ಯೋಜನಾ ಪ್ರಾಧಿಕಾರಕ್ಕೆ ಸದಸ್ಯರ ನೇಮಕ
Team Udayavani, Feb 1, 2020, 3:48 PM IST
ಮಾಲೂರು: ತಾಲೂಕು ನಗರ ಹಾಗೂ ಗ್ರಾಮೀಣ ಯೋಜನಾ ಪ್ರಾಧಿಕಾರಕ್ಕೆ ನೂತನ ಸದಸ್ಯರನ್ನು ನಾಮನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಸಿ.ಎಸ್.ಶಿವ ಕುಮಾರಸ್ವಾಮಿ ಆದೇಶ ಹೊರಡಿಸಿದ್ದು, ಶುಕ್ರವಾರ ಪದಗ್ರಹಣ ಮಾಡಿದರು.
ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಸ್ತಿ ಸತೀಶ್ ಆರಾಧ್ಯ ಅವರನ್ನು ಕಳೆದ ನ.4ರಂದು ಅಯ್ಕೆ ಮಾಡಿದ್ದ ಸರ್ಕಾರ, ಪ್ರಸ್ತುತ ನಗರ ಬಿಜೆಪಿ ಅಧ್ಯಕ್ಷ ಎಂ.ಸಿ.ರವಿ, ಸಿದ್ದನಹಳ್ಳಿ ಪ್ರಭಾಕರ್ ಹಾಗೂ ತಾಪಂ ಮಾಜಿ ಸದಸ್ಯೆ ಅಮರಾವತಿ ಅವರನ್ನುಸದಸ್ಯರನ್ನಾಗಿ ಆಯ್ಕೆ ಮಾಡಿದೆ. ಪ್ರಾಧಿಕಾರದ ಕಚೇರಿಯಲ್ಲಿ ಪದಗ್ರಹಣ ಮಾಡಿದ ಸದಸ್ಯರನ್ನು ಸ್ವಾಗತಿಸಿ ಮಾತನಾಡಿದ ಅಧ್ಯಕ್ಷ ಸತೀಶ್ ಆರಾಧ್ಯ, ತಮ್ಮ ಶಿಫಾರಸ್ಸಿನ ಮೇರೆಗೆ ಸದಸ್ಯರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ. ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರು ಸಭೆ ನಡೆಸಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಬೇಕಾಗಿದೆ. ಪ್ರಾಧಿಕಾರದಿಂದ ಅನೇಕ ಸಾರ್ವಜನಿಕ ಕೆಲಸಗಳು ಬಾಕಿ ಇದ್ದು, ಶೀಘ್ರ ಪೂರ್ಣಗೊಳಿಸುವುದಾಗಿ ತಿಳಿಸಿದರು.
ಪ್ರಾಧಿಕಾರದ ಮೀಸಲು ಹಣದಲ್ಲಿ ಕೆರೆಯ ಅಭಿವೃದ್ಧಿಗೆ ಹಿಂದೆ ಇದ್ದ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ಯೋಜನೆಯು ಕುಂಟಿತವಾಗಿದೆ. ವಸತಿಸಂಕೀರ್ಣಗಳ ಅಭಿವೃದ್ಧಿ, ಭೂಪರಿವರ್ತನೆ ಕಡತಗಳ ವಿಲೇವಾರಿಗೆ ಆದ್ಯತೆ ನೀಡುವುದಾಗಿ ಹೇಳಿದರು.
ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಬಿ.ಆರ್.ವೆಂಕಟೇಶ್, ಪುರಸಭೆ ಸದಸ್ಯರಾದ ಭಾನುತೇಜ್, ಸಿಎಂಸಿ ಮುನಿರಾಜು, ಮಾಜಿ ಸದಸ್ಯೆಶ್ರೀವಳ್ಳಿರಮೇಶ್, ದೊಡ್ಡಿ ರಾಜಪ್ಪ, ಎಎಲ್ಕೆ ಕುಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್