ದಾಟಿದೆವು. ಅನಂತರ ಕೋಟೆ ಬೆಟ್ಟವನ್ನು ಏರಲು ಆರಂಭಿಸಿದೆವು. ಕೋಟೆ ಬೆಟ್ಟಕ್ಕೆ ಬಡಿಯುತ್ತಿದ್ದ ಮಳೆ ಗಾಳಿ ಸಹಿಸಿಕೊಂಡು ನೂರಕ್ಕೂ ಅಧಿಕ ಮಂದಿ ಬೆಟ್ಟವೇರಿ ಎರಡು ಹೊಳೆಗಳನ್ನು ದಾಟಿ ಹೇಗೋ ಮಾದಾಪುರ -ಸೋಮವಾರಪೇಟೆಯ ಇಗ್ಗೊàಡ್ಲು ಗ್ರಾಮದ ಡಾಂಬರಿನ ರಸ್ತೆಗೆ ಬಂದೆವು. ಅಲ್ಲಿ ಕಾರ್ಯಾಚರಣೆ ತಂಡಗಳು ಸ್ವಾಗತಿಸಿದವು ಎಂದು ಕುಶಾಲಪ್ಪ ತಮ್ಮ ಅನುಭವ ವಿವರಿಸಿದರು.

ಅಸುನೀಗಿದ ಮಗು: ಇಷ್ಟೆಲ್ಲ ಕಷ್ಟಪಟ್ಟು ನಾವು ಸಾವಿನ ದವಡೆಯಿಂದ ಪಾರಾಗಿದ್ದೇವೆ. ಆದರೆ, ಕಾರ್ಯಾಚರಣೆ ಪಡೆಗಳು ನಾವೇ ಗ್ರಾಮಸ್ಥರನ್ನು ರಕ್ಷಿಸಿದ್ದೇವೆಂದು ಹೇಳಿಕೊಳ್ಳುತ್ತಿರುವುದು ಬೇಸರದ ಸಂಗತಿ. ಮಾರ್ಗ ಮಧ್ಯೆ ಪುಟ್ಟ ಮಗುವೊಂದು ಅಸುನೀಗಿರುವುದು ವಿಷಾದಕರವೆಂದು ಕುಶಾಲಪ್ಪಕಣ್ಣೀರು ಹಾಕಿದರು.

ಮಕ್ಕಂದೂರು, ಮುಕ್ಕೋಡ್ಲು, ಶಾಂತಳ್ಳಿ ಗ್ರಾಮಗಳು ಸಂಪೂರ್ಣವಾಗಿ ನಾಶವಾಗಿದ್ದು, ಕೇಂದ್ರ, ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಪರಿಹಾರ  ಒದಗಿಸಬೇಕೆಂದು ಅವರು ಮನವಿ ಮಾಡಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.