ಕೊಕ್ಕಡ: ಕಾರು ಮತ್ತು ಶಾಲಾ ವಿದ್ಯಾರ್ಥಿಗಳ ಪ್ರವಾಸದ ಬಸ್ ಅಫಘಾತ
Team Udayavani, Dec 6, 2019, 11:45 AM IST
ಕೊಕ್ಕಡ : ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ತಿರುವಿನಲ್ಲಿ ಕಾರು ಮತ್ತು ಶಾಲಾ ವಿದ್ಯಾರ್ಥಿಗಳ ಪ್ರವಾಸದ ಬಸ್ ನಡುವೆ ಶುಕ್ರವಾರದಂದು ಅಫಘಾತ ಸಂಭವಿಸಿದ್ದು, ಘಟನೆಯಿಂದಾಗಿ ಬಸ್ಸಿನಲ್ಲಿದ್ದ 8 ಮಂದಿ ವಿದ್ಯಾರ್ಥಿಗಳು ಹಾಗು ಓರ್ವ ಅಧ್ಯಾಪಕ ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ 3 ಖಾಸಗಿ ಬಸ್ ಗಳ ಪೈಕಿ ಒಂದು ಬಸ್ ಧರ್ಮಸ್ಥಳದಿಂದ ಬೇಲೂರಿಗೆ ಹೋಗುವ ವೇಳೆ ಕೊಕ್ಕಡದ ಕಾಪಿನಬಾಗಿಲು ಬಳಿ ಕಾರೊಂದಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ . ಗಾಯಗೊಂಡ 8 ಮಂದಿ ವಿದ್ಯಾರ್ಥಿಗಳು ಹಾಗು ಅಧ್ಯಾಪಕರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಅಪಘಾತದ ವೇಳೆ ತಮಿಳುನಾಡಿನ ಚಿತ್ತೂರು ಜಿಲ್ಲೆ ತಿರುಪತಿಯ ಕಾರು ಬಸ್ ನಡಿಗೆ ಬಿದ್ದು ಚಾಲಕ ಪ್ರಸಾದ್ (38) ಗಾಯಗೊಂಡಿದ್ದಾರೆ. ಕಾರಿನ ಮುಂಭಾಗದ ಮೇಲೆ ಬಸ್ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಜೀವಾಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ