4 ಕೋಟಿ ರೂ.ವಂಚನೆ ಆರೋಪ: ದೂರು


Team Udayavani, Dec 20, 2020, 7:08 PM IST

4 ಕೋಟಿ ರೂ.ವಂಚನೆ ಆರೋಪ: ದೂರು

ಕೆಜಿಎಫ್: ಕೆರೆ, ರಾಜಕಾಲುವೆ ಒತ್ತುವರಿ ಮೊದಲಾದ ಆರೋಪಗಳನ್ನು ಎದುರಿಸುತ್ತಿದ್ದ ಸಿಂಧೂ ನಗರ ಬಡಾವಣೆಯ ನಿರ್ಮಾಣದಲ್ಲಿ ಪಾಲುದಾರರಿಗೆ 4ಕೋಟಿ ರೂ.ಮೋಸ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಆಂಡರಸನ್‌ಪೇಟೆ ಪೊಲೀಸರು ಸಾಗಂ ರಿಯಾಲಿಟಿ ಪ್ರçವೇಟ್‌ ಲಿಮಿಟೆಡ್‌ ಮಾಲೀಕ ಕಿರಣ್‌ ಕುಮಾರ್‌ ರೆಡ್ಡಿ, ಅವರ ಸಂಬಂಧಿಗಳಾದ ಸುರೇಂದ್ರ ರೆಡ್ಡಿ, ವೆಂಕಟಗಾಯತ್ರಿ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

ನಗರದ ಮಸ್ಕಂ/ಗೌತಮನಗರದ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ಸಿಂಧೂ ನಗರ ಬಡಾವಣೆ ನಿರ್ಮಾಣಮಾಡಲು4 ಕೋಟಿ ರೂ.ತೆಗೆದುಕೊಂಡು ನಂತರ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡುವುದಾಗಿ ಹೇಳಿ 43 ಸೈಟ್‌ಗಳನ್ನು ನೀಡದೇ ಸಾಗಂ ರಿಯಾಲಿಟಿಪ್ರçವೇಟ್‌ ಲಿಮಿಟೆಡ್‌ ಮೋಸ ಮಾಡಿದೆ ಎಂದುಆರೋಪಿಸಿ ಚಾವಾ ಗುರುವಯ್ಯ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ.

ಕೆಜಿಎಫ್ ನಗರದ ಮಸ್ಕಂನ ಸರ್ವೆ ನಂಬರ್‌  63 ರಲ್ಲಿ 5 ಎಕರೆ19 ಗುಂಟೆ ಜಮೀನನ್ನು ಭೂ ಪರಿವರ್ತನೆ ಮಾಡಲಾಗಿದೆ. ಅದರಲ್ಲಿ ಬಡಾವಣೆ ನಿರ್ಮಾಣ ಮಾಡುವುದಾಗಿ ಹೇಳಿದ್ದ ಆರೋಪಿಗಳು ನನ್ನಿಂದ ನಾಲ್ಕು ಕೋಟಿ ಪಡೆದಿದ್ದರು. ಹಣ ಪಡೆದ ಬದಲಿಗೆ 43 ಸೈಟ್‌ಗಳನ್ನು ನೀಡುವುದಾಗಿ ಹೇಳಿದ್ದರು. ಚೆಕ್‌ ನೀಡಿದ್ದರು: 2015ರ ಅಕ್ಟೋಬರ್‌ 17 ರಂದುಕರಾರುಪತ್ರ ಮಾಡಿಕೊಳ್ಳಲಾಯಿತು. ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸೈಟ್‌ಗಳನ್ನು ಅನುಮೋದನೆ ಮಾಡಿಸಿಕೊಂಡು 52,000 ಚದರ ಅಡಿ ಜಾಗ ನೀಡುವುದಾಗಿ ಹೇಳಿ, ಹಣ ಪಡೆದದ್ದಕ್ಕೆ ಚೆಕ್‌ಕೂಡ ನೀಡಿದ್ದರು.

ನಂತರ 2018 ಅ.25 ರಂದು ಸುರೇಂದ್ರ ರೆಡ್ಡಿ ಮತ್ತು ವೆಂಕಟಗಾಯತ್ರಿಯವರ ಅಕ್ಕನ ಮಗ ಕಿರಣ್‌ ಕುಮಾರ್‌ ರೆಡ್ಡಿ ನಿರ್ವಹಿಸುತ್ತಿರುವ ಸಾಗಂ ರಿಯಾಲಿಟಿ ಪ್ರೈವೇಟ್‌ ಲಿಮಿಟೆಡ್‌ಗೆ ಜಾಯಿಂಟ್‌ ವೆಂಚರ್‌ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಸೈಟ್‌ಗಳನ್ನು ನೀಡದೆ ಜೊತೆಗೆ ಹಣ ಕೂಡ ವಾಪಸ್‌ ನೀಡದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆಂಡರಸನ್‌ಪೇಟೆ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಸೆ.420 ಪ್ರಕರಣ ದಾಖಲುಮಾಡಿದ್ದಾರೆ.

ನ್ಯಾಯಾಲಯದಲ್ಲಿ ಪ್ರಕರಣ: ಈ ಮಧ್ಯೆ ಮಸ್ಕಂಗ್ರಾಮದ ಸರ್ವೆ ನಂಬರ್‌ 51, 55.1 ಮತ್ತು 63 ರ ಜಮೀನಿನಲ್ಲಿ ಬಡಾವಣೆಗಳನ್ನು ನಿರ್ಮಿಸುತ್ತಿದ್ದು, ಅದಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆ ಬಂದಿದ್ದರಿಂದ ಮತ್ತು ನ್ಯಾಯಾಲಯದಲ್ಲಿ ಪ್ರಕರಣವಿರುವುದರಿಂದ ನೋಂದಣಿ ಮಾಡಬಾರದು ಎಂದು ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರವು ಹಿರಿಯ ಉಪ ನೋಂದಣಾಧಿಕಾರಿಗಳಿಗೆ, ನಗರಸಭೆಗೆ ಮತ್ತು ಬೆಸ್ಕಾಂಗೆ ಪತ್ರ ಬರೆದಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.