ಆಲಿಕಲ್ಲು ಮಳೆಗೆ ಸಾವಿರಾರು ಎಕರೆ ಬೆಳೆ ಹಾನಿ


Team Udayavani, Mar 21, 2023, 1:30 PM IST

tdy-14

ಕೋಲಾರ: ಇತ್ತೀಚೆಗೆ ಸುರಿದ ಅಕಾಲಿಕ ಆಲಿಕಲ್ಲು ಮಳೆ, ಬಿರುಗಾಳಿಯಿಂದಾಗಿ ಜಿಲ್ಲೆಯಾದ್ಯಂತ ಸಾವಿರಾರು ಎಕರೆ ಪ್ರದೇಶದಲ್ಲಿ ವಿವಿಧ ಬೆಳೆಗಳು ಹಾನಿಯಾಗಿದ್ದು, ತಾಲೂಕಿನ ಕೋರಗಂಡನಹಳ್ಳಿ, ಕೋನೇಪುರ ರೈತರ ವಿವಿಧ ತೋಟಗಳಿಗೆ ಸಂಸದ ಎಸ್‌. ಮುನಿಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೋರಗಂಡನಹಳ್ಳಿ, ಕೋನೇಪುರದ ರೈತರಾದ ನಾಗೇಶ್‌ ಅವರಿಗೆ ಸೇರಿದ 1 ಎಕರೆಯಲ್ಲಿನ ಕೋಸು, ನಾಗರಾಜ್‌ ಅವರ 1 ಎಕರೆ ಬೀನ್ಸ್‌, ಮಂಜು ಎಂಬುವರ ಆಲೂಗಡ್ಡೆ, ರಮೇಶ್‌ ಎಂಬುವರ ಟೊಮಟೋ ತೋಟಗಳನ್ನು ವೀಕ್ಷಿಸಿದರು. ಬೆಳೆ ಹಾನಿಯಾಗಿ 3-4 ದಿನಗಳಾಗಿದ್ದರೂ, ಅಧಿಕಾರಿಗಳು ಈವರೆಗೂ ಸ್ಥಳ ಪರಿಶೀಲನೆಗೆ ಆಗಮಿಸಿಲ್ಲವೆಂದು ಇದೇ ವೇಳೆ ಸಂಸದರಿಗೆ ಅಲ್ಲಿನ ರೈತರು ತಿಳಿಸಿದರು.

ಹಾನಿಯಾದ ಪ್ರದೇಶ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಎಸ್‌. ಮುನಿಸ್ವಾಮಿ, ಆರು ತಾಲೂಕುಗಳಿಂದ 2,600 ಹೆಕ್ಟೇರ್‌ ಮಾವಿನ ಬೆಳೆ ನಾಶವಾಗಿದೆ. ಕೋಸು, ಜೋಳ, ಹೂವು, ಆಲೂಗಡ್ಡೆ, ಟೊಮೆಟೋ, ಬೀನ್ಸ್‌ ಬೆಳೆಗೂ ಹಾನಿ ಉಂಟಾಗಿದೆ ಎಂದು ತಿಳಿಸಿದರು.

ಸರ್ಕಾರ ರೈತರ ಪರವಾಗಿದೆ: ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದು, ನಷ್ಟಕ್ಕೆ ಪರಿಹಾರ ಭರಿಸುವ ಕೆಲಸವನ್ನು ಶೀಘ್ರದಲ್ಲೇ ಮಾಡಲಿದ್ದೇವೆ. ದಯವಿಟ್ಟು ರೈತರು ವಿಮೆ ಮಾಡಿಸಬೇಕು ಎಂದು ಮನವಿ ಮಾಡಿದರು. ಜಿಲ್ಲೆಯಲ್ಲಿ ಮಾ.16ರಂದು ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದ ಸಾವಿರಾರು ರೈತರಿಗೆ ನಷ್ಟ ಉಂಟಾಗಿದೆ. ಕೈಗೆ ಬಂದ ಫಸಲು ಬಾಯಿಗೆ ಬಾರದಂತಾಗಿದೆ ಎಂದರು.

ರೈತರಿಂದ ಮಾಹಿತಿ ಪಡೆದು ಅಂದಾಜು ಸಮೀಕ್ಷೆ : ಅಧಿಕಾರಿಗಳನ್ನು ಕಳುಹಿಸಿ ಸಮೀಕ್ಷೆ ನಡೆಸಲು ಸೂಚಿಸಿದ್ದೆ. ರೈತರಿಂದ ಮಾಹಿತಿ ಪಡೆದು ಅಂದಾಜು ಸಮೀಕ್ಷೆ ತಯಾರಿಸಿದ್ದಾರೆ. ಅಕಾಲಿಕ ಮಳೆಯಿಂದ ಹಾನಿ ಆಗಿದ್ದರೆ ಎನ್‌ಡಿಆರ್‌ಎಫ್‌ನಡಿ 1 ಹೆಕ್ಟೇರ್‌ ಬೆಳೆಗೆ 22 ಸಾವಿರ ನೀಡುತ್ತಾರೆ. ತರಕಾರಿಗೆ ನಷ್ಟ ವಾಗಿದ್ದರೆ ಎಕರೆಗೆ 18 ಸಾವಿರವರೆಗೆ ಸಿಗಲಿದೆ. ಜತೆಗೆ ಬೆಳೆ ನಷ್ಟ ವಾದವರು ಫಸಲ್‌ ಬಿಮಾ ಯೋಜನೆಯಡಿ 4,600 ಮಂದಿ ವಿಮೆ ಮಾಡಿಸಿದ್ದು, ಅವರಿಗೆ ಎಕರೆಗೆ ಕನಿಷ್ಟ 88 ಸಾವಿರವರೆಗೆ ಪರಿಹಾರ ಸಿಗಲಿದೆ ಎಂದರು. ಚುನಾವಣೆ ಸಮೀಪಿಸಿರುವುದರಿಂದ ಸದ್ಯದಲ್ಲೇ ನೀತಿ ಸಂಹಿತೆ ಜಾರಿಯಾಗಲಿದೆ. ಹಾಗಾಗಿ ತಡ ಮಾಡದೆ ಅಧಿಕಾರಿಗಳೊಂದಿಗೆ ಸಮೀಕ್ಷೆ ನಡೆಸಿ, ರೈತರಿಗೆ ಬೆಳೆ ನಷ್ಟ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ಭರವಸೆ ನೀಡಿದರು.

ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಪೈಪೋಟಿ: ಸಿದ್ದರಾಮಯ್ಯ ಯುಟರ್ನ್ ಹೊಡೆಯುತ್ತಾರೆ ಎಂದು ಹಿಂದೆಯೇ ಹೇಳಿದ್ದೆ. ಕೋಲಾರದವರು ಬುದ್ಧಿವಂತರು. ಇಲ್ಲಿರುವುದು ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಮಾತ್ರ ಪೈಪೋಟಿ. ಕಾಂಗ್ರೆಸ್‌ ಬೂತ್‌ಗಳಲ್ಲಿ ಏಜೆಂಟರೇ ಇಲ್ಲ. ಕಾಂಗ್ರೆಸ್‌ನಲ್ಲಿ ನಾಲ್ಕೈದು ತಂಡಗಳಿರುವುದು ವರಿಷ್ಠರಿಗೆ ಮನವರಿಕೆ ಆಗಿದೆ. ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ವಿಚಾರವಾಗಿ ಗೊಂದಲವಿದೆ. ಅವರಲ್ಲೇ ಜಗಳವಿರುವುದರಿಂದಾಗಿ ಸಿದ್ದರಾಮಯ್ಯ ವಾಪಸ್‌ ಹೋಗಿದ್ದಾರೆ ಎಂದ ಅವರು, ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಖಚಿತ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಬೆಗ್ಲಿ ಸಿರಾಜ್‌, ರಘು, ದಿಶಾ ಸಮಿತಿ ಸದಸ್ಯ ಅಪ್ಪಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

ಸಿಎಂ ಆಗಿದ್ದವರಿಂದ ಕ್ಷೇತ್ರಕ್ಕೆ ಪರದಾಟ: ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಒಂದು ಕ್ಷೇತ್ರ ಹುಡುಕಿಕೊಳ್ಳಲು ಇಷ್ಟೊಂದು ಪರಿತಪಿಸಬೇಕೇ, ಜೋಳಿಗೆ ಕಟ್ಟಿಕೊಂಡು ತಿರುಗಾಡಬೇಕೇ? ಬೇರೆಲ್ಲೂ ಸಲ್ಲದವರು ಕೋಲಾರದಲ್ಲಿ ಸಲ್ಲುವರೇ ಎಂದು ಸಂಸದ ಎಸ್‌. ಮುನಿಸ್ವಾಮಿ ಲೇವಡಿ ಮಾಡಿ, ಪ್ರಶ್ನಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.