ಪಿಕಾರ್ಡ್‌ ಬ್ಯಾಂಕ್‌ನಿಂದ 1.46 ಕೋಟಿ ಸಾಲ ವಿತರಣೆ


Team Udayavani, Oct 28, 2020, 2:00 PM IST

ಪಿಕಾರ್ಡ್‌ ಬ್ಯಾಂಕ್‌ನಿಂದ 1.46 ಕೋಟಿ ಸಾಲ ವಿತರಣೆ

ಬಂಗಾರಪೇಟೆ: ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವು ಆಡಳಿತ ನಡೆಸುತ್ತಿದ್ದ ವೇಳೆ ರೈತರಿಗೆ ಸರ್ಕಾರವು ಬೆನ್ನಲುಬಾಗಿ ನಿಂತು ಸಾಲ, ಬಡ್ಡಿ ಮನ್ನಾ ಮಾಡಿ ರೈತರ ಹಿತ ಕಾಪಾಡಿದೆ ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ಪಿಕಾರ್ಡ್‌ ಬ್ಯಾಂಕ್‌ ಪ್ರಾಂಗಣದಲ್ಲಿ ರೈತರಿಗೆ ಶೇ.3ರ ಬಡ್ಡಿ ದರದಲ್ಲಿ 1.46 ಕೋಟಿ ವಿವಿಧ ಸಾಲಗಳ ಚೆಕ್‌ ವಿತರಿಸಿ ಮಾತನಾಡಿದ ಅವರು, ಪಿಕಾರ್ಡ್‌ ಬ್ಯಾಂಕ್‌ ನಿಂದ ಕಡಿಮೆ ದರದ ಬಡ್ಡಿಯಲ್ಲಿ ಸಾಲ ನೀಡ ಲಾಗುತ್ತಿದೆ. ಕ್ಲಿಷ್ಕಕರ ಪರಿಸ್ಥಿತಿಯಲ್ಲಿಯೂ ಸಹ ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಚ್‌.ಕೆ.ನಾರಾ ಯಣಸ್ವಾಮಿ ನೇತೃತ್ವದಲ್ಲಿ 30 ರೈತರಿಗೆ ಟ್ರ್ಯಾಕ್ಟರ್‌, 24 ರೇಷ್ಮೆ ಬೆಳೆಗಾರರಿಗೆ ರೇಷ್ಮೆ ಹುಳು ಸಾಕಾಣಿಕೆ ಮನೆ ನಿರ್ಮಾಣ ಮಾಡಲು ಹಾಗೂ 11 ರೈತರಿಗೆ ಕುರಿ ಸಾಕಾಣಿಕೆ ಮಾಡಲು ಸಾಲ ನೀಡುತ್ತಿರುವುದು ಸಂತಸ ತಂದಿದೆ ಎಂದರು.

ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಚ್‌.ಕೆ. ನಾರಾಯಣ ಸ್ವಾಮಿ ಅವರನ್ನು ಎರಡು ಬಾರಿ ಅಧ್ಯಕ್ಷರನ್ನಾಗಿ ಮಾಡಲು ಇವರ ಕಾರ್ಯವೈಖರಿ ಹಾಗೂ ರೈತ ಪರ ಇರುವ ಕಾಳಜಿಯನ್ನು ಮೆಚ್ಚಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಪಿಕಾರ್ಡ್‌ ಬ್ಯಾಂಕ್‌ನಲ್ಲಿ ಈ ಹಿಂದೆ ನೀಡಿದ್ದ ಸಾಲ ವಸೂಲಿ ಮಾಡುವುದಕ್ಕೆ ಆಗುತ್ತಿರಲಿಲ್ಲ ಎಂದರು.

ಅಭಿನಂದನೆ: ಪಿಕಾರ್ಡ್‌ ಬ್ಯಾಂಕ್‌ ಆಡಳಿತ ಮಂಡಳಿ, ಸಿಬ್ಬಂದಿ ವರ್ಗವು ರೈತರನ್ನು ಮನವೊಲಿಸಿ ನಿಯಮಾನುಸಾರವಾಗಿ ಅವಧಿಗೂ ಮುನ್ನವೇ ಸಾಲ ಮರು ಪಾವತಿ ಮಾಡಿಸುತ್ತಿರುವುದರಿಂದ ಹೆಚ್ಚಾಗಿ ಸಾಲ ನೀಡುವುದಕ್ಕೆ ಅವಕಾಶ ಸಿಕ್ಕಿದೆ ಎಂದು ಹೇಳಿ ಬ್ಯಾಂಕ್‌ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಚ್‌.ಕೆ. ನಾರಾ ಯಣ ಸ್ವಾಮಿ, ತಾಪಂ ಅಧ್ಯಕ್ಷ ಟಿ.ಮಹದೇವ್‌, ಎಪಿಎಂಸಿ ಮಾಜಿ ಅಧ್ಯಕ ಕಾಮಾಂಡಹಳ್ಳಿ ಎಸ್‌.ನಾರಾಯಣಗೌಡ, ಪಿಕಾರ್ಡ್‌ ಬ್ಯಾಂಕ್‌ ನಿರ್ದೇಶಕರಾದ ವೆಂಕಟಪ್ಪ, ವೆಂಕಟಾಚಲಪತಿ, ಸದಾನಂದ, ಕುಪ್ಪಣ್ಣ, ವೆಂಕಟಪ್ಪ, ಬಿ.ಎನ್‌. ಶಶಿಕಾಂತ್‌, ಪ್ರಭಾಕರ್‌, ಅಶ್ವತ್ಥ ನಾರಾಯಣ ಗೌಡ, ರಾಜೇಶ್ವರಿ, ಬ್ಯಾಂಕ್‌ ವ್ಯವಸ್ಥಾಪಕ ಜಿ.ಪುರುಷೋತ್ತಮ್‌ ಹಾಜರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.