ಎಲ್ಲ ಖಾಸಗಿ ಶಾಲೆಗಳಲ್ಲಿ ಆರ್ಟಿಇ ಸೀಟು ನೀಡಲು ಆಗ್ರಹ
ಮೇ 8 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮುತ್ತಿಗೆಗೆ ರೈತಸಂಘ ತೀರ್ಮಾನ
Team Udayavani, Apr 30, 2019, 2:03 PM IST
ಕೋಲಾರ ಜಿಲ್ಲಾ ರೈತ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳು ಹಾಜರಿದ್ದು, ಶಿಕ್ಷಣ ಇಲಾಖೆಯ ವಿರುದ್ಧ ಮೇ 8 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದರು.
ಕೋಲಾರ: ಎಲ್ಲಾ ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ ಸೀಟುಗಳಿಗೆ ಅವಕಾಶ ನೀಡಬೇಕು ಎಂದು ರೈತ ಸಂಘ ಆಗ್ರಹಿಸಿದೆ.
ಹೊಸ ಖಾಸಗಿ ಶಾಲೆಗಳಿಗೆ ಅನುಮತಿ ನೀಡಬಾರದು ಹಾಗೂ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಲು ಮೇ.8 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಶಿಕ್ಷಣ ಕ್ಷೇತ್ರವೂ ಶ್ರೀಮಂತವಾಗಿ ಖಾಸಗಿ ಕಾರ್ಪೊರೇಟ್ ಕಂಪನಿಗಳ ಪಾಲಾಗಿ ಬಡವರ ಮಕ್ಕಳು ಶಿಕ್ಷಣದಿಂದ ವಂಚಿತವಾಗುತ್ತಿದ್ದಾರೆ.
ಶಾಲೆಗಳ ಮರಣ ಶಾಸನ: ಐದು ವರ್ಷಕೊಮ್ಮೆ ಬರುವ ಶಿಕ್ಷಣ ಸಚಿವರು ಗಲ್ಲಿಗೊಂದರಂತೆ ಖಾಸಗಿ ಶಾಲೆಗಳಿಗೆ ಅನುಮತಿ ನೀಡಿ ಸರ್ಕಾರಿ ಶಾಲೆಗಳ ಮರಣ ಶಾಸನವನ್ನು ಬರೆಯುತ್ತಿದ್ದಾರೆ. ಮತ್ತೂಂದೆಡೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸಾವಿರಾರು ಕೋಟಿ ಅನುದಾನಗಳನ್ನು ಬಿಡುಗಡೆ ಮಾಡಿ ನಾನಾ ಯೋಜನೆಗಳಲ್ಲಿ ಜಾರಿಗೆ ತಂದರೂ ಯಾವುದೇ ಪ್ರಯೋಜನವಾಗದೆ ಹಣ ಅಧಿಕಾರಿಗಳ ಜೇಬು ಸೇರುತ್ತಿದೆ ಎಂದು ದೂರಿದರು.
ಖಾಸಗಿ ವ್ಯಾಮೋಹ : ಸರಕಾರದ ಕೆಲಸ ಪಡೆದು ತಮ್ಮ ಮಕ್ಕಳನ್ನು ಖಾಸಗಿ ಕಾಲೇಜುಗಳಲ್ಲಿ ಸೇರಿಸುವ ಎಲ್ಲಾ ರಾಜಕಾರಣಿಗಳಿಗೆ ಮತ್ತು ಅಧಿಕಾರಿಗಳ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲೇ ಪ್ರಾಥಮಿಕ ಶಿಕ್ಷಣ ಪಡೆಯಬೇಕೆಂಬ ಆದೇಶ ಮಾಡಿ ದರೆ ಸರ್ಕಾರಿ ಶಾಲೆಗಳನ್ನು ಉಳಿಸಬಹುದು. ಆದರೆ ಶಿಕ್ಷಣ ಕ್ಷೇತ್ರದ ಅಧಿಕಾರಿಗಳೇ ಖಾಸಗಿ ವ್ಯಾಮೋಹ ಹೊಂದಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಸಂವಿದಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಆಂಬೇಡ್ಕರ್ರವರ ಏಕ ರೂಪದ ಶಿಕ್ಷಣದ ಕನಸು ಕನಸಾಗಿಯೇ ಉಳಿದಿದೆ. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಜತೆಗೆ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಶಿಕ್ಷಕರು ವಿಫಲರಾಗಿದ್ದಾರೆ ಎಂದು ದೂರಿದರು.
ಬಡವರಿಗೆ ಅನುಕೂಲವಾಗಿದ್ದ ಆರ್ಟಿಇ ಯನ್ನು ಸಹ ಕಸಿದು ಸಂಪೂರ್ಣವಾಗಿ ಬಡವರ ಮಕ್ಕಳನ್ನು ಶಿಕ್ಷಣದಿಂದ ವಂಚಿತ ಮಾಡುತ್ತಿರುವ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಖಾಸಗಿ ಶಿಕ್ಷಣ ನೀತಿಯನ್ನು ಖಂಡಿಸಿ ಶಿಕ್ಷಣ ಇಲಾಖೆಯ ಮುತ್ತಿಗೆ ಹಾಕುವ ಎಚ್ಚರಿಕೆಯನ್ನು ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್, ತೆರ್ನಹಳ್ಳಿ ಆಂಜಿನಪ್ಪ, ಬೂದಿಕೋಟೆ ಹರೀಶ್, ಪ್ರವೀಣ್, ರಮೇಶ್, ತ್ಯಾಗರಾಜ್, ಪುರುಷೋತ್ತಮ್, ಕೆಂಬೋಡಿ ಕೃಷ್ಣೇಗೌಡ, ನಾಗರಾಜ್, ಅನಿಲ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್