ಬುಡ್ಗಜಂಗಮರಿಗೆ ಜಾತಿಪ್ರಮಾಣ ಪತ್ರಕ್ಕೆ ಮನವಿ


Team Udayavani, Dec 13, 2019, 2:25 PM IST

kolar-tdy-2

ಶ್ರೀನಿವಾಸಪುರ: ಸ್ವಾತಂತ್ರ್ಯ ಬಂದು 73 ವರ್ಷಗಳಾದ್ರೂ ಅಲೆಮಾರಿ ಬುಡ್ಗ ಜಂಗಮರನ್ನು ಗುರುತಿಸುವಲ್ಲಿ ತಹಶೀಲ್ದಾರರು ವಿಫಲರಾಗಿದ್ದಾರೆ ಎಂದು ಅಲೆ ಮಾರಿ ಬುಡಕಟ್ಟು ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಗೇಶ್‌ ಆರೋಪಿಸಿದರು.

ಪಟ್ಟಣದ ತಾಲೂಕು ಕಚೇರಿ ಮುಂದೆ ಅಲೆಮಾರಿ ಬುಡಕಟ್ಟು ಮಹಾಸಭಾ ನೇತೃತ್ವದಲ್ಲಿ ಬುಡ್ಗ ಜಂಗಮ ಸಮುದಾಯದ ಮಕ್ಕಳು, ಮಹಿಳೆಯರು, ಯುವಕರು ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ನಡೆಸಿದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಜಾಣಕುರುಡು: ಸ್ವಾತಂತ್ರ ಪೂರ್ವ ದಿಂದಲೂ ಅಲೆಮಾರಿ ಬುಡ್ಗ ಜಂಗಮರ ಕುರಿತು ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ನಡೆಸಿರುವ ಹಲವು ಶಾಸ್ತ್ರೀಯ ಅಧ್ಯಯನಗಳು ಇವೆ. ಇದರ ಬಗ್ಗೆ ಆದೇಶಗಳು ಇದ್ದರೂ ತಾಲೂಕು ಆಡಳಿತ ಅಧಿಕಾರಿಗಳು ಜಾಣಕುರುಡರಂತೆ ವರ್ತಿಸುತ್ತಿದ್ದಾರೆ. ಸಂಬಂಧಿಸಿದಂತೆ ಜಾತಿ ಪ್ರಮಾಣ ಪತ್ರದ ಬಗ್ಗೆ ಸರ್ಕಾರದ ಆಧ್ಯಯನ, ಆದೇಶಗಳನ್ನು ನೋಡಿ ಜಿಲ್ಲಾದ್ಯಂತ ಬುಡ್ಗಜಂಗಮರಿಗೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ. ಆದರೆ, ಶ್ರೀನಿವಾಸಪುರದಲ್ಲಿ ಮಾತ್ರ ಇತ್ತೀಚಿಗೆ ಬಂದ ಅಧಿಕಾರಿಗಳು ಮಲತಾಯಿ ಧೋರಣೆ ಅನುಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಚೇರಿಗೆ ಅಲೆದಾಟ: ತಾಲೂಕು ಆಡಳಿತ ಅಧಿಕಾರಿಗಳು ಕಿವಿ, ಕಣ್ಣು ಕೇಳಿಸದಂತಹ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಬಲಾಡ್ಯರ ಬಂಟರಂತೆ ನಡೆದುಕೊಳ್ಳುತ್ತಿದ್ದಾರೆ. ಪ್ರತಿದಿನ ಜಾತಿ ಪ್ರಮಾಣ ಪ್ರತಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡಲಾಗುತ್ತಿದೆ. ಸಮುದಾಯದವರನ್ನು ಕಡೆಗಣಿಸುತ್ತಿದ್ದಾರೆ ಎಂದು ವಿಷಾದಿಸಿದರು.

ಬಾಬಾ ಸಾಹೇಬ್‌ ಅಂಬೇಡ್ಕರ್‌ ನೀಡಿದ ಸಂವಿಧಾನ ಹಕ್ಕುಗಳಿಗೆ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಾ, ಶೋಷಿತ ಸಮುದಾಯಗಳಿಗೆ ಇರುವ ಹಕ್ಕುಗಳನ್ನು ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಮಲತಾಯಿ ಧೋರಣೆ ತಾಳುತ್ತಿದ್ದಾರೆ ಎಂದು ಕಿಡಿಕಾರಿದರು.

ಹೋರಾಟದ ಎಚ್ಚರಿಕೆ: ಈ ನಿಟ್ಟಿನಲ್ಲಿ ಸೂಕ್ತ ಪರಿಶೀಲನೆ ನಡೆಸಿ ಬುಡ್ಗ ಜಂಗ ಮರಿಗೆ ಜಾತಿ ಪ್ರಮಾಣ ಪತ್ರ ವಿತರಿಸದಿದ್ದಲ್ಲಿ ನ್ಯಾಯ ಸಿಗುವ ತನಕ ಅನಿರ್ದಿಷ್ಟಾವಧಿ ಹೋರಾಟ ನಡೆಸಬೇ ಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಮಹಾಸಭಾ ತಾಲೂಕು ಅಧ್ಯಕ್ಷ ಕೆ. ಎಂ.ಮಂಜುನಾಥ, ಸಮುದಾಯದ  ಮುಖಂಡರಾದ ಎಂ.ಶಂಕರ್‌, ಎಲ್‌. ಶಂಕರ್‌, ಕೆ.ವಿ.ವೆಂಕಟರವಣ, ಸಿ.ಎನ್‌. ಮಂಜುನಾಥ, ಕೆ.ಜಿ.ನಾಗರಾಜ್‌, ಗುರುಮೂರ್ತಿ, ಡಿ.ವಿ.ರೆಡ್ಡೆಪ್ಪ, ಕೆ. ಎಂ.ದೇವರಾಜ, ರೆಡ್ಡೆಪ್ಪ, ನಾಗರಾಜ, ಬೈಕೊತ್ತೂರು ಶಂಕರ, ನೆಲವಂಕಿ ಶಂಕರ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.