ಅನ್ನಭಾಗ್ಯ ತೊಗರಿಬೇಳೆ ಕಳಪೆ, ವಾಪಸ್ ಕಳುಹಿಸಿ
Team Udayavani, May 19, 2019, 3:24 PM IST
ಕಳಪೆ ತೊಗರಿಬೇಳೆ ವಿತರಿಸಿದ ಟೆಂಡರ್ದಾರರು, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ರೈತ ಸಂಘ ಆಹಾರ ಸರಬರಾಜು ಇಲಾಖೆ ವ್ಯವಸ್ಥಾಪಕ ಶಿವಣ್ಣಗೆ ಆಗ್ರಹಿಸಿತು.
ಕೋಲಾರ: ಅನ್ನಭಾಗ್ಯ ಯೋಜನೆಯಡಿ ವಿತರಿಸುವ ತೊಗರಿಬೇಳೆ ಸಂಪೂರ್ಣ ಕಳಪೆಯಾಗಿದ್ದು, ಟೆಂಡರ್ದಾರರು, ಅವರಿಗೆ ಕುಮ್ಮಕ್ಕು ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಆಹಾರ ಸರಬರಾಜು ಇಲಾಖೆ ವ್ಯವಸ್ಥಾಪಕ ಶಿವಣ್ಣಗೆ ರೈತ ಸಂಘದಿಂದ ಮನವಿ ನೀಡಲಾಯಿತು.
ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಅಪೌಷ್ಟಿಕತೆಯಿಂದ ಯಾವ ವ್ಯಕ್ತಿಯೂ ನರಳಬಾರದೆಂದು ಸಾವಿರಾರು ಕೋಟಿ ಖರ್ಚು ಮಾಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಆದರೆ, ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಟೆಂಡರ್ದಾರರ ಹಣದಾಹಕ್ಕೆ ಬಡವರ ಆಹಾರ ಕಳಪೆ ಹಾಗೂ ಕಾಳಸಂತೆಯಲ್ಲಿ ಮಾರಾಟ ಮಾಡುವ ದೊಡ್ಡ ದಂಧೆಕೋರರು ಜಿಲ್ಲೆಯಲ್ಲಿದ್ದಾರೆ ಎಂದು ಆರೋಪಿಸಿದರು.
ವಾಪಸ್ ಕಳುಹಿಸಿ: ಎರಡು ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ತೊಗರಿಬೇಳೆ ವಿತರಿಸುತ್ತಿಲ್ಲ. ಖಾಸಗಿ ಟೆಂಡರ್ದಾರರ ಎನ್ಸಿಡಿಎಕ್ಸ್ ಕಂಪನಿಯಿಂದ ಉಪ ಗುತ್ತಿಗೆ ಪಡೆದು, ಅತಿ ಕಳಪೆ ತೊಗರಿಬೇಳೆ ಪೂರೈಕೆ ಮಾಡಿದ್ದರಿಂದ ಅದನ್ನು ಕೋಲಾರ ತಾಲೂಕಿನಿಂದ ವಾಪಸ್ ಕಳುಹಿಸಿದ್ದೀರಿ. ಆದರೆ, ಈಗಾಗಲೇ ಮಾಲೂರು, ಬಂಗಾರಪೇಟೆ, ಶ್ರೀನಿವಾಸಪುರ, ಮುಳಬಾಗಿಲು ತಾಲೂಕುಗಳಿಗೆ ಪೂರೈಕೆ ಮಾಡಿರುವ ತೊಗರಿಯನ್ನೂ ಕೂಡಲೇ ವಾಪಸ್ ಕಳುಹಿಸಬೇಕು ಎಂದು ಒತ್ತಾಯಿಸಿದರು.
ತೊಗರಿಬೇಳೆಯ ಗುಣಮಟ್ಟವನ್ನು ಪರಿಶೀಲನೆ ಮಾಡಲು ನೇಮಿಸಿರುವ ಅಧಿಕಾರಿಯು ಸಹ ಟೆಂಡರ್ದಾರರ ಜೊತೆ ಶಾಮೀಲಾಗಿ ಈ ರೀತಿ ಕಳಪೆ ಆಹಾರವನ್ನು ಗ್ರಾಹಕರಿಗೆ ನೀಡಿ, ವಂಚನೆ ಮಾಡುತ್ತಿರುವುದು ಬಹಿರಂಗವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗುಣಮಟ್ಟದ ಬೇಳೆ ವಿತರಿಸಿ: ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಈಗಾಗಲೇ ಪೂರೈಕೆಯಾಗಿರುವ ಕಳಪೆ ತೊಗರಿ ವಾಪಸ್ ಕಳುಹಿಸಿ, ಗುಣಮಟ್ಟದ್ದನ್ನು ಎರಡು ದಿನದ ಒಳಗೆ ನೀಡದೇ ಹೋದರೆ, ತಮ್ಮ ಇಲಾಖೆ ಮುಂದೆ ಸಾವಿರಾರು ಗ್ರಾಹಕರ ಜೊತೆ ತೊಗರಿ ಸುರಿದು ನ್ಯಾಯ ಪಡೆದುಕೊಳ್ಳಬೇಕಾಗುತ್ತದೆಂದು ಎಚ್ಚರಿಕೆ ನೀಡಿದರು.
ಸೂಕ್ತ ಕ್ರಮದ ಭರವಸೆ: ಮನವಿ ಸ್ವೀಕರಿಸಿದ ವ್ಯವಸ್ಥಾಪಕ ಶಿವಣ್ಣ ಮಾತನಾಡಿ, ಅನ್ನಭಾಗ್ಯ ಯೋಜನೆಯಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಸುತ್ತಿರುವ ತೊಗರಿಬೇಳೆ ಗುಣಮಟ್ಟ ಕಡಿಮೆ ಇದ್ದು, ಅದನ್ನು ವಾಪಸ್ ಕಳುಹಿಸುವ ಜೊತೆ 3 ತಿಂಗಳಿಂದ ಸಮರ್ಪಕ ಬೇಳೆಯನ್ನು ಟೆಂಡರ್ದಾರರು ಪೂರೈಸುತ್ತಿಲ್ಲ. ಇದರಿಂದ ನ್ಯಾಯಬೆಲೆ ಅಂಗಡಿ ಮಾಲಿಕರಿಗೆ ತೊಂದರೆಯಾಗಿದೆ. ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತಂದು ಗುಣಮಟ್ಟದ ಬೇಳೆ ತರಿಸಿಕೊಡುವ ಭರವಸೆ ನೀಡಿದರು.
ಮನವಿ ನೀಡುವಾಗ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್, ಮಂಗಸಂದ್ರ ವೆಂಕಟೇಶ್, ತಿಪ್ಪಣ್ಣ, ಅಶೋಕ್, ಅಶ್ವತ್ಥಪ್ಪ, ಮಂಗಸಂದ್ರ ನಾಗೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ