ಡಿಸಿಸಿ ಬ್ಯಾಂಕ್‌ ನೌಕರರ ಸಂಘಕ್ಕೆ 2.70 ಲಕ್ಷ ರೂ. ಲಾಭ


Team Udayavani, Sep 17, 2019, 4:27 PM IST

kolar-tdy-2

ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ನೌಕರರ ಪತ್ತಿನ ಸಹಕಾರ ಸಂಘದ 2018-19ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಈ ಸಾಲಿನ ಆಯವ್ಯಯ ಮಂಡಿಸಿದ್ದು, ಸಂಘ 2.70 ಲಕ್ಷ ರೂ. ಲಾಭಗಳಿಸಿದೆ ಎಂದು ಅಧ್ಯಕ್ಷ ಹುಸೇನ್‌ ದೊಡ್ಡಮನಿ ತಿಳಿಸಿದರು.

ನಗರದ ಜಿಲ್ಲಾ ಸಹಕಾರ ಯೂನಿಯನ್‌ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಂಘ ಸದಸ್ಯರ ಆರ್ಥಿಕಾಭಿವೃದ್ಧಿಗೆ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದರು.

ಸಾಲ ವಸೂಲು: ಸಂಘಕ್ಕೆ 10 ಮಂದಿ ಸುಸ್ತಿದಾರರಿಂದ ವಸೂಲಾಗಬೇಕಾದ 65 ಲಕ್ಷ ರೂ. ವಸೂಲಿಗೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು. ಈ ಸುಸ್ತಿದಾರರು ನಿವೃತ್ತರಾಗಿದ್ದು, ಬಡ್ಡಿಯೇ ಹೆಚ್ಚಾಗಿರುವುದರಿಂದ ಅವರ ಮನವೊಲಿಸಿ ಏಕಕಾಲಿಕ ಸಾಲ ತೀರುವಳಿ ಯೋಜನೆ ಅನುಷ್ಠಾನಗೊಳಿಸಿ ಸಾಲ ವಸೂಲು ಮಾಡಲು ಸಭೆ ನಿರ್ಧರಿಸಿತು.

ಹೊಸ ಸದಸ್ಯತ್ವ: ಈ ಸಂದರ್ಭದಲ್ಲಿ ಮಂಡಿಸಲಾದ ವಾರ್ಷಿಕ ಆಯವ್ಯಯದಲ್ಲಿ 10.26 ಲಕ್ಷ ರೂ. ಖರ್ಚು ಮತ್ತು ಲಾಭ ಸರಿದೂಗಿಸಿ ಕ್ರಮವಹಿಸಲು ತೀರ್ಮಾನಿಸಿದ್ದು, ಇದೇ ಸಂದರ್ಭದಲ್ಲಿ ಸಂಘಕ್ಕೆ 7 ಮಂದಿ ನೌಕರರಾದ ವಿ.ರತ್ನ, ಎನ್‌.ಯಲ್ಲಪ್ಪರೆಡ್ಡಿ, ಬೇಬಿ ಶಾಮಿಲಿ, ವೈ.ಎನ್‌.ಚಂದ್ರಶೇಖರರೆಡ್ಡಿ, ಕೃಷ್ಣಮೂರ್ತಿ, ಎಂ.ಆರ್‌.ಶ್ರುತಿ, ಎನ್‌.ಸತೀಶ್‌ರಿಗೆ ಹೊಸದಾಗಿ ಸದಸ್ಯತ್ವ ನೀಡಲು ಸಭೆ ಒಪ್ಪಿಗೆ ನೀಡಿತು. ಈಗಿರುವ ಬೈಲಾದಂತೆ ವಿಶೇಷ ಸಾಲವನ್ನು ಸದಸ್ಯರಿಗೆ 50 ಸಾವಿರ ರೂ.ವರೆಗೂ ನೀಡಬಹುದಾಗಿದ್ದು, ಅದನ್ನು 1 ಲಕ್ಷಕ್ಕೇರಿಸಲು ಸಭೆ ಸರ್ವಾನುಮತದಿಂದ ತೀರ್ಮಾನಿಸಿತು.

ಸಂಘ ಸದೃಢವಾಗಿ ಮುನ್ನಡೆಸಲು ಸಲಹೆ: ಸಹಕಾರ ಸಂಘ ನೀಡಿದ ಸನ್ಮಾನ ಸ್ವೀಕರಿಸಿದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಪ್ರತಿಯೊಂದಕ್ಕೂ ಆರ್ಥಿಕ ಸದೃಢತೆ ಬೇಕು, ಈ ಕಾರ್ಯ ಸಾಸಲು ನಿಮ್ಮಲ್ಲಿ ಬದ್ಧತೆ ಇರಬೇಕು ಎಂದು ತಿಳಿಸಿ ಸಭೆಗೆ ಶುಭ ಕೋರಿದರು.

ಸಭೆಯಲ್ಲಿ ಮುಖ್ಯ ಅತಿಥಿಗಳಾಗಿದ್ದ ಬ್ಯಾಂಕಿನ ನಿರ್ದೇಶಕ ಕೆ.ವಿ.ದಯಾನಂದ್‌, ಸಂಘವನ್ನು ಆರ್ಥಿಕವಾಗಿ ಮುನ್ನಡೆಸಿಕೊಂಡು ಹೋಗಿ, ನಿಮ್ಮ ವ್ಯವಹಾರ ಪಾರದರ್ಶಕವಾಗಿರಲಿ, ಸದಸ್ಯರ ಸಂಖ್ಯೆ ಹೆಚ್ಚಿಸಿಕೊಳ್ಳಿ ಎಂದು ಸಲಹೆ ನೀಡಿದರು. ನಿರ್ದೇಶಕರಾದ ಸೊಣ್ಣೇಗೌಡ, ಚೆನ್ನರಾಯಪ್ಪ ತಮ್ಮ ಸಲಹೆ ನೀಡಿದರು. ಸಭೆಯಲ್ಲಿ 1018-19ನೇ ಸಾಲಿನಲ್ಲಿ ಅಂದಾಜು ಆಯವ್ಯಯಕ್ಕಿಂತ ಹೆಚ್ಚಾಗಿ ಖರ್ಚಾಗಿರುವ ಬಾಬ್ತುಗಳಿಗೆ ಅನುಮೋದನೆ ಪಡೆಯಲಾಯಿತು. 2019-20ನೇ ಸಾಲಿನ ಅಂದಾಜು ಆಯವ್ಯಯಕ್ಕೆ ಅನುಮೋದನೆ ನೀಡಲಾಯಿತು. ವಯೋನಿವೃತ್ತರಾದ ಸಂಘದ ಸದಸ್ಯ ವೆಂಕಟೇಶಪ್ಪರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಸಿ.ವಿ.ರಾಮಕೃಷ್ಣಾರೆಡ್ಡಿ, ಕಾರ್ಯದರ್ಶಿ ಖಲೀಮುಲ್ಲಾ, ಕೆ.ಎನ್‌.ಪದ್ಮ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

11

Drinking water: ಜಾತ್ರೆಗೆ ಬಂದ ರಾಸುಗಳಿಗೆ ಕುಡಿಯಲು ನೀರಿಲ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.