ವಿಶ್ವ ರಕ್ತ ದಾನಿಗಳ ದಿನಾಚರಣೆ
Team Udayavani, Jun 29, 2019, 5:20 AM IST
ಸೋಮವಾರಪೇಟೆ: ತಥಾಸ್ತು ಸಾತ್ವಿಕ ಸಂಸ್ಥೆ ಆಶ್ರಯದಲ್ಲಿ, ಮಡಿಕೇರಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ವಿಶ್ವ ರಕ್ತ ದಾನಿಗಳ ದಿನಾಚರಣೆ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆದ ರಕ್ತದಾನ ಶಿಬಿರಕ್ಕೆ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಶಿವಪ್ರಸಾದ್ ಚಾಲನೆ ನೀಡಿ ಅವರು ಮಾತನಾಡಿದರು.
ಆರೋಗ್ಯವಂತ ಜನರು ಮೂರು ತಿಂಗಳಿಗೊಮ್ಮೆ ರಕ್ತ ದಾನ ಮಾಡುವುದರಿಂದ ಮತ್ತೂಂದು ಜೀವ ಉಳಿಸುವ ಕಾರ್ಯವಾಗುವುದು. ಈ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕೆಂದು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಶಿವಮೂರ್ತಿ ಹೇಳಿದರು
ಪ್ರಪಂಚದಲ್ಲಿ ತಂತ್ರಜ್ಞಾನ ಸಾಕಷ್ಟು ಮುಂದುವರೆದರೂ, ಇಂದಿಗೂ ಕೃತಕ ರಕ್ತದ ಉತ್ಪಾದನೆ ಸಾಧ್ಯವಾಗಿಲ್ಲ. ಕೆಲವು ತುರ್ತು ಸಮಯದಲ್ಲಿ ರಕ್ತದ ಕೊರತೆಯಿಂದ ಸಾಕಷ್ಟು ಜೀವ ಹಾನಿಯಾಗುತ್ತಿದೆ. ಆದುದ್ದರಿಂದ ಜನರು ರಕ್ತದಾನದ ಮೂಲಕ ಸಮಸ್ಯೆ ಪರಿಹರಿಸಬೇಕೆಂದರು.
ರಕ್ತ ನಿಧಿ ಕೇಂದ್ರದ ವೈದ್ಯರಾದ ಕರುಂಬಯ್ಯ ಮಾತನಾಡಿ, ನಿಗದಿತ ಸಮಯದಲ್ಲಿ ಎಲ್ಲರೂ ರಕ್ತ ದಾನ ಮಾಡಬಹುದು. ಇದು ನಮ್ಮ ಆರೋಗ್ಯ ಸುಧಾರಣೆಯೊಂದಿಗೆ ಮತ್ತೂಂದು ಜೀವ ಉಳಿಸಲು ಸಹಕಾರಿಯಾಗಿದೆ. ಸಂಘ ಸಂಸ್ಥೆಗಳು ರಕ್ತ ಸಂಗ್ರಹದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಕ್ತ ಸಂಗ್ರಹಕ್ಕೆ ಮುಂದಾಗಿರುವುದು ಉತ್ತಮ ಕಾರ್ಯ ಎಂದರು. ವೇದಿಕೆಯಲ್ಲಿ ಸಂಸ್ಥೆಯ ಕಾನೂನು ಸಲಹೆಗಾರರಾದ ರೂಪಾ ಕಾಳಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು