ಕೆರೆಯಲ್ಲಿ ಅಂಬೇಡ್ಕರ್‌ ಭವನ: ಕೋರ್ಟ್‌ ತಡೆಯಾಜ್ಞೆ


Team Udayavani, Oct 2, 2022, 4:25 PM IST

ಕೆರೆಯಲ್ಲಿ ಅಂಬೇಡ್ಕರ್‌ ಭವನ: ಕೋರ್ಟ್‌ ತಡೆಯಾಜ್ಞೆ

ಬಂಗಾರಪೇಟೆ: ಕೆರೆಯನ್ನು ಮುಚ್ಚಿ ಅನಧಿಕೃತವಾಗಿ ಅದರಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಮುಂದಾಗಿದ್ದ ಶಾಸಕರಿಗೆ ಪಟ್ಟಣದ ಸಿವಿಲ್‌ ನ್ಯಾಯಾಲಯ ತಡೆಯಾಜ್ಞೆ ನೀಡುವ ಮೂಲಕ ಶಾಕ್‌ ನೀಡಿದೆ.

ಪಟ್ಟಣದ ಗಂಗಮ್ಮನಪಾಳ್ಯ ಬಡಾವಣೆಗೆ ಹೋಗುವ ರಸ್ತೆಯಲ್ಲಿರುವ ಸರ್ವೆ ನಂ 137ರಲ್ಲಿರುವ ಒಬ್ಬಟ್ಲುಕೆರೆಯನ್ನು ಮುಚ್ಚಿ ಕಾನೂನು ಬಾಹಿರವಾಗಿ ಪುರಸಭೆಯಲ್ಲಿ ಖಾತೆ ಮಾಡಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ ಮಾಡಿ ಅಲ್ಲಿ ಬೃಹತ್‌ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಇದೇ 4ರಂದು ಶಂಕುಸ್ಥಾಪನೆ ಮಾಡಲು ಮುಂದಾಗಿದ್ದ ಶಾಸಕ ಎಸ್‌. ಎನ್‌.ನಾರಾಯಣಸ್ವಾಮಿ ತಾಲೂಕು ಆಡಳಿತ, ಪುರಸಭೆ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಪ್ರಶ್ನಿಸಿ ಸಾರ್ವಜನಿಕರೊಬ್ಬರು ಪಟ್ಟಣದ ಸಿವಿಲ್‌ ನ್ಯಾಯಾಲಯ ಮೆಟ್ಟಿಲೇರಿದ್ದರು. ಪ್ರಕರಣವನ್ನು ವಿಚಾರಣೆ ಕೈಗೊಂಡ ನ್ಯಾಯಾಲಯ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿ ವಿಚಾರಣೆ ಪೂರ್ಣವಾಗುವವರೆಗೂ ಆ ಜಾಗದಲ್ಲಿ ಯಾವುದೇ ಕಟ್ಟಡಗಳನ್ನು, ಪೂಜೆ ಮತ್ತಿತರೇ ಚಟುವಟಿಕೆಗಳನ್ನು ಕೈಗೊಳ್ಳದಂತೆ ಆದೇಶ ನೀಡಿ ಜಿಲ್ಲಾಧಿಕಾರಿ, ತಹಶೀಲ್ದಾರ್‌, ಪುರಸಭೆ ಮುಖ್ಯಾಧಿಕಾರಿ, ಸಮಾಜಕಲ್ಯಾಣಾಧಿಕಾರಿ ಹಾಗೂ ವೃತ್ತ ನಿರೀಕ್ಷಕರಿಗೆ ನೋಟಿಸ್‌ ಜಾರಿ ಮಾಡಿದೆ.

ಪಟ್ಟಣದ ಒಬ್ಬಟ್ಲು ಕೆರೆಯನ್ನು ಪೂರ್ಣವಾಗಿ ಮುಚ್ಚಿ ಅಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣ ಮಾಡಿಕೆರೆಯನ್ನೇ ಮಾಯ ಮಾಡಲಾಗಿದೆ. ಈಗ 2 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಶಾಸಕ ಎಸ್‌.ಎನ್‌ .ನಾರಾಯಣಸ್ವಾಮಿ ಕೆರೆಯಲ್ಲಿ ಸರ್ಕಾರದ ಹಣವನ್ನು ಪೋಲು ಮಾಡಲು ಮುಂದಾಗಿದ್ದಾರೆ, ಅಲ್ಲದೆ ಅ. 4ರೊಳಗೆ ಅಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.

ಒಬ್ಬಟ್ಲು ಕೆರೆಯ ಪ್ರದೇಶವಾಗಿದ್ದು ರಾಜಕೀಯ ಪ್ರೇರಿತವಾಗಿ ಒತ್ತಡ ಹೇರಿ ಖಾತೆ ಮಾಡಿಸಿದ್ದು, ಹಸಿರು ನ್ಯಾಯಪೀಠ ತಮ್ಮ ಆದೇಶದಲ್ಲಿ ಕೆರೆ,ಕೆರೆ ಅಂಗಳ, ಬಫ‌ರ್‌ ಜೋನ್‌ ಪ್ರದೇಶದಲ್ಲಿ ಯಾವುದೇ ಅನ್ಯಚಟುವಟಿಕೆ ನಡೆಸದಂತೆ ನಿಷೇದಿಸಿದ್ದರೂ, ಸಾರ್ವಜನಿಕರೂ ದೂರು ನೀಡಿದ್ದರೂ, ಸ್ಥಳೀಯ ಶಾಸಕರು ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನರ ಅನುಕಂಪ ಗಿಟ್ಟಿಸಿಕೊಳ್ಳಲು ವಿವಾದಿತ ಸ್ಥಳದಲ್ಲಿ ಅಂಬೇಡ್ಕರ್‌ ಭವನ ಕಟ್ಟಲು ಮುಂದಾಗಿದ್ದಾರೆ ಎಂದು ಎಂ.ಶ್ರೀಧರ್‌, ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಸಿವಿಲ್‌ ನ್ಯಾಯಾಲಯದಲ್ಲಿ ಧಾವೆ ಹೂಡಿದ್ದು ಅ. 19ರವರೆಗೂ ವಿವಾದಿತ ಸ್ಥಳದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ತಡೆಯಾಜ್ಞೆ ನೀಡಿದೆ. ಇದೇ ರೀತಿ ಕೆಜಿಎಫ್‌ನಲ್ಲೂ ಉದ್ಯಾನವನದಲ್ಲಿ ಅಂಬೇಡ್ಕರ್‌ ಭವನ, ಮಾಜಿ ಶಾಸಕ ಆರ್ಮುಮುಗಂ ಸಮಾಧಿ ಇತರೇ ಕಟ್ಟಡಗಳನ್ನು ನಿರ್ಮಿಸಿದ್ದು, ಸಾರ್ವಜನಿಕರ ದೂರಿನ ಮೇರೆಗೆ ಕಟ್ಟಡ ತೆರವಿಗೆ ಹೈಕೋರ್ಟ್‌ ಆದೇಶ ನೀಡಿದೆ. ಕೆರೆ ಅಂಗಳದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಮುಂಚೆಯೇ ಸಿವಿಲ್‌ ಕೋರ್ಟ್‌ ತಡೆಯಾಜ್ಞೆ ನೀಡಿರುವುದರಿಂದ ಸರ್ಕಾರದ ಹಣ ಪೋಲಾಗುವುದನ್ನು ತಡೆದಂತಾಗಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.