ಬೋರ್ವೆಲ್ ತಡೆಗೋಡೆ ಪರಿಶೀಲನೆ
ಮಡೇರಹಳ್ಳಿ ಕೆರೆಗೆ ಕೆ.ಸಿ.ವ್ಯಾಲಿ ನೀರು; ಎಂಟು ಕೊಳವೆ ಬಾವಿಗಳಿಗೆ ತಡೆಗೋಡೆ: ಜಿಲ್ಲಾಧಿಕಾರಿ
Team Udayavani, Nov 14, 2019, 5:50 PM IST
ಕೋಲಾರ: ಕೆ.ಸಿ. ವ್ಯಾಲಿ ಯೋಜನೆಯ ನೀರು ನಗರ ಹೊರವಲಯದ ಮಡೇರಹಳ್ಳಿ ಕೆರೆಗೆ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ನಗರಸಭೆಗೆ ಸೇರಿದ ಅಲ್ಲಿನ ಕೊಳವೆ ಬಾವಿಗಳಿಗೆ ನೇರವಾಗಿ ಕೆಸಿವ್ಯಾಲಿ ನೀರು ಸೇರದಂತೆ ನಗರಸಭೆಯಿಂದ ತಡೆಗೋಡೆ ನಿರ್ಮಿಸಲಾಗುತ್ತಿದ್ದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿದರು.
ಕೋಲಾರ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಮಡೇರಹಳ್ಳಿ, ಅಮ್ಮೇ ರಹಳ್ಳಿ ಹಾಗೂ ಕೋಲಾರಮ್ಮ ಕೆರೆಗೆ ಭೇಟಿ ನೀಡಿದ್ದರು. ಈ ಕೆರೆಗಳಿಂದಲೇ ನಗರಕ್ಕೆ ನೀರು ಸರಬರಾಜಾಗುತ್ತಿರುವುದರಿಂದ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಬೋರ್ವೆಲ್ಗಳ ಸುತ್ತಲೂ ತಡೆ ಗೋಡೆ ನಿರ್ಮಿಸ ಲಾಗುತ್ತಿದ್ದು, ಅವುಗಳ ಕಾಮಗಾರಿ ಪರಿಶೀಲಿಸಿದರು.
ಬೋರ್ವೆಲ್ಗೆ ನೇರವಾಗಿ ನೀರು ಸೇರಲ್ಲ: ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ಕೆಸಿ ವ್ಯಾಲಿ ನೀರು ಮಡೇರಹಳ್ಳಿ ಕೆರೆಗೂ ಬರುತ್ತಿದೆ. ನಗರಸಭೆಗೆ ಪ್ರಮುಖ ವಾಗಿ ಮಡೇರಹಳ್ಳಿ, ಅಮ್ಮೇರಹಳ್ಳಿ, ಕೋಲಾ ರಮ್ಮ ಕೆರೆಯಲ್ಲಿ ಬೋರ್ವೆಲ್ಗಳಿವೆ. ಬೋರ್ವೆಲ್ಗಳಿಗೆ ನೇರವಾಗಿ ಕೆಸಿ ವ್ಯಾಲಿ ನೀರು ಹರಿಯದಂತೆ ಕ್ರಮವಹಿಸಿ ನಗರಸಭೆಯಿಂದ ಬೋರ್ವೆಲ್ಗಳಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
8 ಬೋರ್ವೆಲ್ಗಳು ಕಾರ್ಯನಿರ್ವಹಣೆ: ಕೆರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋರ್ ವೆಲ್ಗಳಿಗೆ ಇದೀಗ ತಡೆಗೋಡೆ ನಿರ್ಮಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕೆರೆಯಂಗಳದಲ್ಲಿರುವ ಕೊಳವೆಬಾವಿ ಗಳನ್ನೂ ಸ್ಥಳಾಂತರಿಸಲಾಗುವುದು. ಸದ್ಯ ಮಡೇರಹಳ್ಳಿ ಕೆರೆಯಲ್ಲಿ 8 ಬೋರ್ ವೆಲ್ಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದರು.
ನೀರು ಕಲುಷಿತವಾಗಲ್ಲ: ಮಡೇರಹಳ್ಳಿ ಕೆರೆಗೆ ಪೂರ್ತಿಯಾಗಿ ಕೆಸಿ ವ್ಯಾಲಿ ನೀರು ಹರಿಸುವುದಿಲ್ಲ. ಕೋಲಾರ ನಗರಕ್ಕೆ ಕುಡಿ ಯು ವುದಕ್ಕಾಗಿ ನೀರು ಬಳಕೆ ಮಾಡಿ ಕೊಳ್ಳುವುದರಿಂದ ಹೆಚ್ಚಿನ ನೀರು ಹರಿಸುವುದಿಲ್ಲ ಎಂದ ಅವರು, ಬೋರ್ವೆಲ್ಗಳಿಗೆ ಹೆಚ್ಚುವರಿ ಪೈಪುಗಳನ್ನು ಹಾಕಿ ಎತ್ತರ ದಲ್ಲಿ ಇರಿಸಲಾಗುವುದು. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗಲು ಬಿಡಲ್ಲ ಎಂದರು. ನಗರಸಭೆ ಆಯುಕ್ತ ಶಿವಪ್ರಕಾಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ