ಬಡವರ ನಿವೇಶನ ಕಬಳಿಕೆ: ಕ್ರಮಕ್ಕೆ ಮನವಿ
Team Udayavani, Oct 18, 2019, 3:55 PM IST
ಕೋಲಾರ: ಕಸಬಾ ಹೋಬಳಿ ಸರ್ವೆ ನಂ.128, ವಾರ್ಡ್ ನಂ.14ರಲ್ಲಿ 1975-76ರಲ್ಲಿ ಬಡವರಿಗೆ ಸೂರು ನೀಡುವ ನಿಟ್ಟಿನಲ್ಲಿ ಕ್ಷೇತ್ರ ಅಭಿವೃದ್ಧಿ ಅಧಿಕಾರಿಗಳು ನಿವೇಶನ ನೀಡಿದ್ದು, ಈ ಜಮೀನನ್ನು ಬಲಾಡ್ಯರು ಕಬಳಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್, ದಲಿತ ಮುಖಂಡರಾದ ಪಿ.ಸಿ.ಬಡಾವಣೆಯ ಸುಬ್ರಮಣಿ, ನಗರಸಭೆ ಪೌರಾಯುಕ್ತರಲ್ಲಿ ದೂರು ನೀಡಿದ್ದಾರೆ.
ಬಡವರು ಮನೆಗಳನ್ನು ಕಟ್ಟಿಕೊಳ್ಳಲು ಆರ್ಥಿಕವಾಗಿ ಶಕ್ತರಿಲ್ಲದ ಕಾರಣ, ಮನೆಗಳನ್ನು ಕಟ್ಟಿಕೊಳ್ಳದೆ ಇಷ್ಟು ವರ್ಷಗಳ ಕಾಲ ಇದ್ದು, ಈಗ ಈ ಜಮೀನು ಖಾಲಿ ಇರುವ ವಿಷಯವನ್ನು ಅರಿತ ಕೆಲ ಭೂ ಮಾಫಿಯಾದವರು ಜಮೀನು ಕಬಳಿಸಲು ಹಾಗೂ ಬಡವರಿಗೆ ಕೊಟ್ಟಿರುವ ನಿವೇಶನಗಳನ್ನು ಕಬಳಿಸುವ ನಿಟ್ಟಿನಲ್ಲಿ ಕೆಲ ರಾಜಕೀಯ ಪ್ರಭಾವಿಗಳಿಂದ ಹಾಗೂ ಕೆಲ ಅಧಿಕಾರಿಗಳಿಂದ ಅಧಿಕಾರವನ್ನು ದುರ್ಬಳಕೆ ಮಾಡಿ ಸುಳ್ಳು ದಾಖಲೆ ಸೃಷ್ಟಿಸಿ ಅಧಿಕಾರಿಗಳಿಗೆ ಹಾಗೂ ಬಡವರಿಗೆ ವಂಚನೆ ಮಾಡಿರುವುದು ಖಂಡನೀಯ ಎಂದು ದೂರಿದರು.
ನಿವೇಶನದಾರರಿಗೆ ಮನೆ ಕಟ್ಟಿಕೊಳ್ಳಲು ಈ-ಖಾತೆ ಮತ್ತು ರವಾನಗಿ ಮಾಡಿಕೊಟ್ಟು, ಕಡು ಬಡವರ ಹೊಟ್ಟೆ ಮೇಲೆ ಹೊಡೆಯುವ ಭೂಮಾಫಿಯಾ ದಂಧೆಕೋರರನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್, ದಲಿತ ಮುಖಂಡರಾದ ಪಿ.ಸಿ.ಬಡಾವಣೆಯ ಸುಬ್ರಮಣಿ, ಶ್ರೀಕಾಂತ್, ರಾಜು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್