15 ಗ್ರಾಪಂಗಳಿಗೆ ತಲಾ 10 ಲಕ್ಷ ರೂ.
Team Udayavani, Sep 29, 2019, 2:28 PM IST
ಬೇತಮಂಗಲ: ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ಗ್ರಾಪಂ ಅನ್ನು ಮಾದರಿ ಮಾಡಲು ಒತ್ತು ನೀಡುವುದಾಗಿ ಶಾಸಕಿ ಎಂ.ರೂಪಕಲಾ ಭರವಸೆ ನೀಡಿದರು.
ಗ್ರಾಮದಲ್ಲಿನ ಕಚೇರಿಯಲ್ಲಿ ವಿವಿಧ ಗ್ರಾಪಂಗಳ ಸದಸ್ಯರು ಮತ್ತು ಮುಖಂಡರೊಂದಿಗೆ ಸಭೆ ನಡೆಸಿದ ಅವರು, ಗ್ರಾಮೀಣಾಭಿವೃದ್ಧಿಗೆ 1.5 ಕೋಟಿ ರೂ. ಅನುದಾನ ಬಿಡುಗಡೆ ಯಾಗಿದೆ. 15 ಗ್ರಾಪಂಗಳು ತಲಾ 10 ಲಕ್ಷ ರೂ. ಬಿಡುಗಡೆ ಮಾಡಿದ್ದು, ಅಗತ್ಯ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವಂತೆ ಸೂಚಿಸಿದರು. ಬೇತಮಂಗಲ ಗ್ರಾಮದಲ್ಲಿ ಸೂಕ್ತ ಬಸ್ ನಿಲ್ದಾಣ, ಪೊಲೀಸ್ ಠಾಣೆ ಕಟ್ಟಡ, ವಾಹನ ನಿಲುಗಡೆಗೆ ಸ್ಥಳ, ಪಾಲಾರ್ ಕೆರೆಯ ದುರಸ್ತಿ, ಹಳೇ ಮದ್ರಾಸ್ ರಸ್ತೆ ಒತ್ತುವರಿ ತೆರವು ಮಾಡಿ ಅಭಿವೃದ್ಧಿ ಮಾಡುವುದು ಸೇರಿ ಇನ್ನೂ ಹಲವು ಕಾರ್ಯಕ್ರಮ ಶೀಘ್ರದಲ್ಲೇ ಪರಿಹಾರ ಮಾಡಬೇಕೆಂದು ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಶಾಸಕರಲ್ಲಿ ಮನವಿ ಮಾಡಿದರು.
ಶಾಸಕಿ ತಕ್ಷಣ ಸ್ಪಂದಿಸಿ ಸ್ಥಳಕ್ಕೆ ಕಂದಾಯ ಅಧಿಕಾರಿ ಮಂಜುನಾಥ್ ಮತ್ತು ಗ್ರಾಮದ ಹಿರಿಯರ ಜೊತೆ ಚರ್ಚಿಸಿ ಕೂಡಲೇ ಸರ್ಕಾರಿ ಜಾಗ ಗುರುತಿಸುವಂತೆ ತಿಳಿಸಿದರು. ಆದಷ್ಟೂ ಬೇಗ ಕಾಮಗಾರಿ ಕೈಗೆತ್ತಿಕೊಂಡು ಮಾದರಿ ಗ್ರಾಪಂ ಮಾಡುವುದಾಗಿ ಭರವಸೆ ನೀಡಿದರು.
ಜಿಪಂ ಮಾಜಿ ಸದಸ್ಯ ಅ.ಮು. ಲಕ್ಷ್ಮೀನಾರಾಯಣ್, ಗ್ರಾಪಂ ಅಧ್ಯಕ್ಷ ಕಿರಣ್ ಕುಮಾರ್, ಮಾಜಿ ಅಧ್ಯಕ್ಷ ದುರ್ಗಾ ಪ್ರಸಾದ್, ಪ್ರಸನ್ನ, ಟಿ.ಗೊಲ್ಲಹಳ್ಳಿ ಅಧ್ಯಕ್ಷೆ ಮಂಜುಳಾ, ಪಾಪಣ್ಣ, ಗ್ರಾಪಂ ಸದಸ್ಯರಾದ ಮಂಜುನಾಥ್, ವಿನು, ವಿವಿಧ ಗ್ರಾಪಂಗಳ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ