ಕೆರೆಯಲ್ಲಿ ಅಂಬೇಡ್ಕರ್‌ ಭವನ: ಕೋರ್ಟ್‌ ತಡೆಯಾಜ್ಞೆ


Team Udayavani, Oct 2, 2022, 4:25 PM IST

ಕೆರೆಯಲ್ಲಿ ಅಂಬೇಡ್ಕರ್‌ ಭವನ: ಕೋರ್ಟ್‌ ತಡೆಯಾಜ್ಞೆ

ಬಂಗಾರಪೇಟೆ: ಕೆರೆಯನ್ನು ಮುಚ್ಚಿ ಅನಧಿಕೃತವಾಗಿ ಅದರಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಮುಂದಾಗಿದ್ದ ಶಾಸಕರಿಗೆ ಪಟ್ಟಣದ ಸಿವಿಲ್‌ ನ್ಯಾಯಾಲಯ ತಡೆಯಾಜ್ಞೆ ನೀಡುವ ಮೂಲಕ ಶಾಕ್‌ ನೀಡಿದೆ.

ಪಟ್ಟಣದ ಗಂಗಮ್ಮನಪಾಳ್ಯ ಬಡಾವಣೆಗೆ ಹೋಗುವ ರಸ್ತೆಯಲ್ಲಿರುವ ಸರ್ವೆ ನಂ 137ರಲ್ಲಿರುವ ಒಬ್ಬಟ್ಲುಕೆರೆಯನ್ನು ಮುಚ್ಚಿ ಕಾನೂನು ಬಾಹಿರವಾಗಿ ಪುರಸಭೆಯಲ್ಲಿ ಖಾತೆ ಮಾಡಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ ಮಾಡಿ ಅಲ್ಲಿ ಬೃಹತ್‌ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಇದೇ 4ರಂದು ಶಂಕುಸ್ಥಾಪನೆ ಮಾಡಲು ಮುಂದಾಗಿದ್ದ ಶಾಸಕ ಎಸ್‌. ಎನ್‌.ನಾರಾಯಣಸ್ವಾಮಿ ತಾಲೂಕು ಆಡಳಿತ, ಪುರಸಭೆ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಪ್ರಶ್ನಿಸಿ ಸಾರ್ವಜನಿಕರೊಬ್ಬರು ಪಟ್ಟಣದ ಸಿವಿಲ್‌ ನ್ಯಾಯಾಲಯ ಮೆಟ್ಟಿಲೇರಿದ್ದರು. ಪ್ರಕರಣವನ್ನು ವಿಚಾರಣೆ ಕೈಗೊಂಡ ನ್ಯಾಯಾಲಯ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿ ವಿಚಾರಣೆ ಪೂರ್ಣವಾಗುವವರೆಗೂ ಆ ಜಾಗದಲ್ಲಿ ಯಾವುದೇ ಕಟ್ಟಡಗಳನ್ನು, ಪೂಜೆ ಮತ್ತಿತರೇ ಚಟುವಟಿಕೆಗಳನ್ನು ಕೈಗೊಳ್ಳದಂತೆ ಆದೇಶ ನೀಡಿ ಜಿಲ್ಲಾಧಿಕಾರಿ, ತಹಶೀಲ್ದಾರ್‌, ಪುರಸಭೆ ಮುಖ್ಯಾಧಿಕಾರಿ, ಸಮಾಜಕಲ್ಯಾಣಾಧಿಕಾರಿ ಹಾಗೂ ವೃತ್ತ ನಿರೀಕ್ಷಕರಿಗೆ ನೋಟಿಸ್‌ ಜಾರಿ ಮಾಡಿದೆ.

ಪಟ್ಟಣದ ಒಬ್ಬಟ್ಲು ಕೆರೆಯನ್ನು ಪೂರ್ಣವಾಗಿ ಮುಚ್ಚಿ ಅಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣ ಮಾಡಿಕೆರೆಯನ್ನೇ ಮಾಯ ಮಾಡಲಾಗಿದೆ. ಈಗ 2 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಶಾಸಕ ಎಸ್‌.ಎನ್‌ .ನಾರಾಯಣಸ್ವಾಮಿ ಕೆರೆಯಲ್ಲಿ ಸರ್ಕಾರದ ಹಣವನ್ನು ಪೋಲು ಮಾಡಲು ಮುಂದಾಗಿದ್ದಾರೆ, ಅಲ್ಲದೆ ಅ. 4ರೊಳಗೆ ಅಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.

ಒಬ್ಬಟ್ಲು ಕೆರೆಯ ಪ್ರದೇಶವಾಗಿದ್ದು ರಾಜಕೀಯ ಪ್ರೇರಿತವಾಗಿ ಒತ್ತಡ ಹೇರಿ ಖಾತೆ ಮಾಡಿಸಿದ್ದು, ಹಸಿರು ನ್ಯಾಯಪೀಠ ತಮ್ಮ ಆದೇಶದಲ್ಲಿ ಕೆರೆ,ಕೆರೆ ಅಂಗಳ, ಬಫ‌ರ್‌ ಜೋನ್‌ ಪ್ರದೇಶದಲ್ಲಿ ಯಾವುದೇ ಅನ್ಯಚಟುವಟಿಕೆ ನಡೆಸದಂತೆ ನಿಷೇದಿಸಿದ್ದರೂ, ಸಾರ್ವಜನಿಕರೂ ದೂರು ನೀಡಿದ್ದರೂ, ಸ್ಥಳೀಯ ಶಾಸಕರು ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನರ ಅನುಕಂಪ ಗಿಟ್ಟಿಸಿಕೊಳ್ಳಲು ವಿವಾದಿತ ಸ್ಥಳದಲ್ಲಿ ಅಂಬೇಡ್ಕರ್‌ ಭವನ ಕಟ್ಟಲು ಮುಂದಾಗಿದ್ದಾರೆ ಎಂದು ಎಂ.ಶ್ರೀಧರ್‌, ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಸಿವಿಲ್‌ ನ್ಯಾಯಾಲಯದಲ್ಲಿ ಧಾವೆ ಹೂಡಿದ್ದು ಅ. 19ರವರೆಗೂ ವಿವಾದಿತ ಸ್ಥಳದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ತಡೆಯಾಜ್ಞೆ ನೀಡಿದೆ. ಇದೇ ರೀತಿ ಕೆಜಿಎಫ್‌ನಲ್ಲೂ ಉದ್ಯಾನವನದಲ್ಲಿ ಅಂಬೇಡ್ಕರ್‌ ಭವನ, ಮಾಜಿ ಶಾಸಕ ಆರ್ಮುಮುಗಂ ಸಮಾಧಿ ಇತರೇ ಕಟ್ಟಡಗಳನ್ನು ನಿರ್ಮಿಸಿದ್ದು, ಸಾರ್ವಜನಿಕರ ದೂರಿನ ಮೇರೆಗೆ ಕಟ್ಟಡ ತೆರವಿಗೆ ಹೈಕೋರ್ಟ್‌ ಆದೇಶ ನೀಡಿದೆ. ಕೆರೆ ಅಂಗಳದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಮುಂಚೆಯೇ ಸಿವಿಲ್‌ ಕೋರ್ಟ್‌ ತಡೆಯಾಜ್ಞೆ ನೀಡಿರುವುದರಿಂದ ಸರ್ಕಾರದ ಹಣ ಪೋಲಾಗುವುದನ್ನು ತಡೆದಂತಾಗಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.