ಮಡಿಕೇರಿ: ವೇಷ ಧರಿಸಿ ದೇವಿಗೆ ಹರಕೆ ಒಪ್ಪಿಸುವ ಬೇಡು ಹಬ್ಬ ಸಂಪನ್ನ


Team Udayavani, Apr 26, 2019, 6:20 AM IST

vesha-darisi

ಮಡಿಕೇರಿ: ಗ್ರಾಮಸ್ಥರು ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಹೆಣ್ಣು, ಗಂಡಿನ ಹಾಗೂ ಗಂಡು, ಹೆಣ್ಣಿನ ವೇಷ ಸೇರಿದಂತೆ ವಿವಿಧ ವೇಷಗಳನ್ನು ಧರಿಸಿ ಭದ್ರಕಾಳಿ ದೇವಿಗೆ ಹರಕೆಯನ್ನು ಒಪ್ಪಿಸುವ ಚೆಂಬೆಬೆಳ್ಳೂರು ಬೇಡು ಹಬ್ಬ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತ್ತು.

ವೀರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾಮ ಪಂಚಾಯ್ತಿಯ ಗ್ರಾಮ ದೇವತೆಯಾದ ಶೀ ಭದ್ರಕಾಳಿ ದೇವಿಯ ವಾರ್ಷಿಕ ಮಹೋತ್ಸವ ಹಲವು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಏ.14 ರಂದು ಊರಿಗೆ ಕಟ್ಟು ಬೀಳುವುದರೊಂದಿಗೆ ಆರಂಭವಾಯಿತು. ಕಳೆದ ಶುಕ್ರವಾರದಂದು ಉಪವಾಸ ವ್ರತಾಚರಣೆ, ದೇವರ ನೃತ್ಯ ಬಲಿ, ತೆರೆಗಳು ನಡೆದ ಬಳಿಕ, ದೇವರ ಕುದುರೆಯನ್ನು ದೇವಳಕ್ಕೆ ತರುವ ಧಾರ್ಮಿಕ ಕಾರ್ಯಗಳೊಂದಿಗೆ ಮಂಗಳವಾರದಂದು ವ್ರತಧಾರಿಗಳು ವಿವಿಧ ವೇಷ ಧ‌ರಿಸಿ ತಮ್ಮ ಹರಕೆ ಒಪ್ಪಿಸಿದರು.

ಸೋಮವಾರದಿಂದಲೆ ವ್ರತಧಾರಿಗಳು ತಮ್ಮ ವೇಷಭೂಷಣಗಳನ್ನು ಸಿದ್ಧಪಡಿಸಿಕೊಂಡು ಸಂಜೆಯ ವೇಳೆೆ ವೇಷಧ‌ರಿಸಿ ಮನೆಮನೆಗೆ ತೆರಳಿ ಬೇಡು ಕಳಿಯನ್ನು ಪ್ರದರ್ಶನ ಮಾಡುತ್ತಾ ಮನೆಯವರು ನೀಡಿದ ಕಿರು ಕಾಣಿಕೆಯನ್ನು ಸ್ವೀಕರಿಸಿದರು.

ಗುರುವಾರದ ದಿನವಾದ ಇಂದು ಹರಿಕೆಯನ್ನು ಒಪ್ಪಿಸುವ ಗಂಡು ಮಕ್ಕಳು, ಹೆಣ್ಣಿನ ವೇಷ ಧ‌ರಿಸಿ ಹಾಗೂ ಹೆಣ್ಣು ಮಕ್ಕಳು ಗಂಡು ಮಕ್ಕಳ ವೇಷ ಧ‌ರಿಸಿ ದೇವಾಲಯಕ್ಕೆ ಆಗಮಿಸಿ ಹರಕೆ ಒಪ್ಪಿಸಿದರು. ಮಕ್ಕಳಿಗೆ ವಿವಾಹಾದಿಗಳು ನಡೆಯಬೇಕೆಂದು ಮತ್ತು ಇತರ ದೋಷಗಳನ್ನು ನೀಗಿಸುವಂತೆ ಹರಕೆಯನ್ನು ದೇವಿಗೆ ಒಪ್ಪಿಸುತ್ತಾರೆ ಎಂದು ಗ್ರಾಮಸ್ಥರಾದ ಸಿ. ಅಯ್ಯಪ್ಪ ಅವರು ತಿಳಿಸುತ್ತಾರೆ.

ದೇವಾಲಯದಲ್ಲಿ ನಡೆದ ಬೇಡು ಹಬ್ಬದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದು, ನೂರಕ್ಕೂ ಹೆಚ್ಚಿನ ವ್ರತಧಾರಿಗಳು ವಿವಿಧ‌ ವೇಷ ಧ‌ರಿಸಿ ಹರಕೆಯನ್ನು ಸಮರ್ಪಣೆ ಮಾಡಿದರು.

ಗ್ರಾಮದಲ್ಲಿ ನೆಲೆಸಿರುವ ಪ್ರಮುಖ ಕುಟುಂಬಗಳಾದ ಬಲ್ಯಮಂಡ, ಕೂಳುವಂಡ ಮತ್ತು ಅಚ್ಚನಿಕಂಡ ಮನೆತನಕ್ಕೆ ಸೇರಿದ ಕುಟುಂಬಸ್ಥರು ದೇವಾಲಯದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಮಂಡೇಪಂಡ ಮುತ್ತಪ್ಪ ಅವರು ದೇವಾಲಯದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.