ರೈತರಿಗೆ ಸಮಗ್ರ ಕೃಷಿ ಅಭಿಯಾನ ಸಹಕಾರಿ
ಪ್ರಚಾರ ವಾಹನಕ್ಕೆ ಚಾಲನೆ ನೀಡಿದ ಶಾಸಕಿ ಎಂ.ರೂಪಕಲಾ
Team Udayavani, Jun 20, 2019, 2:03 PM IST
ಬೇತಮಂಗಲದ ಕೃಷಿ ಇಲಾಖೆ ಆವರಣದಲ್ಲಿ ಪ್ರಚಾರ ರಥಕ್ಕೆ ಶಾಸಕಿ ರೂಪಕಲಾ, ಜಿಪಂ ಸದಸ್ಯೆ ನಿರ್ಮಲಾ ಹಸಿರು ನಿಶಾನೆ ತೋರಿಸಿದರು.
ಬೇತಮಂಗಲ: ರೈತರಿಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಕೃಷಿ ಅಭಿಯಾನ ಸಹಕಾರಿಯಾಗಿದೆ ಎಂದು ಶಾಸಕಿ ಎಂ.ರೂಪಕಲಾ ಹೇಳಿದರು.
ರೈತರಿಗೆ ಸಮಗ್ರ ಮಾಹಿತಿ ಒದಗಿಸುವ ಪ್ರಚಾರ ವಾಹನಕ್ಕೆ ಗ್ರಾಮದ ರೈತ ಸಂಪರ್ಕ ಕೇಂದ್ರ ಬಳಿ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ರೈತರು ಇಲಾಖೆಗಳಿಗೆ ಭೇಟಿ ನೀಡಿ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಇಳುವರಿ ಜತೆಗೆ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಈ ಪ್ರಚಾರ ರಥವು ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಲಿದ್ದು, ರೈತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಿದೆ. ರೈತರು ಮನೆ ಬಾಗಿಲಿಗೆ ಬಂದು ಪ್ರಚಾರ ಮಾಡುವುದರಿಂದ ಎಲ್ಲರಿಗೂ ಸೌಲಭ್ಯಗಳ ಮಾಹಿತಿ ಸಿಗಲಿದೆ. ಈ ಅಭಿಯಾನ 6 ದಿನಗಳ ಕಾಲ ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯಲಿದೆ. ಆದರೆ, 10 ದಿನಗಳವರೆಗೂ ಪ್ರಚಾರ ಮಾಡಿ ಕಾರ್ಯಕ್ರಮದ ಉದ್ದೇಶ ಯಶಸ್ವಿಗೊಳಿಸಬೇಕೆಂದು ಶಾಸಕಿ ಸೂಚಿಸಿದರು.
ಈ ವೇಳೆ ರೇಷ್ಮೆ, ಮೀನುಗಾರಿಕೆ, ಪಶುಸಂಗೋಪನೆ, ತೋಟಗಾರಿಕೆ ಇಲಾಖೆಗಳಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಕರಪತ್ರಗಳನ್ನು ಶಾಸಕಿ ರೂಪಕಲಾ ಬಿಡುಗಡೆ ಮಾಡಿದರು. ಜಿಪಂ ಸದಸ್ಯೆ ನಿರ್ಮಲಾ, ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ್, ಗ್ರಾಪಂ ಅಧ್ಯಕ್ಷ ಕಿರಣ್ಕುಮಾರ್, ಗ್ರಾಪಂ ಸದಸ್ಯರಾದ ಮಂಜುನಾಥ್, ವಿನುಕಾರ್ತಿಕ್, ತಾಪಂ ಸದಸ್ಯ ನಾರಾಯಣಪ್ಪ, ತಹಶೀಲ್ದಾರ್ ರಮೇಶ್, ಉಪತಹಶೀಲ್ದಾರ್, ಕೃಷಿ ನಿರ್ದೇಶಕ ನಾಗರಾಜ್, ವಸಂತರೆಡ್ಡಿ, ಸಂಪತ್, ನಿವೃತ್ತ ಕೃಷಿ ಅಧಿಕಾರಿ ಸೋಮಸುಂದರ್, ಮೀನುಗಾರಿಕೆ ಸಹಾಯಕ ನಿರ್ದೇಶಕ ಲಕ್ಷ್ಮೀಕಾಂತ್, ತೋಟಗಾರಿಕೆ ಅಧಿಕಾರಿ ರಾಮೂರ್ತಿ, ರೇಷ್ಮೆ ಶ್ರೀನಿವಾಸ್, ಎಚ್ಸಿಒ ಶ್ರೀನಿವಾಸ್, ಮುಖಂಡರಾದ ರಾಧಾಕೃಷ್ಣರೆಡ್ಡಿ, ಪದ್ಮನಾಭರೆಡ್ಡಿ, ರೈತರು, ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್