14 ಸಾವಿರ ಕೋಟಿ ಸಾಲ ವಿತರಣೆ ಗುರಿ
Team Udayavani, Jun 10, 2020, 7:05 AM IST
ಕೋಲಾರ: ಕೋವಿಡ್ 19 ಸಂಕಷ್ಟದಲ್ಲೂ 2020-21ನೇ ಸಾಲಿನಲ್ಲಿ ಸಹಕಾರ ಬ್ಯಾಂಕ್ಗಳ ಮೂಲಕ ರೈತರಿಗೆ 14 ಸಾವಿರ ಕೋಟಿ ರೂ. ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಸಹಕಾರ ಇಲಾಖೆ, ಜಿಲ್ಲಾಡಳಿತ ಹಾಗೂ ಶ್ರೀರಾಮ ಬಳಕೆದಾರರ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಿಸಿ ಮಾತನಾಡಿದರು.
ಕಳೆದ ವರ್ಷ ಕೇವಲ 13 ಸಾವಿರ ಕೋಟಿ ರೂ. ನೀಡಿದ್ದು, ಈ ಬಾರಿ ಒಂದು ಸಾವಿರ ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ಆಶಾ ಕಾರ್ಯಕರ್ತೆಯರಿಗೆ ಕಾಯಕಬಂಧು ಮಾದರಿಯಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ ಸಾಲ ವಿತರಿಸಲು ಬದ್ಧವಾಗಿರುವುದಾಗಿ ತಿಳಿಸಿದರು.ರಾಜ್ಯದ 21 ಡಿಸಿಸಿ ಬ್ಯಾಂಕ್ಗಳು ಲಾಭದಲ್ಲಿವೆ. ಆದರೆ, ಇಲ್ಲಿವರೆಗೂ ಎಷ್ಟು ಸಾಲ ವಿತರಣೆ, ವಸೂಲಾತಿ ಪ್ರಗತಿ ಕುರಿತು ತನಿಖೆ ನಡೆಸುವುದಾಗಿ ತಿಳಿಸಿದರು.
ಹೊರಗಿನವರಿಂದಲೇ ಸೋಂಕು ಹೆಚ್ಚಳ: ರಾಜ್ಯದಲ್ಲಿ ಹೊರ ರಾಜ್ಯಗಳಿಂದ ಬಂದವರಿಂದಲೇ ಕೋವಿಡ್ 19 ಸೋಂಕು ಹೆಚ್ಚಳವಾಗಿದೆ ಎಂದ ಅವರು, ಸ್ಥಳೀಯವಾಗಿ ರೋಗ ಸಮುದಾಯಕ್ಕೆ ಹರಿಡಿಲ್ಲ, ಇದೀಗ ಕೋವಿಡ್ 19 ಜತೆಯಲ್ಲಿ ಜೀವನ ಎಂದು ಬದುಕುವಂತಾಗಿದೆ. ಜ.8 ರಿಂದ ಮಾಲ್, ದೇವಾಲಯ, ಚರ್ಚ್, ಮಸೀದಿ ತೆರೆದಿದ್ದು, ಸರಕಾರ, ಜಿಲ್ಲಾಡಳಿತ ಸೂಚಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಕೋವಿಡ್ 19 ತಡೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ಅಬಕಾರಿ ಸಚಿವ ಎಚ್.ನಾಗೇಶ್, ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಸೇವೆ ಪರಿಗಣಿಸಿ ಪ್ರೋತ್ಸಾಹಧನ ನೀಡಿದೆ, ನಿಮ್ಮನ್ನು ಕಲಿಯುಗದ ದೇವತೆಗಳಂತೆ, ಧೈರ್ಯದಿಂದ ಜೀವದ ಹಂಗು ಬಿಟ್ಟು ಕೋವಿಡ್ 19 ವಿರುದ್ಧ ಹೋರಾಟಿದ್ದೀರಿ ಎಂದು ಅಭಿನಂದಿಸಿದರು. ಕೋಲಾರದಲ್ಲಿ 30 ಸೋಂಕಿತರು ಪತ್ತೆಯಾಗಿದ್ದರೂ, ಅವರಲ್ಲಿ 18 ಮಂದಿ ಬಿಡುಗಡೆಯಾಗಿದ್ದಾರೆ, 12 ಮಂದಿ ಆಸ್ಪತ್ರೆಯಲ್ಲಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ.
ಇದಕ್ಕೆ ಕೋಲಾರಮ್ಮನ ಮಹಿಮೆ ಕಾರಣ ಎಂದರು. ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ಆಶಾ ಕಾರ್ಯಕರ್ತೆಯರು ಮನಸ್ಸು ಮಾಡಿದರೆ ಇಡೀ ಸಮಾಜವನ್ನೂ ಆರೋಗ್ಯವಾಗಿಡಬಹುದು ಎಂಬುದಕ್ಕೆ ಕೋಲಾರ ಜಿಲ್ಲೆ 48 ದಿನಗಳ ಕಾಲ ಹಸಿರುವಲಯವಾಗಿದ್ದುದೇ ಸಾಕ್ಷಿ ಎಂದರು. ಜಿಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಆಶಾ ಕಾರ್ಯಕರ್ತೆಯರ ಮಕ್ಕಳಿಗೆ ಉಚಿತ ಶಿಕ್ಷಣದ ಜತೆಗೆ ಪತ್ರಕರ್ತರು, ಕಲಾವಿದರು ಸಂಕಷ್ಟದಲ್ಲಿದ್ದು, ಅವರಿಗೆ ನಿವೇಶನ ನೀಡಲು ಆಲೋಚನೆ ಮಾಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಡಿಸಿಸಿ ಬ್ಯಾಂಕ್ ಎಜಿಎಂ ಶಿವಕುಮಾರ್, ಜಿಲ್ಲಾ ಲೆಕ್ಕಪರಿಶೋಧಕಿ ಶಾಂತಕುಮಾರಿ, ಕೋಚಿಮುಲ್ ಎಂಡಿ ತಿಪ್ಪಾರೆಡ್ಡಿ, ಸಹಕಾರ ಸಂಘಗಳ ಉಪನಿಬಂಧಕ ಸಿದ್ದನಗೌಡ ನೀಲಪ್ಪನವರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ