ಜಿಲ್ಲೆಯ 12 ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ: ಮಂಜುನಾಥ್
Team Udayavani, Nov 9, 2019, 4:10 PM IST
ಕೋಲಾರ: ಜಿಲ್ಲೆಯ ಆಸ್ಪತ್ರೆಗಳ ಸೇವೆ, ಸ್ವಚ್ಛತೆ ಹಾಗೂ ಸೌಲಭ್ಯಗಳನ್ನು ಗುರುತಿಸಿ 12 ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ ದೊರೆತಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.
ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ವರ್ಷಕ್ಕಿಂತ ಈ ವರ್ಷ ಆಸ್ಪತ್ರೆಗಳು ಉತ್ತಮವಾಗಿ ಸೇವೆ ನೀಡುತ್ತಿವೆ. 53 ವಿಧದ ಸೇವೆಗಳನ್ನು ಒದಗಿಸಲಾಗುತ್ತಿದೆ. ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ಸೇವೆ ನೀಡಲಾಗುವುದು ಎಂದು ತಿಳಿಸಿದರು.
ಆಸ್ಪತ್ರೆಗಳ ಸ್ವಚ್ಛತೆ ಕಾಪಾಡಲು ಬಯೋಮೆಡಿಕಲ್ ವೇಸ್ಟ್ ಅನ್ನು ಸಂಗ್ರಹಿಸಿ, ಬೇರ್ಪಡಿಸಿ ವಿಲೇವಾರಿ ಮಾಡಲು ಮೀರಾ ಇನ್ಫೋಟೆಕ್ ಏಜೆನ್ಸಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದೆ. ಪ್ರತಿ 75 ಕಿ.ಮೀ. ವ್ಯಾಪ್ತಿಗೆ 1 ರಂತೆ ಏಜೆನ್ಸಿಯನ್ನು ಗುರುತಿಸಿದೆ. ಈಓ ಏಜೆನ್ಸಿಯು ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರತಿ ದಿನ ಮತ್ತು ಇತರೆ ಆಸ್ಪತ್ರೆಗಳಲ್ಲಿ 2 ದಿನಕ್ಕೊಮ್ಮೆ ಬಯೋಮೆಡಿಕಲ್ ವೇಸ್ಟ್ ಅನ್ನು ಸಂಗ್ರಹಿಸಿ ವಿಲೇವಾರಿ ಮಾಡುತ್ತಾರೆ. ಇಂದು ಈ ಸಂಬಂಧ ಅವರ ಸೇವೆಯ ಗುಣಮಟ್ಟ ಹಾಗೂ ಲಭ್ಯತೆ ಕುರಿತು ಸಭೆ ನಡೆಸಲಾಗಿದೆ ಎಂದರು.
ಮೀರಾ ಇನ್ಫೋಟೆಕ್ ಏಜೆನ್ಸಿಯವರು ವಿಲೇವಾರಿ ದರವನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದ್ದು, ಇವರ ಒಂದು ತಿಂಗಳ ಸೇವೆಯನ್ನು ಪರಿಶೀಲಿಸಿ ಗುಣಮಟ್ಟವನ್ನು ಪರೀಕ್ಷಿಸಿ ದರ ಹೆಚ್ಚಿಸುವ ಕುರಿತು ಕ್ರಮ ವಹಿಸಲಾಗುವುದು. ವಿಲೇವಾರಿ ಮಾಡುವ ವಾಹನಗಳಿಗೆ ಜಿಪಿಎಸ್ ಅಳವಡಿಸಿರುವುದಾಗಿ ಏಜೆನ್ಸಿಯವರು ತಿಳಿಸಿದ್ದು, ಇದನ್ನು ಪರಿಶೀಲಿಸಲಾಗುವುದು. ವೇಸ್ಟ್ ಮ್ಯಾನೇಜ್ಮೆಂಟ್ ನಿರ್ವಹಣೆಯಲ್ಲಿ ಅವಶ್ಯಕ ಸುರಕ್ಷತಾ ಪರಿಕರಗಳನ್ನು ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿಜಯ್ ಕುಮಾರ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆರೋಗ್ಯ ಕಲ್ಯಾಣಾಧಿಕಾರಿ ಡಾ.ಭಾರತಿ, ಮೀರಾ ಇನ್ಫೋಟೆಕ್ ಸಂಸ್ಥೆಯ ವೆಂಕಟರಾಮರೆಡ್ಡಿ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.