ಶ್ರೀನಿವಾಸಪುರ: ದೇವಸ್ಥಾನದ ಪ್ರಸಾದ ಸೇವಿಸಿ ಸುಮಾರು 50 ಮಂದಿ ಅಸ್ವಸ್ಥ!


Team Udayavani, Jan 2, 2022, 11:48 AM IST

ಶ್ರೀನಿವಾಸಪುರ: ದೇವಸ್ಥಾನದ ಪ್ರಸಾದ ಸೇವಿಸಿ ಸುಮಾರು 50 ಮಂದಿ ಅಸ್ವಸ್ಥ!

ಕೋಲಾರ: ಪ್ರಸಾದ ಸೇವಿಸಿ ಸುಮಾರು ಐವತ್ತು ಮಂದಿ ವಾಂತಿಯಿಂದ ಅಸ್ವಸ್ಥರಾದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬೀರಗಾನಹಳ್ಳಿಯಲ್ಲಿ ಶನಿವಾರ ರಾತ್ರಿ ಜರುಗಿದೆ.

ಬೀರಗಾನಹಳ್ಳಿ ಗ್ರಾಮದ ಗಂಗಮ್ಮ ದೇವಾಲಯದಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು. ಪ್ರಸಾದವಾಗಿ ತಯಾರಿಸಿದ್ದ ಚಿತ್ರಾನ್ನ ಮತ್ತು ಕೇಸರಿಬಾತ್ ಅನ್ನು ಸೇವಿಸಿದ ಭಕ್ತರು ವಾಂತಿ ಮಾಡಿಕೊಂಡು ಅಸ್ವಸ್ಥರಾದ ಕಾರಣ ಈ ಘಟನೆ ಜರುಗಿತು.

ಹೊಸ ವರ್ಷಾಚರಣೆ ಪ್ರಯುಕ್ತ ಬೀರಗಾನಹಳ್ಳಿ ಗಂಗಮ್ಮ ದೇವಾಲಯದಲ್ಲಿ ಮಧ್ಯಾಹ್ನದಿಂದಲೂ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನದ ನಂತರ ಕೆಲವರಿಗೆ ವಾಂತಿಯಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸುಮ್ಮನಾಗಿದ್ದರು.

ಆದರೆ, ಸಂಜೆ ಮತ್ತು ರಾತ್ರಿಯ ವೇಳೆಗೆ ಪ್ರಸಾದ ಸೇವಿಸಿದ್ದ ಬಹುತೇಕ ಮಕ್ಕಳು, ಮಹಿಳೆಯರಿಗೆ ವಾಂತಿ ಶುರುವಾಗಿದೆ. ಹೀಗೆ ಪ್ರಸಾದ ಸೇವಿಸಿದವರಿಗೆ ವಾಂತಿಯಾಗುತ್ತಿದೆಯೆಂಬ ಮಾಹಿತಿ ಹರಡುತ್ತಿದ್ದಂತೆಯೇ ಪ್ರಸಾದ ಸೇವಿಸಿದ ಇತರರಿಗೂ ಅಸ್ವಸ್ಥತೆ ಕಾಡಿದೆ. ಇದರಿಂದ ಶನಿವಾರ ರಾತ್ರಿ ವೇಳೆಗೆ ಶ್ರೀನಿವಾಸಪುರ ಸರಕಾರಿ ಆಸ್ಪತ್ರೆ, ಹಲವು ಖಾಸಗಿ ನರ್ಸಿಂಗ್ ಹೋಂ, ಆಸ್ಪತ್ರೆಗಳು, ಯಲ್ದೂರು ಆಸ್ಪತ್ರೆ ಇತ್ಯಾದಿಗಳೆಡೆಯಲ್ಲಿ ಪ್ರಸಾದ ಸೇವಿಸಿದವರು ಚಿಕಿತ್ಸೆಗೆ ಧಾವಿಸಿದ್ದಾರೆ. ಇದರಿಂದ ಸಾರ್ವಜನಿಕವಾಗಿ ತೀವ್ರ ಆತಂಕ ಉಂಟಾಗಿತ್ತು.

ಆದರೆ, ವಾಂತಿ ಮತ್ತು ಗಾಬರಿಯಿಂದಾಗಿ ಕೊಂಚ ಸುಸ್ತಾಗಿ ಅಸ್ವಸ್ಥರಾಗಿದ್ದವರಿಗೆ ಪ್ರಾಥಮಿಕ ಚಿಕಿತ್ಸೆ ಮತ್ತು ಕೆಲವರಿಗೆ ಗ್ಲೂಕೋಸ್ ನೀಡಿ ಕಳುಹಿಸಲಾಗಿದೆ. ಯಾರ ಪ್ರಾಣಕ್ಕೂ ಅಪಾಯವಾಗಿರುವ ವರದಿಗಳಿಲ್ಲ. ಕೆಲವರು ರಾತ್ರಿಯೇ ಚಿಕಿತ್ಸೆ ಪಡೆದು ಮನೆಗಳಿಗೆ ವಾಪಸಾಗಿದ್ದಾರೆ.

ಇದನ್ನೂ ಓದಿ:ಅನಾಥನಿಗೆ ಪ್ರೀತಿ ತೋರಿದ ನಾಯಿ:ವೈರಲ್ ವಿಡಿಯೋ; ಕಣ್ಣೀರಿಟ್ಟ ನೆಟಿಜನ್‌ಗಳು

ಗ್ರಾಮಕ್ಕೆ ಶ್ರೀನಿವಾಸಪುರ ಆರೋಗ್ಯಾಧಿಕಾರಿ ವಿಜಯ ಭೇಟಿ ನೀಡಿ ಪರಿಶೀಲಿಸಿದರು. ಪರಿಸ್ಥಿತಿ ಹತೋಟಿಯಲ್ಲಿರುವುದನ್ನು ಖಚಿತಪಡಿಸಿಕೊಂಡರು. ಭಾನುವಾರ ಬೆಳಿಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಗದೀಶ್ ಶ್ರೀನಿವಾಸಪುರ ಆಸ್ಪತ್ರೆ ಮತ್ತು ಘಟನೆ ನಡೆದ ಬೀರಗಾನಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯಮುನ್ನೆಚ್ಛರಿಕೆ ಕ್ರಮವಹಿಸುವಂತೆ ಸೂಚಿಸಿದರು.

ಬೀರಗಾನಹಳ್ಳಿ ಗಂಗಮ್ಮ ದೇವಿಯ ದೇವಾಲಯದ ಪ್ರಸಾದ ಹಾಗೂ ಇನ್ನಿತರ ಜಲ ಮೂಲಗಳನ್ನು ಆರೋಗ್ಯಾಧಿಕಾರಿಗಳು ಪರಿಶೀಲಿಸುತ್ತಿದ್ದು, ಘಟನೆಗೆ ಕಾರಣವೇನೆಂದು ಪತ್ತೆ ಹಚ್ಚುವ ಪ್ರಯತ್ನ ಮುಂದುವರೆಸಿದ್ದಾರೆ.

ಇಬ್ಬರ ಬಂಧನ: ಬೀರಗಾನಹಳ್ಳಿಯ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಶ್ರೀನಿವಾಸಪುರ ಪೊಲೀಸರು ಪ್ರಸಾದ ತಯಾರಿಸಿಕೊಂಡು ಬಂದಿದ್ದ ಇಬ್ಬರನ್ನು ವಶಪಡಿಸಿಕೊಂಡು ವಿಚಾರಣೆ ಮಾಡುತ್ತಿದ್ದಾರೆಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.