ಅವಸಾನದ ಅಂಚಿನಲ್ಲಿರುವ ಪುರಾತನ ಕಲ್ಯಾಣಿ

ದೇವರಿಗೆ ಚಕ್ರಸ್ನಾನ ಮಾಡಿಸುತ್ತಿದ್ದ ಕಲ್ಯಾಣಿಯಲ್ಲಿ ಕೊಳಚೆ ನೀರು, ಹೂಳು

Team Udayavani, May 14, 2019, 11:30 AM IST

kolar-tdy-4..

ಮುಳಬಾಗಿಲು: ತಾಲೂಕಿನ ದುಗ್ಗಸಂದ್ರ ಹೋಬಳಿ ಮಂಡಿಕಲ್ ಗ್ರಾಮದಲ್ಲಿ ಬೃಹತ್‌ ಕಲ್ಯಾಣಿಯಿದ್ದು, ನಿರ್ವಹಣೆ ಇಲ್ಲದೇ, ಹೂಳು ತುಂಬಿ ಹೊಂಡವಾಗಿದೆ. ಗ್ರಾಮಕ್ಕೆ ಒಂದಿಕೊಂಡಂತೆ ಅನತಿ ದೂರದಲ್ಲಿಯೇ ಪ್ರಸನ್ನ ಚೌಡೇಶ್ವರಿ ದೇವಾಲಯವಿದೆ. ಪ್ರತಿ ವರ್ಷ ಬ್ರಹ್ಮ ರಥೋತ್ಸವ ಮತ್ತು ಜಾತ್ರೆ ನಡೆಯುತ್ತಿದೆ.

ಹಿಂದೆ ದೇವರ ವಿಗ್ರಹಕ್ಕೆ 70x70x24 ಅಡಿ ವಿಸ್ತೀರ್ಣವುಳ್ಳ ಕಲ್ಯಾಣಿಯಲ್ಲಿ ಚಕ್ರಸ್ನಾನ ಮಾಡಿಸಿ, ನಂತರ ಜಾತ್ರೆಗೆ ಚಾಲನೆ ನೀಡಲಾಗುತ್ತಿತ್ತು. ಜೊತೆಗೆ ಗ್ರಾಮದ ಜನರು ಕಲ್ಯಾಣಿಯ ನೀರನ್ನು ಕುಡಿಯಲು ಬಳಕೆ ಮಾಡುತ್ತಿದ್ದರು. ಕಾಲನಂತರದಲ್ಲಿ ಕಲ್ಯಾಣ ನಿರ್ವಹಣೆ ಇಲ್ಲದೆ, ಮುಚ್ಚಿದ್ದರಿಂದ ಚಕ್ರ ಸ್ನಾನ ಕಾರ್ಯಕ್ರಮವನ್ನು ವನದಲ್ಲಿರುವ ಒಂದು ಸಣ್ಣ ಕೊಳದಲ್ಲಿ ನಡೆಸಲಾಗುತ್ತಿದೆ. ಬಹಳಷ್ಟು ಭಕ್ತರು ಬಂದು ಅಲ್ಲಿ ಸ್ನಾನ ಮಾಡಿ ಒಂದು ನಾಗರಕಲ್ಲನ್ನು ಕಲ್ಯಾಣಿಯ ಮೇಲ್ಗಡೆ ಪ್ರತಿಷ್ಠಾಪಿಸಿದರೆ ರೋಗರುಜಿನಗಳು ವಾಸಿಯಾಗುವುದು ಎಂಬ ನಂಬಿಕೆ ಗ್ರಾಮಸ್ಥರದ್ದಾಗಿದೆ.

ಕೊಳಚೆ ನೀರು: ಕಲ್ಯಾಣಿ ಅಂಚಿನಲ್ಲಿಯೇ ಪ್ರಾಚೀನ ಕಾಲದ ನಾಗರಕಲ್ಲುಗಳ ಜೊತೆ ವೀರಕಲ್ಲುಗಳಿವೆ. ಈ ಒಂದು ಪುಷ್ಕರಣಿಯಲ್ಲಿಯೇ ಪಾಳೆಗಾರ ಬಿಸೇಗೌಡರು ಸ್ನಾನ ಮಾಡಿ ನಂತರ ಚೌಡೇಶ್ವರಿ ಮಾತೆಗೆ ಪೂಜೆ ಸಲ್ಲಿಸಿ ನಂತರ ಚಂದ್ರಗಿರಿ ಕೊಳ್ಳೆಯನ್ನು ಹೊಡೆಯಲು ಹಾಗೂ ಇತರೆ ಕಡೆಗಳಿಗೆ ಪ್ರಯಾಣ ಬೆಳೆಸಿದ್ದರು ಎನ್ನುವುದು ಗ್ರಾಮಸ್ಥರ ನಂಬಿಕೆ. ಈ ಕಲ್ಯಾಣಿಗೆ ಅರಣ್ಯದಿಂದ ರಾಜಕಾಲುವೆ ಇದ್ದು, ಆ ಮೂಲಕ ಮಳೆಗಾಲದಲ್ಲಿ ನೀರು ಹರಿದು ಬರುತ್ತಿತ್ತು. ಆದರೆ, ಈಗ ಮಳೆಯೂ ಇಲ್ಲ, ರಾಜ ಕಾಲುವೆಯೂ ಇಲ್ಲ. ಕೆಸರು ನೀರು ತುಂಬಿಕೊಂಡು ದುರ್ನಾತ ಬೀರುತ್ತಿದೆ.

ಗತವೈಭವ ಮರುಕಳುಹಿಸಿ: ಈ ಕಲ್ಯಾಣಿಯಲ್ಲಿ ನೀರು ತುಂಬಾ ಕಡಿಮೆಯಾಗಿದೆ. 3 ಮೀಟರ್‌ ಆಳದಷ್ಟು ಹೂಳು ತುಂಬಿದ್ದು, ಅದರ ಮೇಲೂ ಎರಡು ಅಡಿ ನೀರು ಈಗಲೂ ಇದೆ. ಅದು ಕೊಳಚೆ ನೀರಾಗಿರುವ ಪರಿಣಾಮ ಬಳಸಲು ಯೋಗ್ಯವಾಗಿಲ್ಲ. ಶೀಘ್ರ ಕಲ್ಯಾಣಿ ಪುನಶ್ಚೇತನಗೊಳಿಸಿ ಗತಕಾಲದ ವೈಭವವನ್ನು ಮರುಕಳಿಸುವಂತೆ ಮಾಡಬೇಕೆಂದು ಗ್ರಾಮದ ಮುಖಂಡ ಎಸ್‌.ಚೌಡಪ್ಪ ಮತ್ತು ಮಂಡಿಕಲ್ ಬ್ರಾಹ್ಮಣ ಸಂಘದ ಅಧ್ಯಕ್ಷ ಕೆ.ಮಾಧವರಾವ್‌ ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.

ಎಂ.ನಾಗರಾಜಯ್ಯ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.