ಸರ್ಕಾರಿ ಕಚೇರಿಯೇ ಮದ್ಯ ಸೇವನೆ ಅಡ್ಡೆ
ಮಾರ್ಕಂಡೇಯ ಡ್ಯಾಂ ಬಳಿಯ ಮೀನುಗಾರಿಕೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಮದ್ಯ ಸೇವನೆ
Team Udayavani, Jun 28, 2019, 8:28 AM IST
ಬಂಗಾರಪೇಟೆ: ಪ್ರತಿ ದಿನ ಮದ್ಯ ಸೇವನೆ ಮಾಡಲು ಸರ್ಕಾರಿ ಕಚೇರಿಯನ್ನೇ ಅಧಿಕಾರಿಗಳು ಅಡ್ಡೆಯನ್ನಾಗಿ ಮಾಡಿಕೊಂಡಿರುವ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಾಲೂಕಿನ ಮಾರ್ಕಂಡೇಯ ಡ್ಯಾಂ ಬಳಿಯ ಮೀನುಗಾರಿಕೆ ಇಲಾಖೆ ಕಚೇರಿಯಲ್ಲಿ ನಿತ್ಯ ಅಧಿಕಾರಿಗಳು ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ.
ಊಟದ ಪಕ್ಕದಲ್ಲೇ ಮದ್ಯದ ಬಾಟಲ್: ಮೀನುಗಾರಿಕೆ ಇಲಾಖೆ ವಿಭಾಗೀಯ ಉಪನಿರ್ದೇಶಕ ಮಹೇಶ್, ಹಿರಿಯ ಸಹಾಯಕ ನಿರ್ದೇಶಕ ಪೆದ್ದಣ್ಣ ಹಾಗೂ ಬೂದಿಕೋಟೆ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸತೀಶ್ ಮದ್ಯ ಸೇವನೆ ಮಾಡಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳ ನಡೆ ಸ್ಥಳೀಯರಿಗೆ ಅಸಹ್ಯ ಹುಟ್ಟಿಸಿದ್ದು ಊಟ ಮಾಡುವ ಪಕ್ಕದಲ್ಲಿಯೇ ಮದ್ಯಸೇವನೆ ಮಾಡಿರುವ ಖಾಲಿ ಬಾಟಲ್ಗಳೂ ರಾರಾಜಿಸುತ್ತಿವೆ.
10 ಮಂದಿ ಸಿಬ್ಬಂದಿ ನೇಮಕ: ತಾಲೂಕಿನ ಮಾಲೂರು ಗಡಿಭಾಗದ ಮಾರ್ಕಂಡೇಯ ಡ್ಯಾಂ ಬಳಿ ಸರ್ಕಾರ ಮೀನು ಮರಿ ಸಾಕಾಣಿಕೆ ಕೇಂದ್ರ ಆರಂಭಿಸಿದೆ. ಡ್ಯಾಂ ಬಳಿ ಮೀನು ಮರಿ ಸಾಕಾಣಿಕೆ ಕೇಂದ್ರ ಸ್ಥಾಪಿಸಿ ಸಹಾಯಕ ನಿರ್ದೇಶಕರ ಹುದ್ದೆ ಸೇರಿದಂತೆ ಸುಮಾರು 10 ಜನ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ದೊಡ್ಡ ಮೀನುಗಳ ಸಾಗಣೆ: ಕಳೆದ 10 ವರ್ಷಗಳಿಂದ ಬರ ಇರುವುದರಿಂದ ನೀರಿಲ್ಲದೇ ಮೀನು ಮರಿ ಸಾಕಾಣಿಕೆಯನ್ನು ಕಡಿಮೆ ಮಾಡಲಾಗಿದೆ. ಡ್ಯಾಂನಲ್ಲಿರುವ ನೀರನ್ನು ಪಂಪ್ ಮೋಟಾರ್ ಮೂಲಕ ನೀರು ಹಾಯಿಸಿ ಸುಮಾರು 10 ತೊಟ್ಟಿಗಳಲ್ಲಿ ಮೀನು ಮರಿ ಸಾಕಾಣಿಕೆ ಮಾಡುತ್ತಿದ್ದಾರೆ. ಇದರ ಜೊತೆಯಲ್ಲಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸಿಬ್ಬಂದಿ ದೊಡ್ಡ ಮೀನುಗಳನ್ನೂ ಸಾಕಾಣಿಕೆ ಮಾಡಿ ಪಾರ್ಟಿಗಳಿಗೆ ಉಪಯೋಗಿಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂದಿದೆ.
ಸಿಬ್ಬಂದಿ ಮೇಲೆ ಒತ್ತಡ: ವಿಭಾಗೀಯ ಮೀನುಗಾರಿಕೆ ಉಪನಿರ್ದೇಶಕ ಮಹೇಶ್ ಕೋಲಾರ ಜಿಲ್ಲೆಯ ಮೀನುಗಾರಿಕೆ ಇಲಾಖೆ ಕೇಂದ್ರಗಳ ಮೇಲೆ ಪರಿಶೀಲನೆ ಮಾಡುವ ಉದ್ದೇಶದಿಂದ ಮದ್ಯದ ಪಾರ್ಟಿ ಆಯೋಜಿಸಲು ಅಧಿಕಾರಿ ಸಿಬ್ಬಂದಿ ಮೇಲೆ ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ.
ಬೇಸತ್ತ ಸಿಬ್ಬಂದಿಯಿಂದ ವಿಡಿಯೋ:ಇದರಿಂದ ಬೇಸತ್ತ ಸಿಬ್ಬಂದಿಯೊಬ್ಬರು ಇವರ ಜೊತೆಯಲ್ಲಿದ್ದುಕೊಂಡು ಗುಂಡು-ತುಂಡು ಪಾರ್ಟಿಯನ್ನು ವಿಡಿಯೋ ಮಾಡಿದ್ದು ಇದೀಗ ಜಾಲತಾಣದಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?