ಅದೃಷ್ಟ ಬಲದಲ್ಲಿ ಎರಡು ಬಾರಿ ಮಂತ್ರಿ ಸ್ಥಾನ


Team Udayavani, Aug 21, 2019, 4:01 PM IST

kolar-tdy-2

ಕೋಲಾರ ಜಿಲ್ಲೆಯಿಂದ ಬಿ.ಎಸ್‌.ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿ ಅವಕಾಶ ಪಡೆದುಕೊಂಡಿರುವ ಎಚ್.ನಾಗೇಶ್‌ ಇತರೇ ಸಚಿವರೊಂದಿಗೆ.

ಕೋಲಾರ: ಅದೃಷ್ಟ ಬಲದಿಂದ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಜಿಲ್ಲೆಯಿಂದ ಮುಳಬಾಗಿಲು ಪಕ್ಷೇತರ ಶಾಸಕ ಎಚ್.ನಾಗೇಶ್‌ ಸಂಪುಟ ದರ್ಜೆಯ ಸಚಿವರಾಗಿ ಮಂಗಳವಾರ ಪ್ರಮಾಣ ವಚನ ಸ್ಪೀಕರಿಸಿದ್ದಾರೆ.

ಕೇವಲ ಮೂರು ತಿಂಗಳ ಅವಧಿಯಲ್ಲಿ ಎಚ್.ನಾಗೇಶ್‌ ಎರಡು ಬಾರಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ಪೀಕರಿಸಿ ಗಮನ ಸೆಳೆೆದಿದ್ದಾರೆ. ಹಿಂದಿನ ಮೈತ್ರಿ ಸರ್ಕಾರದಲ್ಲಿ ಕಾಡಿ ಬೇಡಿ ಮಂತ್ರಿ ಸ್ಥಾನ ಪಡೆದುಕೊಂಡಿದ್ದ ಎಚ್.ನಾಗೇಶ್‌, ಹದಿನೈದು ದಿನ ಕಳೆದರೂ ಖಾತೆ ಸಿಗದೆ ಮುಜುಗರ ಕ್ಕೊಳಗಾಗಿದ್ದರು. ಕಾಡಿಬೇಡಿದರೂ ನಿರೀಕ್ಷಿಸಿದ್ದ ಇಂಧನ ಖಾತೆ ಸಿಗಲಿಲ್ಲ. ಸಣ್ಣ ಕೈಗಾರಿಕೆ ಸಚಿವ ಸ್ಥಾನಕ್ಕೆ ಅವರು ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಆದರೆ, ಖಾತೆ ಖಚಿತವಾದ ಎರಡನೇ ವಾರದಲ್ಲಿ ಎಚ್. ನಾಗೇಶ್‌ ಮೈತ್ರಿ ಸರ್ಕಾರಕ್ಕೆ ಘೋಷಿಸಿದ್ದ ಬೆಂಬಲ ವಾಪಸ್‌ ಪಡೆದು ವಿಶೇಷ ವಿಮಾನದಲ್ಲಿ ಮುಂಬೈ ಹಾರಿದ್ದರು.

ಅದೃಷ್ಟ ಬಲ: ಬೆಸ್ಕಾಂ ಅಧಿಕಾರಿಯಾಗಿದ್ದ ಎಚ್. ನಾಗೇಶ್‌, ಕೋಲಾರ ಜಿಲ್ಲೆ ಮೂಲದವರಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಚ್.ನಾಗೇಶ್‌ ವಿಧಾನಸಭಾ ಚುನಾವಣಾ ಸಮಯದಲ್ಲಿ ನಾಮಪತ್ರ ಸಲ್ಲಿಸಿದ್ದರು. ಆಗ ನಡೆದ ರಾಜಕೀಯ ಆಟದಲ್ಲಿ ಜಿಲ್ಲೆಯ ಕಾಂಗ್ರೆಸ್‌ನ ಎರಡು ಗುಂಪುಗಳ ಗುದ್ದಾಟ ದಲ್ಲಿ ಎಚ್.ನಾಗೇಶ್‌ ಮುಳಬಾಗಿಲು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿಬಿಟ್ಟಿದ್ದರು. ಚುನಾವಣೆಗೆ ಕೇವಲ ಎರಡು ವಾರ ಉಳಿದಿರುವಾಗ ಅಭ್ಯರ್ಥಿ ಯಾಗಿದ್ದ ಎಚ್.ನಾಗೇಶ್‌ರನ್ನು ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಬೆಂಬಲಿಸಿದ್ದರು. ಎಚ್. ನಾಗೇಶ್‌ ಯಾರೆಂದು ಗೊತ್ತಿಲ್ಲದೆ ಜನ ಮತ ಚಲಾವಣೆ ಮಾಡಿದ್ದರು. ಅದೃಷ್ಟ ಬಲದಲ್ಲಿ ಎಚ್.ನಾಗೇಶ್‌ ಶಾಸಕರಾಗಿಯೂ ಆಯ್ಕೆಯಾಗಿಬಿಟ್ಟಿದ್ದರು.

ಕಾಂಗ್ರೆಸ್‌ನಿಂದ ಜೆಡಿಎಸ್‌- ಬಿಜೆಪಿಯತ್ತ: ಡಿ.ಕೆ.ಶಿವಕುಮಾರ್‌ ಬೆಂಬಲದಿಂದಲೇ ಮುಳಬಾಗಿಲಿನಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯಾಗಿದ್ದ ಎಚ್.ನಾಗೇಶ್‌, ಗೆಲ್ಲುತ್ತಿದ್ದಂತೆಯೇ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸುವಂತೆ ಮಾಡುವಲ್ಲಿ ಅದೇ ಡಿ.ಕೆ.ಶಿವಕುಮಾರ್‌ ಸಫ‌ಲರಾಗಿದ್ದರು. ಆದರೆ, ಮೈತ್ರಿ ಸರ್ಕಾರದಲ್ಲಿ ಎಚ್.ನಾಗೇಶ್‌ರಿಗೆ ಮಂತ್ರಿಗಿರಿ ಕೊಡಿಸುವಲ್ಲಿ ಶಿವಕುಮಾರ್‌ ವಿಫ‌ಲವಾಗಿದ್ದರು. ಇದಕ್ಕಾಗಿ ಮುನಿಸಿಕೊಂಡಿದ್ದ ಎಚ್.ನಾಗೇಶ್‌ ಬಿಜೆಪಿಯತ್ತ ಮುಖ ಮಾಡಿದ್ದರು.

ಮುಂಬೈಗೆ ಪಯಣ: ಇದನ್ನು ಗ್ರಹಿಸಿ ಮತ್ತೇ ಮೈತ್ರಿ ಸರ್ಕಾರ ಜೆಡಿಎಸ್‌ ಕೋಟಾದಲ್ಲಿ ಎಚ್.ನಾಗೇಶ್‌ರನ್ನು ಮಂತ್ರಿಯಾಗಿಸಿಕೊಂಡಿತ್ತು. ಇದಕ್ಕಾಗಿ ಎಚ್. ನಾಗೇಶ್‌ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಆದರೆ, ಖಾತೆ ಹಂಚುವಾಗಿನ ವಿಳಂಬ ಕ್ಯಾತೆಯಿಂದ ಎಚ್.ನಾಗೇಶ್‌ ಬೇಸತ್ತಿದ್ದರು. ಮೈತ್ರಿ ಸರ್ಕಾರಕ್ಕೆ ಕೈಕೊಟ್ಟು ಮಂತ್ರಿಗಿರಿಗೆ ರಾಜೀನಾಮೆ ನೀಡಿ, ನೇರವಾಗಿ ಮುಂಬೈಗೆ ವಿಶೇಷ ವಿಮಾನದಲ್ಲಿ ಹಾರಿಬಿಟ್ಟಿದ್ದರು.

ಮತ್ತೇ ಕೈಹಿಡಿದ ಅದೃಷ್ಟ: ಮೈತ್ರಿ ಸರ್ಕಾರಕ್ಕೆ ಕೈಕೊಟ್ಟು ವಿಶೇಷ ವಿಮಾನದಲ್ಲಿ ಮುಂಬೈ ಹಾರಿದ್ದ ಎಲ್ಲಾ ಶಾಸಕರು ಅನರ್ಹರಾಗಿ ಅಧಿಕಾರ ಕಳೆದುಕೊಂಡು ಪರಿತಪಿಸುತ್ತಿದ್ದಾರೆ. ಸುಪ್ರಿಂ ಕೋರ್ಟ್‌ ಅಲೆಯುತ್ತಾ ರಾಜಕೀಯ ಭವಿಷ್ಯ ಅರಸುತ್ತಿದ್ದಾರೆ. ಆದರೆ, ಪಕ್ಷೇತರರಾಗಿ ಗೆಲುವು ಸಂಪಾದಿಸಿದ್ದ ಎಚ್.ನಾಗೇಶ್‌ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರರಾಗಿದ್ದಾರೆ. ಈ ಕಾರಣದಿಂದಲೇ ಸ್ಪೀಕರ್‌ ರಮೇಶ್‌ಕುಮಾರ್‌ರ ಅನರ್ಹ ಪ್ರಹಾರದಿಂದ ತಪ್ಪಿಸಿಕೊಂಡಿದ್ದರು. ಇದೀಗ ಎಚ್.ನಾಗೇಶ್‌ ಬಿಜೆಪಿ ಸರ್ಕಾರದಲ್ಲಿ ಮೊದಲ ಹಂತದಲ್ಲಿಯೇ ಸಂಪುಟ ದರ್ಜೆಯ ಮಂತ್ರಿಯಾಗಿ ಮಂಗಳವಾರ ಪ್ರಮಾಣ ವಚನ ಸ್ಪೀಕರಿಸಿ ಗಮನ ಸೆಳೆದಿದ್ದಾರೆ.

ದೊಡ್ಡ ಖಾತೆಗೆ ಲಾಬಿ: ಮೈತ್ರಿ ಸರ್ಕಾರದಲ್ಲಿ ಸಣ್ಣ ಕೈಗಾರಿಕೆ ಖಾತೆಯನ್ನು ಧಿಕ್ಕರಿಸಿ ತೆರಳಿದ್ದ ಎಚ್.ನಾಗೇಶ್‌ ಈಗ ಬಿಜೆಪಿ ಸರ್ಕಾರದಲ್ಲಿ ದೊಡ್ಡ ಖಾತೆಗೆ ಪ್ರಯತ್ನಿಸುತ್ತಿದ್ದಾರೆ. ಅದರಲ್ಲೂ ತಾವು ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಇಂಧನ ಇಲಾಖೆಯ ಸಚಿವರಾಗಲು ಲಾಬಿ ನಡೆಸುತ್ತಿದ್ದಾರೆ. ಬಿಜೆಪಿ ತನ್ನ ಮಾತನ್ನು ಉಳಿಸಿಕೊಂಡು ಎಚ್.ನಾಗೇಶ್‌ರಿಗೆ ಇಂಧನ ಖಾತೆ ನೀಡುತ್ತದೋ ಇಲ್ಲ, ಮೈತ್ರಿ ಸರ್ಕಾರ ನೀಡಿದಂತೆ ಮತ್ತೇ ಸಣ್ಣ ಕೈಗಾರಿಕೆ ಖಾತೆಗೆ ತೃಪ್ತಿಪಡಿಸುತ್ತದೋ ಕಾದು ನೋಡಬೇಕಾಗಿದೆ.

 

● ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.