ಅಕ್ರಮದಲ್ಲಿ ತೊಡಗಿದರೆ ಕ್ರಮ: ಎಸ್ಪಿ

ಜನತೆಗೆ ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ ಎಚ್ಚರಿಕೆ

Team Udayavani, Jun 28, 2019, 3:14 PM IST

kolar-tdy-3

ಮುಳಬಾಗಿಲು: ಉತ್ತಮ ಸಮಾಜಕ್ಕೆ ಪ್ರತಿಯೊಬ್ಬ ನಾಗರಿಕರು ಪೊಲೀಸರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳಬೇಕಿದ್ದು ಯಾರೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನೂತನ ಜಿಲ್ಲಾ ರಕ್ಷಣಾಧಿಕಾರಿ ಕಾರ್ತಿಕ್‌ರೆಡ್ಡಿ ಎಚ್ಚರಿಕೆ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್‌ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೂ ಮುಖ್ಯವಾಗಿ ಅಪರಾಧಗಳ ತಡೆಗೆ ಅಲ್ಲದೇ ಅಪರಾಧ ಪತ್ತೆಗಾಗಿ ಪೊಲೀಸರು ಸಾಕಷ್ಟು ಕ್ರಮ ಕೈಗೊಳ್ಳುತ್ತಿರುವುದರೊಂದಿಗೆ ಜನರೂ ಸಾಕಷ್ಟು ಜಾಗೃತಿ ವಹಿಸಬೇಕೆಂದರು.

ಎಚ್ಚರವಾಗಿರಿ: ಮನೆಯ ಬಾಗಿಲಿಗೆ ಒಳಗಡೆಯಿಂದ ಡೋರ್‌ ಲಾಕ್‌ ಅಳವಡಿಸಿ ಕಳುವಾಗುವುದನ್ನು ತಪ್ಪಿಸಿ, ಅಪರಿಚಿತರು ಮನೆಗೆ ಬಂದರೆ ಪರೀಕ್ಷಿಸದೇ ಒಳಗೆ ಕರೆದುಕೊಳ್ಳಬಾರದು, ಮಹಿಳೆಯರು ರಸ್ತೆಯಲ್ಲಿ ನಡೆದು ಹೋಗುವಾಗ ನಿಮ್ಮ ಹಿಂದೆ ಮತ್ತು ಮುಂದೆ ಓಡಾಡುವ ಅಪರಿಚಿತರ ಬಗ್ಗೆ ಎಚ್ಚರವಾಗಿರಬೇಕೆಂದರು.

ಡಕಾಯಿತರು ನುಗ್ಗಿದರೆ ಕಾರದ ಪುಡಿ ಎರಚಿ: ನಿಮ್ಮ ಮನೆಯ ಹತ್ತಿರ ಬೆಲೆಬಾಳುವ ಚಿನ್ನದ ಆಭರಣಗಳಿಗೆ ಪಾಲೀಶ್‌ ಮಾಡುವವರನ್ನು ಟಿವಿ, ಫ್ರಿಜ್ಡ್, ಗ್ಯಾಸ್‌, ಸ್ಟವ್‌ ರಿಪೇರಿ ಮಾಡುವವರೆಂದು ಬರುವವರ ಬಗ್ಗೆ ಎಚ್ಚರದಿಂದಿರಿ, ಆಟೋ ರಿಕ್ಷಾ, ಟ್ಯಾಕ್ಸಿಗಳಲ್ಲಿ ಹತ್ತುವ ಮೊದಲು ಅದರ ಸಂಖ್ಯೆ ಗುರುತು ಮಾಡಿಕೊಳ್ಳಿ. ಮನೆಯಲ್ಲಿ ಬೆಲೆ ಬಾಳುವ ಬಂಗಾರ, ಬೆಳ್ಳಿ ಆಭರಣ, ಹಣ ಇಡದೇ ಬ್ಯಾಂಕ್‌ ಲಾಕರ್‌ನಲ್ಲಿಡಿ, ಮನೆಗಳಿಗೆ-ಅಂಗಡಿಗಳಿಗೆ ಸಿ.ಸಿ ಕ್ಯಾಮೆರಾ ಅಳವಡಿಸಿಕೊಳ್ಳಿ ಒಂದು ವೇಳೆ ಮನೆಗೆ ಅಪರಿಚಿತ ಡಕಾಯಿತರು ನುಗ್ಗಲು ಪ್ರಯತ್ನಿಸಿದರೆ ಕಣ್ಣಿಗೆ ಕಾರದ ಪುಡಿ ಎರಚಿ ಹೊಡೆದು ಹಿಡಿಯಿರಿ ಎಂದು ಹೇಳಿದರು.

ಅಪರಾಧ ಪ್ರಕರಣಕ್ಕೆ ಕಡಿವಾಣ ಹಾಕಿ: ನಿಮ್ಮ ಕಾರು ಅಥವಾ ಜೀಪುಗಳಲ್ಲಿ ವಸ್ತುಗಳನ್ನು ಇಟ್ಟು ಬೀಗ ಹಾಕದೇ ಇರಬೇಡಿ. ಎಟಿಎಂ ಕಾರ್ಡ್‌ ಹಿಂದೆ ನಿಮ್ಮ ಗುಪ್ತ ಪಿನ್‌ ಕೋಡನ್ನು ಬರೆಯಬೇಡಿ. ಎಟಿಎಂನಲ್ಲಿ ಹಣ ಪಡೆಯುವಾಗ ಅಪರಿಚಿತರ ಸಹಾಯ ಪಡೆಯಬೇಡಿ. ಮೈಮೇಲೆ ಹೇಸಿಗೆ ಎರಚಿ ಗಮನ ಬೇರೆಡೆ ಸೆಳೆದು ಹಣದ ಚೀಲ/ಪೆಟ್ಟಿಗೆ ಕದಿಯುತ್ತಿರುವ ಕಳ್ಳರ ಬಗ್ಗೆ ಎಚ್ಚರವಿರಲಿ. ಅಪರಿಚಿತರು-ಸಂಯಾಸ್ಪದ ವ್ಯಕ್ತಿಗಳು ದಾಖಲೆಯಿಲ್ಲದೇ ಮೊಬೈಲ್ ಅಥವಾ ಇನ್ನಾವುದೇ ಸ್ವತ್ತಿನ ವಸ್ತುಗಳನ್ನು ಮಾರಾಟ ಮಾಡಲು ಅಥವಾ ಅಡ ಇಡಲು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಪರಾಧಗಳಿಗೆ ಕಡಿವಾಣ ಹಾಕಬೇಕೆಂದರು.

ಕೆಲಸದಲ್ಲಿ ನಿರ್ಲಕ್ಷ್ಯಿಸಿದರೆ ದೂರು ಕೊಡಿ:

ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವುದೇ ತಮ್ಮ ಮೂಲ ಉದ್ದೇಶ. ಯಾರೇ ಜನಸಾಮಾನ್ಯರು ಪೊಲೀಸ ಠಾಣೆಗೆ ಬಂದರೂ ಪೊಲೀಸರಿಗೆ ಭಯಪಡದೇ ಕಾನೂನು ಸಲಹೆ ಪಡೆದುಕೊಳ್ಳಬಹುದು, ಒಂದು ವೇಳೆ ಯಾವುದೇ ಪೊಲೀಸರು ತಮ್ಮ ಕೆಲಸ ಮಾಡಿಕೊಡದೇ ನಿರ್ಲಕ್ಷ್ಯಿಸಿದ್ದಲ್ಲಿ ಅವರ ಹೆಸರನ್ನು ತಿಳಿದುಕೊಂಡು ಅವರ ವಿರುದ್ಧ ತಮ್ಮ ಕಚೇರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು, ಅದರೊಂದಿಗೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಜನಸಾಮಾನ್ಯರೂ ಪೊಲೀಸರು ಸೂಚಿಸುವ ಮುಂಜಾಗ್ರತಾ ಕ್ರಮ ಪಾಲಿಸುತ್ತಾ ಉತ್ತಮ ಸಮಾಜಕ್ಕೆ ಪ್ರತಿಯೊಬ್ಬ ನಾಗರಿಕರು ಪೊಲೀಸರೊಂದಿಗೆ ಸಹಕರಿಸಬೇಕೆಂದರು.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.