ಕಲಾವಿದರ ಪ್ರಯತ್ನದಿಂದ ಕಲೆ ಜೀವಂತ


Team Udayavani, Mar 28, 2021, 5:30 PM IST

Art is alive with the efforts of artists

ಕೋಲಾರ: ಜಿಲ್ಲೆಯ ಹಿರಿಯ ರಂಗಭೂಮಿ ಕಲಾವಿದರಾದ ಎನ್‌.ಆರ್‌.ಜ್ಞಾನಮೂರ್ತಿ, ಚೇತನ್‌ಪ್ರಸಾದ್‌, ಬಿ.ವಿ.ವಿ.ಗಿರಿ, ಬಿ.ಎನ್‌. ಅಣ್ಣಯ್ಯಪ್ಪ ಹಾಗೂ ನಾಟಕಕಾರ ಕಾ.ಹು. ಚಾನ್‌ಪಾಷಾರಿಗೆ ರಂಗಗೌರವ ನೀಡುವ ಮೂಲಕ ವಿಶ್ವರಂಗಭೂಮಿ ದಿನಾಚರಣೆಯನ್ನು ತಾಲೂಕಿನ ವೇಮಗಲ್‌ ಜೂನಿಯರ್‌ ಕಾಲೇಜಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕರ್ನಾಟಕ ನಾಟಕ ಅಕಾಡೆಮಿ, ರಂಗ ವಿಜಯಾ ಟ್ರಸ್ಟ್‌ಸಹಯೋಗದೊಂದಿಗೆ ನಡೆದ ವಿಶ್ವರಂಗಭೂಮಿ ದಿನಾಚರಣೆಯನ್ನು ಜಿಲ್ಲೆಯ ಹಿರಿಯ ಕಲಾವಿದ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮದ್ದೇರಿ ಮುನಿರೆಡ್ಡಿ ಉದ್ಘಾಟಿಸಿ, ಕಲೆ ಮತ್ತು ಕಲಾವಿದರಿಗೆ ಅಳಿವಿಲ್ಲ. ಕಲೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಲಕ್ಷಾಂತರ ಮಂದಿ ಕಲಾವಿದರಿದ್ದು, ಅಂತವರೆಲ್ಲರ ಪ್ರಯತ್ನದಿಂದಲೇ ಕಲೆ ಉಳಿದಿದೆ ಎಂದರು.

ಎಲ್ಲರ ಪಾತ್ರವೂ ಮಹತ್ವದ್ದು: ಕುಪ್ಪಂ  ದ್ರಾವಿಡ ವಿಶ್ವವಿದ್ಯಾಲಯದ ಡಾ.ಟಿ.ಎಸ್‌ .ನರಸಿಂಹಪ್ರಸಾದ್‌ ಮಾತನಾಡಿ, ಗ್ರೀಕ್‌ ರಂಗಭೂಮಿಯಿಂದ ಆರಂಭವಾದ ರಂಗಭೂಮಿ ಇತಿಹಾಸವು ಜಗತ್ತಿನಾದ್ಯಂತ ಹರಡಿದ್ದು, ಅನೇಕ ಪ್ರಯೋಗಗಳಿಗೆ ಒಳಪಟ್ಟಿದೆ. ರಂಗಭೂಮಿ ಎಂದರೆ ಕೇವಲ ಕಲಾವಿದರು ಮಾತ್ರವಲ್ಲ. ರಂಗದ ಮೇಲೆ, ತೆರೆ ಮರೆಯಲ್ಲಿ ಕೆಲಸ ಮಾಡುವ ಎಲ್ಲರ ಪಾತ್ರವೂ ಮಹತ್ವದ್ದಾಗಿರುತ್ತದೆ ಎಂದರು.

ರಂಗ ವಿಜಯ ಟ್ರಸ್ಟ್‌ನ ಮಾಲೂರು ವಿಜಿ ಮಾತನಾಡಿ, ವಿಶ್ವರಂಗ ದಿನಾಚರಣೆಯ ಇತಿಹಾಸ ಕುರಿತು ವಿವರಿಸಿ, ಈ ವರ್ಷ ಹೆಲೆನ್‌ ಮಿರೆನ್‌ ಎಂಬ ರಂಗಕಲಾವಿದೆ ದಿನಾಚರಣೆಯ ಸಂದೇಶವನ್ನು ನೀಡುವ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎನ್‌. ಕೃಷ್ಣಪ್ಪ, ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು, ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್‌.ಗಣೇಶ್‌, ರಂಗವಿಜಯ ಟ್ರಸ್ಟ್‌ನ ಗೌರವ ಅಧ್ಯಕ್ಷ ಡಾ.ಗೋವಿಂದರಾಜು ಮಾತನಾಡಿದರು.

ಕಲಾವಿದೆ ಕೊಂಡರಾಜನಹಳ್ಳಿ ಮಂಜುಳ ದುರ್ಗಿ ಎಂಬ ಏಕ ವ್ಯಕ್ತಿ ನಾಟಕವನ್ನು ಪ್ರದರ್ಶಿಸಿ ಗಮನ ಸೆಳೆದರು. ಕಲಾವಿದ ಲಕ್ಷ್ಮೀನಾರಾಯಣ ಕಬೀರರ ದೋಹೆಯನ್ನು ಹಾಡಿ ರಂಜಿಸಿದರು.

ಕುಮಾರಿ ರಕ್ಷಿತಾ, ಗಮಕಿ ವೆಂಕಟರಮಣ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ನಟರಾಜ್‌ ಇತರರು ಉಪಸ್ಥಿತರಿದ್ದರು. ಉಪನ್ಯಾಸಕ ಜೆ.ಜಿ.ನಾಗ ರಾಜ್‌ ಕಾರ್ಯಕ್ರಮವನ್ನು ನಿರೂಪಿಸಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.