ಮಾಸ್ಕ್ ಧರಿಸಿದರೆ ಕೋವಿಡ್ ಇಳಿಮುಖ


Team Udayavani, Oct 2, 2020, 2:28 PM IST

ಮಾಸ್ಕ್ ಧರಿಸಿದರೆ ಕೋವಿಡ್ ಇಳಿಮುಖ

ಶ್ರೀನಿವಾಸಪುರ: ಕೋವಿಡ್ ಸೋಂಕು ಹೆಚ್ಚಾಗುತ್ತಿದೆ ಆದರೂ ಜನ ಅರಿತುಕೊಳ್ಳದೇ ಸ್ವೇಚ್ಛಕಾರವಾಗಿ ತಿರುಗಾಡುತ್ತಿದ್ದಾರೆ. ಮನೆಯಿಂದ ಹೊರ ಹೋಗುವಾಗ ಮಾಸ್ಕ್ ಕಡ್ಡಾಯವಾಗಿ ಧರಿಸಿ ಓಡಾಡಿದರೆ ಸೋಂಕು ಪ್ರಕರಣ ಇಳಿಮುಖವಾಗಲು ಸಾಧ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಾ ಅಭಿಪ್ರಾಯಿಸಿದರು.

ಜಾಗೃತಿ ಕಾರ್ಯಕ್ರಮ: ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಗುತ್ತಿಗೆ ನೌಕರರು ಮುಷ್ಕರ ನಡೆಸುತ್ತಿರುವ ಬಗ್ಗೆ,ಕ್ವಾರಂಟೈನ್‌ಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳು, ಆರೋಗ್ಯ ಇಲಾಖೆ ಕ್ರಮಗಳ ಕುರಿತು ಉದಯವಾಣಿ ಪ್ರಶ್ನಿಸಿದಾಗ, ಜನ ಎಚ್ಚರ ‌ ವಹಿಸದಿದ್ದರೆ ಹೆಚ್ಚು ಕೊರೊನಾ ಸೋಂಕು ಪ್ರಕರಣ ಕಾಣಿಸಿಕೊಳ್ಳಲಿವೆ. ಸರ್ಕಾರ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ತಿಳಿವಳಿಕೆ ನೀಡಿದೆ.

ಸೋಂಕು ಒಳಗಾದವರು ಕೆಲವರು ಮೃತಪಟ್ಟರೂ ಮಾಸ್ಕ್ ಧರಿಸದೇ ಓಡಾಡುತ್ತಿದ್ದಾರೆ ಎಂದ ಅವರು, ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸುವುದು, ಸ್ಯಾನಿಟೈಸರ್‌ ಬಳಕೆ ಮಾಡಬೇಕು, ಕನಿಷ್ಟ ಬೀದಿಗಳಲ್ಲಿ ಓಡಾಡುವಾಗ ಹಾಗೂ ಜನರು ಗುಂಪಾಗಿ ಇದ್ದಾಗ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂದರು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಕೆಮ್ಮು, ನೆಗಡಿ ಇತರೆ ಗಂಭೀರ ಕಾಯಿಲೆಗಳು ಬಂದಾಗ ಕೂಡಲೇ ಆಸ್ಪತ್ರೆಗೆ ಧಾವಿಸಿ ವೈದ್ಯರಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕೆಂದರು.

ಅದೇ ರೀತಿ ಕಳೆ ಸೆಪ್ಟೆಂಬರ್ 24 ರಿಂದ ಎನ್‌ಹೆಚ್‌ಎಂ ನೌಕರರು ಮುಷ್ಕರ ಆರಂಬಿಸಿದ್ದಾರೆ ಹಾಗಾಗಿ ಅವರಿಲ್ಲದೇ ಕೆಲವು ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿಲ್ಲವೇ ಎಂದಾಗ ಅವರ ಬೇಡಿಕೆಗಳಿಗಾಗಿ ಮುಷ್ಕರ ಆರಂಬಿಸಿದ್ದಾರೆ ಹಾಗಾಗಿ ಗಣಕ ಯಂತ್ರಗಳ ಕೆಲಸ ಮಾಡುವಲ್ಲಿ ಸ್ವಲ್ಪ ತೊಂದರೆಯಾಗಿದೆ ಹಾಗೆಯೇ ನರ್ಸುಗಳು ಮುಷ್ಕರದಲ್ಲಿರುವುದರಿಂದ ಸಮಸ್ಯೆಯಾದರೂ ಇರುವವರನ್ನು ಕೆಲಸದಲ್ಲಿ ಬಳಸಿಕೊಳ್ಳಲಾಗುತ್ತದೆ ಸರ್ಕಾರದ ಆದೇಶದಂತೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕ್ವಾರಂಟೈನ್‌ಲ್ಲಿರುವವರಿಗೆ ಮೂರುಬಾರಿ ತಪಾಸಣೆ :  ಕ್ವಾರಂಟೈನ್‌ನಲ್ಲಿ ಇರುವವರಿಗೆ ಸೂಕ್ತ ಸೌಲಭ್ಯ ಸಿಗುತ್ತಿಲ್ಲವೆಂಬ ಆರೋಪಗಳ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಾ ಅವರನ್ನು ಗಮನ ಸೆಳೆದಾಗ, ಪ್ರಸ್ತುತ ಅಂತಹ ಸಮಸ್ಯೆಗಳಿಲ್ಲ. ಈಗಕ್ವಾರಂಟೈನ್‌ಲ್ಲಿರುವ ಮಂದಿಗೆ ಬೆಳಗಿನ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟ ಮತ್ತು ಬಿಸಿ ನೀರು ಕೊಡಲಾಗುತ್ತಿದೆ. ಪಾಳೆಯ ರೀತಿಯಲ್ಲಿ ಇಬ್ಬರು ವೈದ್ಯರು ಸ್ಟಾಫ್ ನರ್ಸ್‌ ಹಾಗೂ ಮತ್ತಿಬ್ಬರು ಸೇರಿ 6 ಮಂದಿ ಕ್ವಾರಂಟೈನಲ್ಲಿದ್ದು ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ3 ಬಾರಿ ಕ್ವಾರಂಟೈನ್‌ಲ್ಲಿರುವವರನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.