ನಗರಸಭೆ ಚುನಾವಣಾ ಕಣದಲಿ ಬಂಧುಗಳ ಕದನ

ಒಂದೇ ಕುಟುಂಬದ ಇಬ್ಬರು, ಮೂವರು ಬೇರೆ ವಾರ್ಡುಗಳ ಮೂಲಕ ಚುನಾವಣೆಗೆ ಸ್ಪರ್ಧೆ

Team Udayavani, Nov 7, 2019, 5:15 PM IST

7-November-19

● ಕೆ.ಎಸ್‌.ಗಣೇಶ್‌
ಕೋಲಾರ:
ನಗರಸಭಾ ಚುನಾವಣಾ ಕಣದಲ್ಲಿ ಒಂದೇ ಕುಟುಂಬದ ಇಬ್ಬರು ಮೂವರು ಬೇರೆ ವಾರ್ಡುಗಳ ಮೂಲಕ ಚುನಾವಣೆಗೆ ಸ್ಪರ್ಧಿಸಿದ್ದರೆ, ಕೆಲವು ವಾರ್ಡುಗಳಲ್ಲಿ ಬಂಧುಗಳೇ  ದುರಾಳಿಗಳಾಗಿ ಪೈಪೋಟಿ ನಡೆಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಬಾಬು ಕುಟುಂಬ: ಕೋಲಾರ ನಗರಸಭೆ ಹಿಂದಿನ ಅವಧಿಯಲ್ಲಿಯೂ ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎ.ಪ್ರಸಾದಬಾಬು ಹಾಗೂ ಅವರ ಪತ್ನಿ ಮಹಾಲಕ್ಷ್ಮೀ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಂಪಾದಿಸಿದ್ದರು.

ನಗರಸಭೆಯ ಎರಡನೇ ಅವಧಿಗೆ ಮಹಾಲಕ್ಷ್ಮೀಯವರಿಗೆ ನಗರಸಭೆ ಅಧ್ಯಕ್ಷರಾಗುವ ಅವಕಾಶವು ಲಭ್ಯವಾಗಿತ್ತು. ಈ ಬಾರಿಯ ಚುನಾವಣೆಯಲ್ಲಿಯೂ ಮತ್ತದೇ ಜೋಡಿ ಚುನಾವಣೆಗೆ ಸ್ಪರ್ಧಿಸಿ ಅದೃಷ್ಟ ಪರೀಕ್ಷಿಸಿಕೊಳ್ಳುತ್ತಿದ್ದಾರೆ. ವಾರ್ಡ್‌ ಸಂಖ್ಯೆ 4 ರಲ್ಲಿ ಪ್ರಸಾದ್‌ಬಾಬು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದರೆ, ವಾರ್ಡ್‌ ಸಂಖ್ಯೆ 10 ರಲ್ಲಿ ಮಹಾಲಕ್ಷ್ಮೀ ಕಾಂಗ್ರೆಸ್‌ ಉಮೇದುವಾರರಾಗಿದ್ದಾರೆ. ವಾರ್ಡ್‌ ಸಂಖ್ಯೆ 10ರಲ್ಲಿ ಮಹಾಲಕ್ಷ್ಮೀಯವರಿಗೆ ಸಹೋದರಿ ವರಸೆಯಾದ ಬಿ.ಸುಚಿತ್ರಾ ಜೆಡಿಎಸ್‌ ಮೂಲಕ ಸ್ಪರ್ಧೆ ನಡೆಸಿ ಅಕ್ಕನಿಗೆ ಪೈಪೋಟಿ ನೀಡುತ್ತಿದ್ದಾರೆ.

ಜೆ.ಕೆ. ಪತಿ-ಪತ್ನಿ: ಕೋಲಾರ ಕೀಲುಕೋಟೆಯ ಕಾಂಗ್ರೆಸ್‌ ಮುಖಂಡ ಜೆ.ಕೆ.ಜಯರಾಂ ಮತ್ತು ಅವರ ಪತ್ನಿ ಭಾಗ್ಯಮ್ಮ ಅಕ್ಕಪಕ್ಕದ ವಾರ್ಡುಗಳಿಂದ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿದ್ದಾರೆ. ನಗರದ ಕೀಲು ಕೋಟೆಯ 25 ನಾರ್ಡಿನಲ್ಲಿ ಜೆ. ಕೆ.ಜಯರಾಂ ಪತ್ನಿ ಭಾಗ್ಯಮ್ಮ ಮತ್ತು ಮುನೇಶ್ವರ ನಗರದ 26 ನೇ ವಾರ್ಡು ಗಳಲ್ಲಿ ಜೆ.ಕೆ.ಜಯರಾಂ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದಿದ್ದಾರೆ.

ಮೇಸ್ತ್ರಿ ಕುಟುಂಬ: ಕೋಲಾರ ಕಿಲಾರಿಪೇಟೆಯ ಮೇಸ್ತ್ರಿ ನಾರಾಯಣಸ್ವಾಮಿ ಕುಟುಂಬವು ಈ ಬಾರಿ ಎರಡು ವಾರ್ಡುಗಳಿಂದ ಸ್ಪರ್ಧೆ ಬಯಸಿ ಜೆಡಿಎಸ್‌ ನಿಂದ ನಾಮಪತ್ರಸಲ್ಲಿಸಿದ್ದಾರೆ. ವಾರ್ಡ್‌ ಸಂಖ್ಯೆ 1ರಲ್ಲಿ ಮೇಸ್ತ್ರಿ ನಾರಾಯಣಸ್ವಾಮಿ ಯವರ ಕಿರಿಯ ಪುತ್ರ ಶಬರೀಶ್‌ ಪತ್ನಿ ಶ್ವೇತಾ ಜೆಡಿಎಸ್‌ ಅಭ್ಯರ್ಥಿಯಾಗಿದ್ದಾರೆ. ಮೇಸ್ತ್ರಿ ನಾರಾಯಣ ಸ್ವಾಮಿ ಯವರ ಹಿರಿಯ ಪುತ್ರ ಎನ್‌.ರಮೇಶ್‌ ಜೆಡಿಎಸ್‌ ಅಭ್ಯರ್ಥಿಯಾಗಿ 25 ನೇ ವಾರ್ಡಿನಿಂದ ಚುನಾವಣಾ ಕಣದಲ್ಲಿದ್ದಾರೆ. ಈ ಕುಟುಂಬದ ದೂರದ ಸಂಬಂಧಿ ಹರಿಕೃಷ್ಣ 21 ನೇ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದಾರೆ.

ಪಿವಿಸಿ ಕೃಷ್ಣಪ್ಪ ಕುಟುಂಬ: ಅಂಬೇಡ್ಕರ್‌ ನಗರದ ಪಿವಿಸಿ ಎ.ಕೃಷ್ಣಪ್ಪರ ಕುಟುಂಬದಿಂದಲೂ ಇಬ್ಬರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕೃಷ್ಣಪ್ಪರ ಸಹೋದರ ಎ.ರಮೇಶ್‌ 24 ನೇ ವಾರ್ಡಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ. ಕೃಷ್ಣಪ್ಪರ ಮತ್ತೋರ್ವ ಸಹೋದರ ರಾಮುರ ಪತ್ನಿ ಎನ್‌.ಅಪೂರ್ವ ಪಕ್ಷೇತರ ಅಭ್ಯರ್ಥಿಯಾಗಿ 5ನೇ ವಾರ್ಡಿನಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಸಿಪಿಎಂನಲ್ಲಿ: ಕೋಲಾರ ನಗರದ 35 ವಾರ್ಡುಗಳ ಪೈಕಿ ಸಿಪಿಎಂ ಕೇವಲ ಎರಡು ವಾರ್ಡುಗಳಿಂದ ಮಾತ್ರವೇ ಸ್ಪರ್ಧೆ ಬಯಸಿದೆ. ಎರಡು ವಾರ್ಡುಗಳಲ್ಲಿಯೂ ಅಣ್ಣ ತಮ್ಮ ಸಂಬಂಧಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 2 ನೇ ವಾರ್ಡಿನಿಂದ ಪಿ.ವೆಂಕಟರಮಣ ಹಾಗೂ 7ನೇ ವಾರ್ಡಿನಿಂದ ಗಾಂಧಿನಗರ ನಾರಾಯಣ ಸ್ವಾಮಿ ಚುನಾವಣೆಗೆ ಸ್ಪರ್ಧಿಸಿ ಮತದಾರರ ಮನ ಗೆಲ್ಲುವ ಪ್ರಯತ್ನದಲ್ಲಿದ್ದಾರೆ.

ಕಠಾರಿಪಾಳ್ಯ ವಾರ್ಡ್‌: ಕೋಲಾರದ ಕಠಾರಿಪಾಳ್ಯದ ವಾರ್ಡ್‌ ಸಂಖ್ಯೆ 20ರಲ್ಲಿ ಸಹೋದರ ಸಂಬಂಧಿಗಳು ಪ್ರತಿಸ್ಪರ್ಧಿಗಳಾಗಿದ್ದಾರೆ. ಸಹೋದರ ಸಂಬಂಧಿಗಳಾದ ಮಧು ತನ್ನ ಪುತ್ರಿ ದೇವಿಕಾರನ್ನು ಜೆಡಿಎಸ್‌ನಿಂದ ಕಣಕ್ಕಿಳಿಸಿದ್ದರೆ, ಬಿಜೆಪಿಯಲ್ಲಿರುವ ಮು.ರಾಘವೇಂದ್ರ ತನ್ನ ಪತ್ನಿ ಸೌಭಾಗ್ಯರನ್ನು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

ಹಾರೋಹಳ್ಳಿ ವಾರ್ಡ್‌: ಕೋಲಾರ ನಗರದ ಹಾರೋಹಳ್ಳಿ ವಾರ್ಡ್‌ ಸಂಖ್ಯೆ 15 ರಲ್ಲಿ ಬಹುತೇಕ ಸಂಬಂಧಿಗಳ ಪೈಪೋಟಿಯಿಂದಲೇ ಗಮನ ಸೆಳೆಯುತ್ತಿದೆ. ಎಂಟು ಮಂದಿ ಮಹಿಳೆಯರು ಚುನಾವಣಾ ಕಣದಲ್ಲಿದ್ದಾರೆ. ಈ ಪೈಕಿ ಒಬ್ಬರನ್ನು ಹೊರತುಪಡಿಸಿದರೆ ಎಲ್ಲಾ ಅಭ್ಯರ್ಥಿ ಗಳು ಪರಸ್ಪರ ಸಹೋದರ ಸಂಬಂಧಿಗಳ ಪತ್ನಿಯರಾಗಿರುವುದು ವಿಶೇಷವೆನಿಸಿದೆ. ಇವರೆಲ್ಲರೂ ಮಾಜಿ ಕೇಂದ್ರ ಸಚಿವ ಕೆ.ಎಚ್‌.ಮುನಿಯಪ್ಪರಿಗೂ ಹತ್ತಿರದ ಸಂಬಂಧಿ ಗಳೆನ್ನುವುದು ಮತ್ತೂಂದು ವಿಶೇಷ.

ರಹಮತ್‌ನಗರ: ಕೋಲಾರ ರಹಮತ್‌ನಗರದ 30 ನೇ ವಾರ್ಡಿನಲ್ಲಿ ಜೆಡಿಎಸ್‌ ಅಭ್ಯರ್ಥಿ ನಸೀಮಾ ತಾಜ್‌ ಹಾಗೂ ಸಮೀಪ ಬಂಧು ನೂರಿ ಪಕ್ಷೇತರರಾಗಿ ಚುನಾವಣಾ ಕಣದಲ್ಲಿದ್ದಾರೆ.

ತಾಪಂ ಅಧ್ಯಕ್ಷರ ಪತ್ನಿ: ಕೋಲಾರ ತಾಪಂ ಅಧ್ಯಕ್ಷ ಸೂಲೂರು ಆಂಜಿನಪ್ಪರ ಪತ್ನಿ ಎನ್‌.ಸುವರ್ಣ 15 ನೇ ವಾರ್ಡಿನಿಂದ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿ ಗೆಲುವಿನ ಪ್ರಯತ್ನ ನಡೆಸಿದ್ದಾರೆ.

ಜಿಲ್ಲೆಯ ಹಿರಿಯ ರಾಜಕಾರಣಿ ಭೂಹೋರಾಟದ ಹರಿಕಾರ ದಿವಂಗತ ಪಿ.ವೆಂಕಟಗಿರಿಯಪ್ಪರ ಕುಟುಂಬದ ಮೂರನೇ ತಲೆಮಾರಿನ ಅಂದರೆ ಪಿ.ವಿ ಅವರು ಮೊಮ್ಮಗ ಸಿ.ರಾಕೇಶ್‌ ಜೆಡಿಎಸ್‌ ಪಕ್ಷದಿಂದ ಇದೇ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಹಿರಿಯ ರಾಜಕಾರಣಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ರಾಮರಾಜು ತನ್ನ ಸೊಸೆ ಸ್ವಾತಿಯನ್ನು ಜೆಡಿಎಸ್‌ ಪಕ್ಷದಿಂದ ಚುನಾವಣೆಗೆ ನಿಲ್ಲುವಂತೆ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾಗಿದ್ದ ಕೆ.ವಿ.ಸುರೇಶ್‌ ಕುಮಾರ್‌ ತನಗೆ ಹಾಗೂ ತನ್ನ ಪತ್ನಿಗೆ ಕಾಂಗ್ರೆಸ್‌ ಪಕ್ಷದಿಂದ ಬಿ.ಫಾರಂ ಕೋರಿ ಅರ್ಜಿ ಸಲ್ಲಿಸಿದ್ದರು.

ಆದರೆ, ಇಬ್ಬರಿಗೂ ಬಿ ಫಾರಂ ಸಿಗದಿದ್ದ ಕಾರಣದಿಂದ ಜೆಡಿಎಸ್‌ ಬಿ ಫಾರಂ ಪಡೆದು ತನ್ನ ಪತ್ನಿ ಎಸ್‌.ಎನ್‌. ಗೀತಾರಾಣಿಯವರನ್ನು ಚುನಾವಣಾ ಕಣಕ್ಕಿಳಿಸಿದ್ದಾರೆ.

ಒಟ್ಟಾರೆ ಕೋಲಾರದ ಹಲವಾರು ವಾರ್ಡುಗಳಲ್ಲಿ ಪರಸ್ಪರ ಸಂಬಂಧಿಕರೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಗೆ ಇಳಿದಿರುವುದು ಈ ಚುನಾವಣೆಯ ವಿಶೇಷ ಎನಿಸಿದೆ. ಮಾಜಿ ಸಚಿವ ವರ್ತೂರು ಪ್ರಕಾಶ್‌ ತನ್ನ ಸಂಬಂಧಿ ಸಿ.ಸೋಮಶೇಖರ್‌ರನ್ನು 4 ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲಿಸಿದ್ದು, ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.