ಅರಸು ಜಯಂತಿ ಅರ್ಥಪೂರ್ಣ ಆಚರಣೆ
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಮಂಜುನಾಥ್ ನಿರ್ಧಾರ • 20ರಂದು ಜಯಂತಿ ಕಾರ್ಯಕ್ರಮ
Team Udayavani, Aug 7, 2019, 3:07 PM IST
ಕೋಲಾರದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ , ಅರಸು ಜಯಂತಿ ಪೂರ್ವಭಾವಿ ಸಭೆ ನಡೆಸಿದರು.
ಕೋಲಾರ: ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು 104ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿ ಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದೇವರಾಜ ಅರಸು ಜಯಂತಿ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗಣ್ಯ ವ್ಯಕ್ತಿಗಳ ಜನ್ಮದಿನಾಚರಣೆಯ ಉದ್ದೇಶದ ಬಗ್ಗೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದ ಅವರು, ಪ್ರತಿಯೊಬ್ಬರು ಪಾಲ್ಗೊಳ್ಳಬೇಕು ಎಂದರು.
ಭಾವಚಿತ್ರದ ಮೆರವಣಿಗೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಮಾತನಾಡಿ, ಆ.20ರಂದು ಜಯಂತಿ ಆಚರಣೆ ಮಾಡಲಿದ್ದು, ಬೆಳಗ್ಗೆ 9.30ಕ್ಕೆ ದೇವರಾಜ ಅರಸು ಭವನದ ಸಮೀಪದಿಂದ ಅರಸು ಭಾವಚಿತ್ರದ ಮೆರವಣಿಗೆ ನಡೆಯಲಿದೆ, ಆನಂತರ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ವಿಜೇತರಿಗೆ ಬಹುಮಾನ: ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡಿದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು, ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ನಡೆಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.
ಸುಸಜ್ಜಿತ ರಸ್ತೆ ಇಲ್ಲ: ಮುಖಂಡ ಮಂಜುನಾಥ್ ಸಭೆಯಲ್ಲಿ ಮಾತನಾಡಿ, ದೇವರಾಜು ಅರಸು ಭವನಕ್ಕೆ ಹೋಗಲು ಸುಸಜ್ಜಿತ ರಸ್ತೆಯಿಲ್ಲ. ರಸ್ತೆಗೆ ಬಿಟ್ಟುಕೊಂಡಿದ್ದ ಜಾಗವನ್ನು ಕೆಲ ಪ್ರತಿಷ್ಠಿತ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ಬೇಲಿ ಹಾಕಿಕೊಂಡಿದ್ದಾರೆ. ಜಾಗ ಒತ್ತುವರಿ ತೆರವುಗೊಳಿಸುವಂತೆ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಹಿಂದೆ ಅಧಿಕಾರದಲ್ಲಿದ್ದ ಚುನಾಯಿತ ಆಡಳಿತ ಮಂಡಳಿಯೇ ಒತ್ತುವರಿಗೆ ಕಾರಣ ಎಂದು ದೂರಿದರು.
ಪರಿಶೀಲನೆ ಸೂಚನೆ: ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮತನಾಡಿ, ಕೆರೆ ಮುಳುಗಡೆ ಜಾಗ ಮತ್ತೂಬ್ಬರಿಗೆ ಯಾವ ಮೂಲದಿಂದ ಮಂಜೂರಾಗಿದೆ ಅಥವಾ ಒತ್ತುವರಿಯಾಗಿರುವುದೋ ಪರಿಶೀಲಿಸಿ ಮಾಹಿತಿ ನೀಡಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು. ಪ್ರಸ್ತುತ ಶಿಷ್ಟಾಚಾರ ಪಾಲನೆಗೆ ಸಂಪುಟ ರಚನೆ ಆಗಿಲ್ಲ. ಆ.20ರಂದು ಕಾರ್ಯಕ್ರಮ ಇರು ವುದರಿಂದ ನೋಡಿಕೊಂಡು ಆಹ್ವಾನ ಪತ್ರಿಕೆಯನ್ನು ಮುದ್ರಿಸುವಂತೆ ಅರಸು ಅಭಿವೃದ್ಧಿ ನಿಗಮದ ವ್ಯವ ಸ್ಥಾಪಕ ಗಣೇಶ್ಗೆ ಸೂಚಿಸಿದರು.
ಸಭೆಯಲ್ಲಿ ಬಿಸಿಎಂ ಇಲಾಖೆ ಅಧಿಕಾರಿ ರಾಜಣ್ಣ, ವಿವಿಧ ಸಮುದಾಯದ ಮುಖಂಡರಾದ ರಾಜೇಶ್ಸಿಂಗ್, ಪ್ರಸಾದ್ಬಾಬು, ಕೃಷ್ಣಮೂರ್ತಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ