ಸೋಂಕಿತರಲ್ಲಿ 7 ಮಂದಿ ಲಾರಿ ಚಾಲಕರು


Team Udayavani, May 20, 2020, 7:38 AM IST

sonkitaralli

ಕೋಲಾರ: ಎಪಿಎಂಸಿ ಮಾರುಕಟ್ಟೆಗಳಲ್ಲಿ ಕೋವಿಡ್ 19 ಪಾಸಿಟಿವ್‌ ಪ್ರಕರಣಗಳು ಪತ್ತೆ ಯಾದಲ್ಲಿ ಮಾರುಕಟ್ಟೆಯ ವಹಿವಾಟನ್ನೇ ಬಂದ್‌ ಮಾಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಎಚ್ಚರಿಸಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಎಪಿಎಂಸಿ ಅಧ್ಯಕ್ಷರು, ಲಾರಿ ಚಾಲಕರ ಅಸೋಸಿಯೇಷನ್‌, ವರ್ತಕರ ಸಂಘದ ಪ್ರತಿನಿಧಿಗಳ ಜತೆ ಸಭೆ ನಡೆಸಿ ಮಾತನಾಡಿದರು.

ಹಸಿರು ವಲಯವಾಗಿದ್ದ ಜಿಲ್ಲೆಯಲ್ಲೂ ಕಂಡು ಬಂದ 9 ಕೋವಿಡ್ 19  ಸೋಂಕಿನ ಪ್ರಕರಣ ಗಳಲ್ಲಿ 7 ಮಂದಿ ಅಂತರರಾಜ್ಯ ಸಾಗಾಣಿಕೆ  ಮಾಡುವ ಲಾರಿ ಚಾಲಕರೇ ಆಗಿರುವುದರಿಂದಎಪಿಎಂಸಿ ಆಡಳಿತ ಮಂಡಳಿ ಹೆಚ್ಚಿನ ನಿಗಾ  ವಹಿಸಬೇಕು ಎಂದು ಸೂಚನೆ ನೀಡಿದರು. ಎಪಿಎಂಸಿಗೆ ಬರುವ ಲಾರಿ,  ಚಾಲಕರು, ಕ್ಲೀನರ್‌ಗಳ ಬಗ್ಗೆ ಎಚ್ಚರಿಕೆ ಇರಲಿ,

ಆರೋಗ್ಯ ತಪಾಸಣೆಗೆ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸುವು ದು ಸೇರಿದಂತೆ ಎಲ್ಲಾ ರೀತಿಯ ಸಹ  ಕಾರ ಜಿಲ್ಲಾಡಳಿತ ನೀಡುತ್ತದೆ. ಕೋವಿಡ್ 19 ಹಿನ್ನೆಲೆಯಲ್ಲಿ ನಮ್ಮ  ನಡವಳಿಕೆಯಲ್ಲಿ ಬದಲಾವಣೆಯಾಗಬೇಕು, ಎಪಿಎಂಸಿ ಆಡಳಿತ ಮಂಡ ಳಿಗೆ ಅಧಿಕಾರ ಇದೆ, ಮಾತು ಕೇಳದವರಿಗೆ ಪೊಲೀಸರ ಸಹಕಾರ ಪಡೆದು ಕ್ರಮ ತೆಗೆದುಕೊಳ್ಳಿ ಎಂದು ಎಪಿಎಂಸಿ ಅಧ್ಯಕ್ಷರಿಗೆ ಸೂಚಿಸಿದರು.

ಸೋಂಕು ಬಂದರೆ ಎಪಿಎಂಸಿ ಬಂದ್‌: ಎಪಿಎಂಸಿಯಲ್ಲಿ ದೈಹಿಕ ಅಂತರ ಪಾಲನೆಯಾಗುತ್ತಿಲ್ಲ ಎಂದು ಹಲವು ಬಾರಿ ದೂರು ಬಂದಾಗಲೆಲ್ಲಾ ತಹಶೀಲ್ದಾರ್‌ರನ್ನು ಕಳುಹಿಸಿಕೊಟ್ಟಿದ್ದೆ, ನಿಮ್ಮ ಜವಾಬ್ದಾರಿ ಸರಿಯಾಗಿ ನಿಭಾಯಿಸಿದರೆ ಯಾವುದೇ ಸಮಸ್ಯೆ ಆಗುವುದಿಲ್ಲ, ನಿರ್ಲಕ್ಷ ವಹಿಸಿ ಕೋವಿಡ್ 19 ಪಾಸಿಟಿವ್‌ ಬಂದರೆ ಎಪಿಎಂಸಿ ಬಂದ್‌ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸರಕು ಸಾಗಾಣಿಕೆ, ಅತ್ಯವಶ್ಯಕ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಲಾಕ್‌ ಡೌನ್‌ನಿಂದ ವಿನಾಯಿತಿ ನೀಡಲಾಗಿದೆ. ಜಿಲ್ಲೆ ಯಿಂದ ಅಂತರ್‌ರಾಜ್ಯಕ್ಕೆ ಸಂಚರಿಸಿದ ಲಾರಿ ಚಾಲಕರಿಗೇ ಹೆಚ್ಚು ಸೋಂಕು ಕಾಣಿಸಿ ಕೊಂಡಿದೆ. ಈ ಹಿನ್ನೆಲೆಯಲ್ಲಿ ಲಾರಿ ಚಾಲಕರು ಎಚ್ಚರ ವಹಿಸಬೇಕು ಎಂದರು. ಎಪಿಎಂಸಿ ಅಧ್ಯಕ್ಷ  ವಡಗೂರು ನಾಗರಾಜ್‌ ಮಾತನಾಡಿ, ಆಂಧ್ರ, ತಮಿಳುನಾಡು ರಾಜ್ಯ ಗಳಿಗೆ ಹೋಗಿರುವ ಲಾರಿ ಚಾಲಕರನ್ನು ಆ ರಾಜ್ಯದ ಗಡಿಯೊಳಕ್ಕೆ ಚೆಕ್‌ ಪೋಸ್ಟ್‌ನಲ್ಲಿ ಬಿಡುವುದಿಲ್ಲ,

ಹಲ್ಲೆ ನಡೆಸಿರುವ ಕುರಿತು ರಾಜ್ಯ ಮುಖ್ಯ ಕಾರ್ಯದರ್ಶಿಗಳ  ಗಮನಕ್ಕೆ ತರುವಂತೆ ತಿಳಿಸಿದರು. ಮುಂದಿನ ಎರಡು ಭಾನುವಾರ ಲಾಕ್‌ ಡೌನ್‌ ಕಡ್ಡಾಯಗೊಳಿಸಿರುವ ಬಗ್ಗೆ ಸಿಎಂ ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ 5 ಎಪಿಎಂಸಿಗಳಿಗೂ ರಜೆ ನೀಡುತ್ತೇವೆ. ಇದರಿಂದ ಪ್ರಾಂಗಣ ಸ್ವಚ್ಛತೆಗೆ  ಸಹಾಯ ವಾಗುತ್ತದೆ ಎಂದರು.ಜಿಪಂ ಸಿಇಒ ಎಚ್‌.ವಿ. ದರ್ಶನ್‌, ಅಪರ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ, ಉಪವಿಭಾಗಾಧಿಕಾರಿ ಸೋಮಶೇಖರ್‌, ತಹಸೀಲ್ದಾರ್‌ ಶೋಭಿತಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.