ಕೋಟಿಲಿಂಗ ದೇಗುದಲ್ಲಿ ಮತ್ತೆ ಭಿನ್ನಮತ


Team Udayavani, Nov 24, 2019, 4:56 PM IST

kolar-tdy-1

ಬಂಗಾರಪೇಟೆ: ರಾಜ್ಯ ಹೈಕೋರ್ಟ್‌ ಸಂಭಾವಶಿವಮೂರ್ತಿ ಸ್ವಾಮಿಗಳ ಪುತ್ರ ಶಿವಪ್ರಸಾದ್‌ ಅವರನ್ನೂ ಜೊತೆಯಲ್ಲಿಟ್ಟುಕೊಂಡು ಕಾರ್ಯನಿರ್ವಹಣೆ ಮಾಡುವಂತೆ ನಿರ್ದೇಶನ ನೀಡಿದ್ದರೂ ಶ್ರೀಕ್ಷೇತ್ರ ಕೋಟಿಲಿಂಗೇಶ್ವರ ದೇಗುಲದ ಉಸ್ತುವಾರಿ ಕೆ.ವಿ.ಕುಮಾರಿ, ಗಣನೆಗೇ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಶ್ರೀಗಳ ಪುತ್ರ ಶಿವಪ್ರಸಾದ್‌ ನೇತೃತ್ವದಲ್ಲಿ ದೇಗುಲ ಅರ್ಚಕರು, ಸಿಬ್ಬಂದಿ ಶನಿವಾರ ಪ್ರತಿಭಟನೆ ಮಾಡಿದರು.

ದೇವಾಲಯದಲ್ಲಿ ಹಲವು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವ ಅರ್ಚಕರು ಹಾಗೂ ಸಿಬ್ಬಂದಿಯನ್ನು ಬದಲಾವಣೆ ಮಾಡಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ದೇಗುಲದ ಹಣವನ್ನು ವಸೂಲಿ ಮಾಡಿ ಸ್ವಂತ ಬ್ಯಾಂಕ್‌ ಖಾತೆಗೆ ಜಮೆ ಮಾಡುತ್ತಿದ್ದಾರೆ. ದೇಗುಲದಲ್ಲಿ ಹಲವಾರು ವಿಧಿ ವಿಧಾನಗಳನ್ನು ಬದಲಾವಣೆ ಮಾಡಲು ಉಸ್ತುವಾರಿ ಕೆ.ವಿ.ಕುಮಾರಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಮಾತು ಕೇಳುತ್ತಿಲ್ಲ: ಹಿಂದೆ ದೇಗುಲ ಧರ್ಮದರ್ಶಿಯೂ ಆಗಿದ್ದ ಶ್ರೀಗಳ ಪುತ್ರ ಶಿವಪ್ರಸಾದ್‌ ಅವರನ್ನು ಜೊತೆಯಲ್ಲಿಟ್ಟುಕೊಂಡು ಜಂಟಿ ಖಾತೆ ಮಾಡಿ ದೇವಾಲಯದಿಂದ ಬರುವ ಆದಾಯ, ಹಣದ ವ್ಯವಹಾರ ನಡೆಸುವಂತೆ ರಾಜ್ಯ ಹೈಕೋರ್ಟ್‌ ಹೇಳಿದ್ದರೂ ಕುಮಾರಿ ಕೇಳುತ್ತಿಲ್ಲ ಎಂದು ದೂರಿದರು. ನನಗೆ ಮಾತ್ರ ಅಧಿಕಾರ: ಕೆ.ವಿ.ಕುಮಾರಿ ಏಕಪಕ್ಷೀಯವಾಗಿ ನಿರ್ಣಯಗಳನ್ನು ಕೈಗೊಳ್ಳುತ್ತಿದ್ದಾರೆ. ಕೆ.ವಿ.ಕುಮಾರಿ ಹಾಗೂ ಶಿವಪ್ರಸಾದ್‌ ಇಬ್ಬರಿಗೂ ಅಧಿಕಾರ ನೀಡುವಂತೆ ರಾಜ್ಯ ಹೈಕೋರ್ಟ್‌ ನೀಡಿದ್ದರೂ ಜಿಲ್ಲಾಧಿಕಾರಿಗಳು ಕೆ.ವಿ.ಕುಮಾರಿಗೆ ಮಾತ್ರ ಅಧಿಕಾರ ನೀಡಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕೆ.ಶಿವಪ್ರಸಾದ್‌, ದಾಮೋದರರೆಡ್ಡಿ, ಓ.ಎಂ. ಗೋಪಾಲ್‌, ರಾಘವಾಚಾರಿ, ರಮೇಶ್‌ ಸೇರಿದಂತೆ ದೇಗುಲದ ಅಂಗಡಿಗಳ ಬಾಡಿಗೆದಾರರು ಹಾಜರಿದ್ದರು. ಅಧಿಕಾರ ಹಸ್ತಾಂತರದ ಬೆನ್ನಲ್ಲೇ ಭಿನ್ನಮತ: ಹೈಕೋರ್ಟ್‌ ತೀರ್ಪುನಂತೆ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಆದೇಶದ ಮೇರೆಗೆ ತಾಲೂಕಿನ ಕಮ್ಮಸಂದ್ರದ ಶ್ರೀಕ್ಷೇತ್ರ ಕೋಟಿಲಿಂಗೇಶ್ವರ ದೇಗುಲದ ನಿರ್ವಹಣೆ ಹೊಣೆಯನ್ನು ಹಿಂದೆ ಆಡಳಿತಾಧಿಕಾರಿಯಾಗಿದ್ದ ಕೆಜಿಎಫ್ ತಹಶೀಲ್ದಾರ್‌ ಕೆ.ರಮೇಶ್‌, ಕೆ.ವಿ.ಕುಮಾರಿಗೆ ಶುಕ್ರವಾರ ಅಧಿಕಾರ ಹಸ್ತಾಂತರ ಮಾಡಿದರು.

ಈ ವೇಳೆ ತಹಶೀಲ್ದಾರ್‌ ಕೆ. ರಮೇಶ್‌ ನಿರ್ವಹಣೆ ಹಸ್ತಾಂತರ ಮಾಡುವ ಮುನ್ನಾ ಹಲವು ಬಾರಿ ಶಿವಪ್ರಸಾದ್‌ ಅವರನ್ನು ಮೊಬೈಲ್‌ ಮೂಲಕ ಸಂಪರ್ಕಿಸಿದ್ದರೂ ಬಂದಿರಲಿಲ್ಲ. ಕೆಲಕಾಲ ಕಾದು ನಂತರ ಕೆ.ವಿ.ಕುಮಾರಿಗೆ ಆಡಳಿತ ನಿರ್ವಹಣೆ ಹಸ್ತಾಂತರ ಮಾಡಿದರು. ಇದೇವೇಳೆ ಆಡಳಿತ ನಿರ್ವಹಣೆ ಬಗ್ಗೆ ಮಾಹಿತಿ ನೀಡಲು ದೇಗುಲ ಅರ್ಚಕರು, ಸಿಬ್ಬಂದಿ ಕರೆದರೂ ಬರಲಿಲ್ಲ. ಅರ್ಚಕರು ದೇವಾಲಯಗಳಲ್ಲಿ ಪೂಜೆ ಮಾಡದೇ ಶಿವಪ್ರಸಾದ್‌ ಇದ್ದ ಗೆಸ್ಟ್‌ಹೌಸ್‌ ಗೆ ಹೋಗಿ ಕುಳಿತ್ತಿದ್ದರು. ದೇಗುಲದಲ್ಲಿ ಪೂಜೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಇವೆಲ್ಲ ಬೆಳವಣಿಗೆಗಳ ಮಧ್ಯೆ ಶನಿವಾರ ದಿಢೀರ್‌ ಪ್ರತಿಭಟನೆ ನಡೆಸುತ್ತಿರುವುದನ್ನು ನೋಡಿದ್ರೆ ದೇಗುಲದಲ್ಲಿ ಮತ್ತೆ ಭಿನ್ನಮತ ಹೆಚ್ಚುವ ಸಾಧ್ಯತೆ ಕಂಡು ಬರುತ್ತಿದೆ.

ಟಾಪ್ ನ್ಯೂಸ್

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.