ಸೌಲಭ್ಯ ದುರ್ಬಳಕೆಯಾದರೆ ಕ್ರಮ
Team Udayavani, Apr 2, 2021, 1:49 PM IST
ಕೋಲಾರ: ವಿವಿಧ ಇಲಾಖೆಗಳಲ್ಲಿ ಎಸ್.ಸಿ, ಎಸ್.ಟಿ ಜನಾಂಗದ ಫಲಾನುಭವಿಗಳ ಸೌಲಭ್ಯಗಳನ್ನು ಇತರೆ ಜಾತಿಯವರು ಸುಳ್ಳು ದಾಖಲೆ, ನಕಲಿ ಪ್ರಮಾಣ ಪತ್ರ ನೀಡಿ ಸೌಲಭ್ಯ ಪಡೆದಿದ್ದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಡೀಸಿ ಡಾ.ಆರ್.ಸೆಲ್ವಮಣಿ ತಿಳಿಸಿದರು.
ನಗರದ ಡೀಸಿ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಗುರುವಾರ ನಡೆದ ಅನುಸೂಚಿತ ಜಾತಿ ಮತ್ತುಅನುಸೂಚಿತ ಬುಡಕಟ್ಟುಗಳ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ಪ.ಜಾ, ಪಂ.ಜಾ ಪ್ರಮಾಣ ಪತ್ರಗಳನ್ನು ಪಡೆದು ಇತರೆವರ್ಗದವರು ಸೌಲಭ್ಯ ಪಡೆಯುತ್ತಿರುವ ಬಗ್ಗೆ ದೂರುಗಳಿದೆ. ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳು ಪಹಣಿ, ಇತರೆ ದಾಖಲೆಗಳನ್ನುಸೂಕ್ತ ಸಮಯಕ್ಕೆ ನೀಡದಿದ್ದರೆ, ಅವರಿಗೆ ನೋಟಿಸ್ ನೀಡಿ, ಇತರೆ ಫಲಾನುಭವಿಗಳನ್ನು ಆಯ್ಕೆಮಾಡಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪು, ಮೋಟಾರ್ ಅಳವಡಿಸಿ ವಿದ್ಯುತ್ ಸೌಲಭ್ಯ ಕಲ್ಪಿಸಿ. ಮುಂದಿನ ಸಭೆಯ ಒಳಗೆ ಜಿಲ್ಲೆಯಲ್ಲಿ ವಾಲ್ಮೀಕಿ ಭವನಗಳ ನಿರ್ಮಾಣವಾಗಬೇಕು ಎಂದು ಸೂಚಿಸಿದರು.
ಇತರೆ ವರ್ಗದವರಿಗೆ ಸೌಲಭ್ಯ: ಸಮಿತಿಯ ಸದಸ್ಯ ನಾಗನಾಳ ಮುನಿಯಪ್ಪ ಮಾತನಾಡಿ, ದೌರ್ಜನ್ಯ ಸಮಿತಿ ಸಭೆಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಬರಬೇಕು.ಕೆಲವು ದಲಿತರು ಜಮೀನನ್ನು ಅನುಭೋಗ ಮಾಡುತ್ತಿದ್ದಾರೆ. ಆದರೆ ಅವರ ಒಡೆತನದಲ್ಲಿ ಜಮೀನುಇಲ್ಲ. 2004 ರಿಂದ ಮಂಜೂರು ಆಗಿರುವ ಜಮೀನುಗಳಿಗೆ ಸಾಗುವಳಿ ಚೀಟಿ ನೀಡದೆ ತಹಶೀಲ್ದಾರ್ಗಳು ಬಾಕಿ ಉಳಿಸಿಕೊಂಡಿದ್ದಾರೆ. ಕೃಷಿ ಇಲಾಖೆಯಲ್ಲಿ ಟಿಲ್ಲರ್, ಟ್ರ್ಯಾಕ್ಟರ್ ಮತ್ತು ಹನಿ ನೀರಾವರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಆದರೆ, ಎಸ್.ಸಿ. ಎಸ್.ಟಿ ಜಾತಿ ಪ್ರಮಾಣಪತ್ರವನ್ನು ಪಡೆದು ಇತರೆ ವರ್ಗದವರು ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಜಿಪಂ ಸಿಇಒ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಕೆ.ಜಿ.ಎಫ್ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾಕರುಣಾಕರನ್, ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ, ಜಿಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ಉಪ ವಿಭಾಗಾಧಿಕಾರಿ ಸೋಮಶೇಖರ್, ಸಮಿತಿ ಸದಸ್ಯ ವೆಂಕಟರಾಮ್, ವೆಂಕಟೇಶ್, ರವೀಂದ್ರ ಉಪಸ್ಥಿತರಿದ್ದರು.
ಹಕ್ಕುಪತ್ರ ನೀಡಿಲ್ಲ, ಮೂಲ ಸೌಲಭ್ಯಗಳಿಲ್ಲ: ದೂರು :
ಕೋಲಾರದ ಸ್ಲಮ್ ಕಾಲೋನಿಯಲ್ಲಿ ಸುಮಾರು 90 ಮನೆಗಳಲ್ಲಿ ಜನ ವಾಸವಾಗಿದ್ದಾರೆ. ಅವರಿಗೆ ಹಕ್ಕುಪತ್ರ ನೀಡಿಲ್ಲ. ಮೂಲ ಸೌಲಭ್ಯಗಳಿಲ್ಲ, ಅಬಕಾರಿ ಇಲಾಖೆಯಲ್ಲಿ ಸಿ.ಎಲ್ 7 ಅಡಿ ಬಾರ್ ತೆರೆಯಲು ಎಸ್.ಸಿ, ಎಸ್.ಟಿ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ. ಅಂಬೇಡ್ಕರ್ ಅಭಿವೃದ್ಧಿನಿಗಮದಿಂದ ಕೊರೆಸಿರುವ ಕೊಳವೆಬಾವಿಗಳಿಗೆ ಪಂಪು ಮೋಟರ್ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂದು ಸಮಿತಿ ಸದಸ್ಯ ಹಾಗೂ ಕೋಲಾರ ನಗರಸಭೆ ಸದಸ್ಯ ಅಂಬರೀಶ್ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು