ಪುರಾತನ ಗೋಕುಂಟೆ, ಕಲ್ಯಾಣಿಗಳ ಪರಭಾರೆ

ಕಣ್ಣುಮುಚ್ಚಿ ಕುಳಿತ ಜಿಲ್ಲಾಡಳಿತ

Team Udayavani, May 8, 2019, 3:15 PM IST

kolar-tdy-3..

ಮಾಲೂರು: ಸದಾ ಬರದಲ್ಲಿರುವ ಜಿಲ್ಲೆಗೆ ಶಾಶ್ವತ ನದಿ ನಾಲೆಗಳಿಲ್ಲ. ಮಳೆಗಾಲದಲ್ಲಿ ಕೆರೆ, ಕುಂಟೆಗಳಲ್ಲಿ ಸಂಗ್ರಹವಾಗುವ ನೀರೇ ಜನ ಜಾನುವಾರುಗಳಿಗೆ ಗತಿ. ಇದನ್ನು ಮನಗಂಡ ಪೂರ್ವಜರು ತಾಲೂಕಿನಲ್ಲಿ ಹತ್ತಾರು ಕೆರೆ ಕುಂಟೆಗಳು ನಿರ್ಮಿಸಿದ್ದರು. ಆದರೆ, ಉಳಿಸಿ ಅಭಿವೃದ್ಧಿಪಡಿಸಬೇಕಾದ ಸ್ಥಳೀಯ ಆಡಳಿತ ಒತ್ತುವರಿ ಮಾಡಿದ್ರೂ ಕ್ರಮಕೈಗೊಳ್ಳುತ್ತಿಲ್ಲ. ಇದರಿಂದ ಕೆರೆ, ಕುಂಟೆ, ಕಲ್ಯಾಣಿಗಳು ಭೂಗಳ್ಳರ ಪಾಲಾಗುತ್ತಿವೆ.

ತಾಲೂಕಿನಲ್ಲಿ 364 ಕೆರೆಗಳಿವೆ ಎಂದು ಅಂಕಿಅಂಶಗಳು ಹೇಳುತ್ತವೆ. ಮಡಿವಾಡ ಚೊಕ್ಕೊಂಡಹಳ್ಳಿ, ಶಿವಾರಪಟ್ಟಣ ಅರಳೇರಿ, ಮಿಂಡಹಳ್ಳಿ, ಮತ್ತಿತರ ಕಡೆಗಳಲ್ಲಿ ಪುರಾತನ ಕಲ್ಯಾಣಿಗಳಿದ್ದು, ಪಟ್ಟಣದಲ್ಲಿಯೂ ಗಜಾಗುಂಡ್ಲ, ಕಪ್ಪಶೆಟ್ಟಿ ಬಾವಿಯಂತಹ ಕಲ್ಯಾಣಗಳಿದ್ದವು. ಜಿಲ್ಲೆಯನ್ನು ಆಳಿದ್ದ ಗಂಗರು ಪ್ರತಿ ಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಿದ್ದರೂ ಎನ್ನಲಾಗಿದೆ. ಇದರ ಜೊತೆಗೆ ಸರ್ಕಾರವು ಜಲಾನಯನ ಇಲಾಖೆಯ ಮೂಲಕ ಕೃಷಿ ಭೂಮಿ ಬಳಿ 275ಕ್ಕೂ ಹೆಚ್ಚು ಚೆಕ್‌ಡ್ಯಾಂ ನಿರ್ಮಿಸಿದೆ.

ಪ್ರತಿವರ್ಷ ಮಳೆಗಾಲದಲ್ಲಿ 750 ರಿಂದ 850 ಮಿ.ಮೀ. ಮಳೆ ಬೀಳುತ್ತದೆ. ಇದರಿಂದ ಕೆರೆ ಕುಂಟೆಗಳಲ್ಲಿ ಸಂಗ್ರಹವಾಗುವ ನೀರೇ ಬೇಸಿಗೆಯಲ್ಲಿ ಜಾನುವಾರುಗಳು, ಕಾಡುಪ್ರಾಣಿಗಳ ದಾಹ ನೀಗುತ್ತಿದೆ. ಮಾಲೂರು ತಾಲೂಕಿನ ಹಲವು ಗ್ರಾಮಗಳ ಮಧ್ಯಭಾಗದಲ್ಲಿನ ಕಲ್ಯಾಣಿಗಳು, ಅರಣ್ಯದಲ್ಲಿನ ಕುಂಟೆಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಣ್ಮರೆಯಾಗುತ್ತಿವೆ.

ಗೋಕುಂಟೆ ಪರಭಾರೆ: ತಾಲೂಕಿನ ಶಿವಾರಪಟ್ಟಣದ ಗ್ರಾಪಂ ಕಚೇರಿ ಮುಂಭಾಗದ ಸರ್ವೆ ನಂ. 71ರಲ್ಲಿನ ಗೋಕುಂಟೆಯನ್ನು ಗ್ರಾಮದ ಕೆಲವು ಪ್ರಭಾವಿಗಳು ರಾತ್ರೋರಾತ್ರಿ ಮುಚ್ಚಿ ಅದೇ ಸ್ಥಳಕ್ಕೆ ದಾಖಲೆ ಸೃಷ್ಟಿಸಿ ಪರಭಾರೆ ಮಾಡಿದ್ದಾರೆ. ಈ ಬಗ್ಗೆ ಗ್ರಾಮದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ತನಿಖೆ ನಡೆಸುವಂತೆ ತಹಶೀಲ್ದಾರ್‌ಗೆ ಜಿಲ್ಲಾಧಿಕಾರಿಗಳು ಮೌಖೀಕ ಅದೇಶ ನೀಡಿದ್ದರೂ ಪ್ರಯೋಜನವಾಗಿಲ್ಲ. 2012 -13ನೇ ಸಾಲಿನಲ್ಲಿ ಜಲಾನಯನ ಇಲಾಖೆಯಿಂದ ಇದೇ ಗೋಕುಂಟೆಯ ದುರಸ್ತಿಗಾಗಿ 36 ಸಾವಿರ ರೂ. ಬಿಡುಗಡೆ ಮಾಡಿ ವೆಚ್ಚ ಮಾಡಿರುವ ದಾಖಲೆಗಳಿದ್ದರೂ ಗೋಕುಂಟೆ ಉಳಿಸುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದಾರೆ.

ಕಲ್ಯಾಣಿಗೆ ಕಸ: ಇತ್ತೀಚಿಗೆ ತಾಲೂಕಿನ ಅಬ್ಬೇನಹಳ್ಳಿ ಗ್ರಾಮದ ಹೃದಯ ಭಾಗದಲ್ಲಿನ ಕಲ್ಯಾಣಿಯನ್ನು ಗ್ರಾಪಂ ಅಡಳಿತವೇ ಮುಚ್ಚಿ ಹಾಕಿದೆ. ಪಟ್ಟಣದ ಹೃದಯ ಭಾಗದಲ್ಲಿನ ಗಜಾಗುಂಡ್ಲ ಕಲ್ಯಾಣಿ ಮುಚ್ಚಿಹಾಕುವ ಪ್ರಯತ್ನಗಳು ನಡೆದು ಸಾರ್ವಜನಿಕರ ಹೋರಾಟಗಳಿಂದ ಉಳಿದುಕೊಂಡಿದೆ. ಕಲ್ಯಾಣಿ ಪುನಶ್ಚೇತನಗೊಳಿಸುವ ಕಾರ್ಯಗಳು ಪ್ರಗತಿಯಲ್ಲಿವೆ.

ಮಾಲೂರು ಪಟ್ಟಣಕ್ಕೆ ನೀರು ಪೂರೈಕೆಯಲ್ಲಿ ತನ್ನದೇ ಪಾತ್ರ ವಹಿಸಿದ್ದ ಕುಪ್ಪಶೆಟ್ಟಿಬಾವಿ ಕಲ್ಯಾಣಿ, ಗಾಂಧಿವೃತ್ತದ ತಿಪ್ಪಾಳಗಳನ್ನು ಮುಚ್ಚಿ ವರ್ಷಗಳೇ ಕಳೆದಿವೆ. ತಿಪ್ಪಾಳದ ಕಲ್ಯಾಣಿಯನ್ನು ಪುರಸಭೆ ಸಾರ್ವಜನಿಕ ಹರಾಜು ಮೂಲಕ ಪರಭಾರೆ ಮಾಡಿಯೂ ಅಗಿದೆ. ರೈಲ್ವೆ ನಿಲ್ದಾಣದ ಬಳಿಯಲ್ಲಿನ ಮಂಡೆಪ್ಪನ ಬಾವಿಯನ್ನು ಮೈಸೂರು ಸಂಸ್ಥಾನದ ದಿವಾನ್‌ ಪೂರ್ಣಯ್ಯ ಕಟ್ಟಿಸಿದ್ದರು. ಪ್ರಸ್ತುತ ನಿರ್ವಹಣೆ ಕೊರತೆ ಕಾರಣ ಮಳೆ ನೀರಿನ ಜೊತೆಗೆ ಚರಂಡಿ ನೀರೂ ನಿಂತು, ಕಸ ಹಾಕಿ ಮುಚ್ಚಲಾಗುತ್ತಿದೆ.

ತಾಲೂಕಿನ ಮಡಿವಾಳ ಗ್ರಾಮದ ಬಳಿಯಲ್ಲಿದ್ದ ಪುರಾತನ ಶಂಕರಯ್ಯನ ಕುಂಟೆಯನ್ನು ಸಮೀಪದಲ್ಲೇ ಬಡಾವಣೆ ಮಾಡುತ್ತಿರುವ ಡೆವಲಪರ್‌ಗಳು ರಾತ್ರೋರಾತ್ರಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ. ತಾಲೂಕಿನ ಸಂತೇಹಳ್ಳಿ ಗ್ರಾಪಂ ವ್ಯಾಪ್ತಿಯ ಬೇಚರಕ್‌ ಗ್ರಾಮವಾಗಿರುವ ಪಟ್ಟಿಗೆನಹಳ್ಳಿ ಸರ್ವೆ ನಂಬರ್‌ 16ರ ಪೈಕಿ 1.4 ಎಕರೆಯಲ್ಲಿರುವ ಕುಂಟೆಯಲ್ಲಿ ಇಂದಿಗೂ ನೀರಿನ ಸಂಗ್ರಹವಿದೆ. ಈ ಭಾಗದಲ್ಲಿನ ಕಾಡು ಪ್ರಾಣಿಗಳಿಗೆ ಅಶ್ರಯವಾಗಿದೆ. ಆದರೆ, ಸಮರ್ಪಕ ನಿರ್ವಹಣೆ ಕೊರತೆಯಿಂದ 1.4 ಎಕರೆ ಪ್ರದೇಶದ ಕುಂಟೆಯ ಅಕ್ಕಪಕ್ಕದ ಜಮೀನು ಒತ್ತುವರಿಯಾಗಿದ್ದು, ಉಳಿದ ಅಲ್ಪಸ್ವಲ್ಪ ಭಾಗದ ಸರ್ಕಾರಿ ಕುಂಟೆಯು ಭೂ ಮಾಫಿಯಾಗಳ ಪಾಲಾಗುವುದರಲ್ಲಿ ಸಂಶಯವಿಲ್ಲ.

ಪಟ್ಟಿಗೆನಹಳ್ಳಿ ಕುಂಟೆಯಲ್ಲಿನ ನೀರು ಕಾಡು ಪ್ರಾಣಿಗಳಿಗೆ ಅಗತ್ಯವಾಗಿದೆ. ಆದರೆ, ನೀರನ್ನು ಅಕ್ರಮವಾಗಿ ಇಟ್ಟಿಗೆ ಕಾರ್ಖಾನೆಯವರು, ಬಡಾವಣೆ ನಿರ್ಮಾಣಕ್ಕೆ ಉಪಯೋಗವಾಗುತ್ತಿರುವುದನ್ನು ತಡೆಯಬೇಕಾಗಿದೆ. ಕುಂಟೆಯಲ್ಲಿನ ನೀರಿಗೆ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರನ್ನು ಇಟ್ಟಿಗೆ ಕಾರ್ಖಾನೆ, ಲೇಔಟ್‌ಗಳ ನಿರ್ಮಾಣಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಡೆಯಬೇಕಾಗಿದೆ. ನೀರು ಸಾಗಿಸಲು ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆಯುತ್ತಿದ್ದು, ಬೆಸ್ಕಾಂ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.

ಈ ಹಿಂದೆ ಜಿಲ್ಲಾಧಿಕಾರಿಗಳಾಗಿದ್ದ ಡಾ.ವಿಶ್ವನಾಥ್‌, ಜಿಪಂ ಸಿಇಒ ಆಗಿದ್ದ ರಾಜೇಂದ್ರಚೋಳನ್‌ ಇಚ್ಛಾಶಕ್ತಿಯ ಫಲವಾಗಿ ತಾಲೂಕಿನ ಹತ್ತಾರು ಕಲ್ಯಾಣಿಗಳು, ಗೋಕುಂಟೆಗಳನ್ನು ಪ್ರತಿವಾರ ಒಂದು ಕಲ್ಯಾಣಿ ಆಯ್ಕೆ ಮಾಡಿಕೊಂಡು ಸರ್ಕಾರಿ ಅಧಿಕಾರಿಗಳು, ಸಾರ್ವಜನಿಕರ ಸಹಕಾರೊಂದಿಗೆ ಹೂಳು ತೆಗೆಯುವ ಕಾರ್ಯ ಮಾಡಿದ್ದರ ಫಲವಾಗಿ ಇಂದಿಗೂ ಕೆಲ ಕಲ್ಯಾಣಿಗಳಲ್ಲಿ ನೀರಿದೆ.

ಇಂತಹ ಮಹತ್ವದ ಕಾರ್ಯದಿಂದಾಗಿ ಜಿಲ್ಲೆಯ ಹತ್ತಾರು ಕಲ್ಯಾಣಿಗಳು ಮತ್ತು ಗೋಕುಂಟೆಗಳು ಮರುಪೂರಣಕ್ಕೆ ಕಾರಣವಾಗಿವೆ. ಇಂತಹ ಮಾದರಿ ಪ್ರಯತ್ನಗಳ ನಡುವೆಯೂ ಪ್ರಸ್ತುತ ಅಡಳಿತವು ಗ್ರಾಮಗಳ ಮಧ್ಯಭಾಗದಲ್ಲಿನ ಕಲ್ಯಾಣಿ, ಗೋಕುಂಟೆ ಮುಚ್ಚುತ್ತಿದೆ.

ಪ್ರಸ್ತುತ ಸರ್ಕಾರ ನೂರಾರು ಕೋಟಿ ರೂ. ವೆಚ್ಚ ಮಾಡಿ ಕೆ.ಸಿ.ವ್ಯಾಲಿ, ಎತ್ತಿನಹೊಳೆ ಹಾಗೂ ಮೇಕೆದಾಟು ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಿರುವ ಕಾಲದಲ್ಲಿ ಜಿಲ್ಲೆಯ ಕೆರೆ ಕುಂಟೆ ಕಲ್ಯಾಣಿಗಳು ತುಂಬಿ ಸಮೃದ್ಧಿಯಾಗುವ ವಿಶ್ವಾಸವಿದೆ. ತಾಲೂಕು ಅಡಳಿತ ಅವುಗಳ ಉಳಿಸುವ ಕಾರ್ಯ ಮಾಡಬೇಕಾಗಿದೆ.

● ಎಂ.ರವಿಕುಮಾರ್‌

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.