ಸೀತಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಕ್ರಮ


Team Udayavani, Aug 31, 2020, 2:06 PM IST

ಸೀತಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಕ್ರಮ

ಕೋಲಾರ: ತಾಲೂಕಿನ ಸೀತಿ ದೇವಾಲಯದ ಈ ಸುಂದರ ಪ್ರದೇಶದಲ್ಲಿ ಉದ್ಯಾನ, ಮಕ್ಕಳ ಮನರಂಜನೆಗಾಗಿ ಆಟೋಪಕರಣಗಳ ಅಳವಡಿಸುವ ಮೂಲಕ ಎಲ್ಲರ ಸಹಕಾರದಿಂದ ಇದನ್ನು ಜಿಲ್ಲೆಯ ಪ್ರಮುಖ ಪ್ರವಾಸಿತಾಣ ವಾಗಿಸಲು ಪ್ರಯತ್ನಿಸುವುದಾಗಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು.

ತಾಲೂಕಿನ ಸೀತಿ ಬೆಟ್ಟದಲ್ಲಿ ಕೋಲಾರ ಜಿಲ್ಲಾಡಳಿತ, ಅರಣ್ಯ ಇಲಾಖೆ, ಆಯಿಸ್ಕಾ ಇಂಟರ್‌ ನ್ಯಾಷನಲ್‌ ಕರ್ನಾಟಕ ವಲಯ ಇವರ ಸಂಯುಕ್ತಾಶ್ರಯದಲ್ಲಿ ಅಂತರ ರಾಷ್ಟ್ರೀಯ ಜೀವಿ ವೈವಿಧ್ಯ ವರ್ಷಾಚರಣೆ ಅಂಗವಾಗಿ ಸೀತಿ ಬೆಟ್ಟಕ್ಕೆ ಹಸಿರು ಹೊದಿಕೆ ಹಾಗೂ “ಬೋಳು ಬೆಟ್ಟಕ್ಕೆ ಬನದ ಮೆರಗು’ ಎಂಬ ನಿವೃತ್ತ ಐಎಎಸ್‌ ಅಧಿಕಾರಿ ಅಮರನಾರಾಯಣ ಅವರ ಪರಿಕಲ್ಪನೆಯಲ್ಲಿ ಸೀತಿ ಬೆಟ್ಟದಲ್ಲಿ ವಿವಿಧ ಜಾತಿಯ ಒಂದು ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಸೀತಿ ಬೆಟ್ಟದ ಬೈರವೇಶ್ವರ ಸನ್ನಿಧಿ ಸಹಾ ಒಂದು ಪ್ರವಾಸಿ ತಾಣವಾಗಿದೆ. ಆದ್ದರಿಂದ ಬೆಟ್ಟದ ಕೆಳಗೆ ಉತ್ತಮ ಪಾರ್ಕ್‌ ವ್ಯವಸ್ಥೆ ಮಾಡುತ್ತೇವೆ, ಜೊತೆಗೆ ಪುಟಾಣಿ ಮಕ್ಕಳಿಗೆ ಆಟೋಪಕರಣಗಳನ್ನು ವ್ಯವಸ್ಥೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಆಶ್ವಾಸನೆ ನೀಡಿ ಅಕ್ಟೋಬರ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಎಂದರು.

ಬೆಟ್ಟದಲ್ಲಿ ಚಾರಣ: ದೇವಾಲಯದಿಂದ ಬೆಟ್ಟದ ಮೇಲಕ್ಕೆ 1 ಕಿ.ಮೀ. ದೂರ ಚಾರಣ ಮಾಡಿ, ಅಲ್ಲಿನ ಸ್ಥಿತಿ ಗಮನಿಸಿದ ಡೀಸಿ, ಓರ್ವ ಚಾರಣ ಮಾಡುವ ಕ್ರೀಡಾಪಟುವಿನಂತೆ ಬೆಟ್ಟದಲ್ಲಿ ಸುತ್ತಾಡಿ, ಇಲ್ಲಿ ಆಗಬೇಕಿರುವ ಕೆಲಸಗಳ ಕುರಿತು ಅರಿತುಕೊಂಡರು. ದೇವಾಲಯಕ್ಕೆ ಉತ್ತಮವಾದ ಕಾಂಪೌಂಡ್‌, ಕುಡಿಯುವ ನೀರಿನ ವ್ಯವಸ್ಥೆ, ರಾತ್ರಿ ಸಮಯದಲ್ಲಿ ಬೆಳಕಿರಲು ಹೈಮಾಸ್ಕ್ ಸೈಟ್‌ನ್ನು ಹಾಕಲಾಗಿದ್ದು, ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆ ಎಂದರು.

ಸೀತಿ ಬೆಟ್ಟ ಸ್ವಚ್ಛತೆಗೆ ಸೂಚನೆ: ಸೀತಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ಸ್ವತ್ಛತೆ ಇಲ್ಲದೆ ಗಬ್ಬು ನಾರುತ್ತಿರುವ ದೃಶ್ಯ ಕಂಡ ಜಿಲ್ಲಾಧಿಕಾರಿ, ಇಂತಹ ಸುಂದರ ಪರಿಸರವಿರುವ ತಾಣದ ಪಕ್ಕದಲ್ಲಿ ಸ್ವತ್ಛತೆಯೂ ಅಗತ್ಯವಾಗಿದೆ ಎಂದರು. ನಿವೃತ್ತ ಐಎಎಸ್‌ ಅಧಿಕಾರಿ ಅಮರನಾಥ್‌, ಪರಿಸರ ಸಂರಕ್ಷಣೆಯ ಕಾಳಜಿಯಿಂದ ಗುಡ್ಡದಲ್ಲಿ ಸಾವಿರ ಗಿಡ ನೆಡುವ ಕಾರ್ಯ ಮಾಡುತ್ತಿದ್ದು, ಈ ಗಿಡಗಳನ್ನು ಉಳಿಸಿ ಬೆಳೆಸುವ ಕಾಯಕ್ಕೆ ಸಹಕಾರ ಕೋರಿದರು.

ಜಿಪಂ ಉಪಕಾರ್ಯದರ್ಶಿ ಕೆ,ಪಿ ಸಂಜೀವಪ್ಪ, ಸಹಾಯಕ ಯೋಜನಾಧಿಕಾರಿ ಗೋವಿಂದ ಗೌಡ, ವಸಂತ್‌ ಗೌಡ, ಅರಣ್ಯ ಇಲಾಖೆ ದೇವರಾಜು, ಹರ್ಷವರ್ಧನ್‌, ಬಿಂದು, ಇಒ ಬಾಬು, ಕೋಲಾರ ಐಇಸಿ ಸಂಯೋಜಕ ಭಾಸ್ಕರ ರೆಡ್ಡಿ, ಗ್ರಾಪಂ ಪಿಡಿಒ ಲಕ್ಷ್ಮೀಪತಿ, ಟ್ರಸ್ಟ್‌ನ ಅಧ್ಯಕ್ಷ ತಮ್ಮಯ್ಯ, ಸೀತಿಹೊಸೂರು ಮುರಳಿಗೌಡ ಇದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.