ವೈದ್ಯಕೀಯ ಕಾಲೇಜು ಮಂಜೂರಾತಿಗೆ ಮನವಿ
Team Udayavani, Feb 6, 2022, 12:59 PM IST
ಕೋಲಾರ: ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಸಿಎಂಗೆ ಶಿಫಾರಸು ಮಾಡುವಂತೆ ಕೋರಿ ಶಾಸಕ ಕೆ.ಶ್ರೀನಿವಾಸಗೌಡಗೆ ಸಾಮಾಜಿಕ ಕಾರ್ಯಕರ್ತ ಗೌರಿಪೇಟೆ ಕೆ.ಎನ್.ರವೀಂದ್ರನಾಥ್ ಮನವಿ ನೀಡಿದರು.
ಜಿಲ್ಲೆಯು ಯಾವುದೇ ನದಿ-ನಾಲೆಗಳಿಲ್ಲದೆ ಬರಪೀಡಿತ ಪ್ರದೇಶವಾಗಿದ್ದು, ನೀರಿನ ಸಮಸ್ಯೆಯಿಂದಾಗಿ ಇಲ್ಲಿನ ಜನರು ಫ್ಲೋರೋಸಿಸ್, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಚರ್ಮ ರೋಗ, ಕಣ್ಣಿನ ತೊಂದರೆ ಮುಂತಾದ ಕಾಯಿಲೆಗಳಿಂದ ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಕೋಲಾರವು ಜಿಲ್ಲಾ ಕೇಂದ್ರವಾಗಿದ್ದರೂ ಸುಸಜ್ಜಿತ ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದ ಕಾರಣ, ಇಂತಹ ರೋಗಗಳಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಭಾಗದ ಶೇ.90 ಜನರು ಹಣಕಾಸಿನಲ್ಲಿ ಸ್ಥಿತಿವಂತರಲ್ಲದ ಕಾರಣ, ಖಾಸಗಿ ಆಸ್ಪತ್ರೆಗಳಿಗೆ ಹೋಗಿ, ಹಣ ಕೊಟ್ಟು ಚಿಕಿತ್ಸೆ ಪಡೆ ಯುವ ಸ್ಥಿತಿಯಲ್ಲಿ ಇರುವುದಿಲ್ಲ ಎಂದು ವಿವರಿಸಿದರು. ಕೋಲಾರವು ಜಿಲ್ಲಾ ಕೇಂದ್ರ ಭಾಗದಲ್ಲಿ ಇದ್ದು, ಇದಕ್ಕೆ ಸಂಬಂಧಿಸಿದಂತೆ ತಾಲೂಕು ಕೇಂದ್ರಗಳಿಂದ 20-30 ಕಿ.ಮೀ ದೂರದಲ್ಲಿ ಇರುವುದರ ಜೊತೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತದೆ. ಇದು ಅನಿವಾರ್ಯ ಸಂದರ್ಭಗಳಲ್ಲಿ ರೋಗಿಗಳನ್ನು ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಸಾಗಿಸಲು ಅನುಕೂಲವಾಗಿದೆ. ಎಲ್ಲಾ ತಾಲೂಕಿನವರು, ಇಲ್ಲಿಗೆ ಬರಲು ಉತ್ತಮ ರಸ್ತೆಯ ಅನುಕೂಲವಿದ್ದು, ಸಮಯವನ್ನು ಉಳಿಸುತ್ತದೆ ಎಂದು ಹೇಳಿದರು.
ಪ್ರತಿ ಜಿಲ್ಲಾ ಕೇಂದ್ರಕ್ಕೆ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಒದಗಿಸಬೇಕು ಎಂಬುವುದು ತಮ್ಮಕೇಂದ್ರ ಸರ್ಕಾರದ ನಿಲುವು ಮತ್ತು ಕರ್ನಾಟಕ ರಾಜ್ಸರ್ಕಾರದ ನಿಲುವು ಸಹ ಆಗಿದೆ. ಆದ್ದರಿಂದಕೋಲಾರಕ್ಕೆ ಒಂದು ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸರ್ಕಾರಿ ವ್ಯದ್ಯಕೀಯ ಕಾಲೇಜನ್ನು ಮಂಜೂರು ಮಾಡಬೇಕೆಂದು ವಿವರಿಸಿದರು.
ಅತಿಥಿ ಉಪನ್ಯಾಸಕ ಲಕ್ಷ್ಮೀನಾರಾಯಣ್, ಲಕ್ಷ್ಮೀದೇವಿ, ನಾಗರಾಜ್, ಆಲ್ಪರ್ಟ್, ಮಂಜುಳಮ್ಮ, ಗೌರಿಪೇಟೆಯ ಎಂ.ಎನ್.ಮೂರ್ತಿ, ಮಲ್ಲಗಾನಹಳ್ಳಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು
AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್