ಆಸ್ಪತ್ರೆ, ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಪ್ರಶಸ್ತಿ ಗರಿ

ಬೂದಿಕೋಟೆ, ತೊಪ್ಪನಹಳ್ಳಿ ಪ್ರಾ.ಆರೋಗ್ಯ ಕೇಂದ್ರ, ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ‌ಪ್ರಶಸ್ತಿ

Team Udayavani, Mar 21, 2021, 7:19 PM IST

uo

ಬಂಗಾರಪೇಟೆ: ಖಾಸಗಿ ಆಸ್ಪತ್ರೆಗಿಂತ ಹೆಚ್ಚಿನ ಗುಣಮಟ್ಟದಲ್ಲಿ ರೋಗಿಗಳಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವುದರ ಜೊತೆಗೆ ಸಮರ್ಪಕ ರೀತಿಯಲ್ಲಿ ಸ್ವತ್ಛತೆ ಕಾಪಾಡಿಕೊಂಡು, ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆ ಒದಗಿಸುತ್ತಾ ಬರುತ್ತಿರುವ ತಾಲೂಕಿನ ಬೂದಿಕೋಟೆ ಹಾಗೂ ತೊಪ್ಪನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಟ್ಟಣದ ಸರ್ಕಾರಿ ಆಸ್ಪತ್ರೆ ಕಾಯಕಲ್ಪ ಯೋಜನೆಯ ಪ್ರಶಸ್ತಿಗೆ ಭಾಜನವಾಗಿದೆ.

ತಾಲೂಕಿನ ಬೂದಿಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಶಸ್ತಿಯಲ್ಲಿ ಕಳೆದ ವರ್ಷ 2019-20ನೇ ಸಾಲಿನ ಪ್ರಶಸ್ತಿಯನ್ನು ಕೊರೊನಾ ಲಾಕ್‌ಡೌನ್‌ ವೇಳೆಯಲ್ಲಿ ಘೋಷಣೆ ಮಾಡಿದ್ದರೂ ಸಹ ಪ್ರಶಸ್ತಿ ನೀಡಲಾಗದೇ ನಿಲ್ಲಿಸಿದ್ದರು. ವಾರದ ಹಿಂದೆ ಪ್ರಶಸ್ತಿ ಪ್ರಕಟಿಸಿದ್ದು, ಬೂದಿಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಜೊತೆಗೆ ತೊಪ್ಪನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಂಗಾರಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯು ಸಹ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆಯಾಗಿದೆ.ಕಾಯಕಲ್ಪ ಪ್ರಶಸ್ತಿ ಸಿಕ್ಕಿರುವುದು ಒಂದೆಡೆಯಾದರೆ, ಕೇಂದ್ರಗಳಲ್ಲಿ ಹಲವು ನ್ಯೂನತೆಗಳಿದ್ದು, ಹಲವು ಸೌಲಭ್ಯಗಳನ್ನು ಕಲ್ಪಿಸಬೇಕಿದೆ.

10 ಕೇಂದ್ರಗಳಿಗೆ ಪ್ರಶಸ್ತಿ: ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಿಗಿಂತ ಗುಣಮಟ್ಟದ ಸೇವೆ ನೀಡಬೇಕು. ಬಾಹ್ಯ ಮತ್ತು ಆಂತರಿಕ ಸ್ವತ್ಛತೆಯನ್ನು ಬಲಪಡಿಸುವುದರ ಜೊತೆಗೆ ಖಾಸಗಿ ಆಸ್ಪತ್ರೆಗಳಿಗೆ ಸೆಡ್ಡು ಹೊಡೆಯುವಂತೆ ಸರ್ಕಾರಿ ಆಸ್ಪತ್ರೆಗಳು ಅಭಿವೃದ್ಧಿ ಹೊಂದಬೇಕೆಂಬ ದೃಷ್ಟಿಯಿಂದ ಕಾಯಕಲ್ಪ ಯೋಜನೆ ಆರಂಭಿಸಿದೆ. ಈ ಯೋಜನೆಯಲ್ಲಿ ಕೋಲಾರ ಜಿಲ್ಲೆಯ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಪ್ರಶಸ್ತಿ ಪಡೆದಿದ್ದು, ಈ ಪೈಕಿ ತಾಲೂಕಿನ ಬೂದಿಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರವೂ ಸಹ ಒಂದಾಗಿದೆ.

ಅತೀ ಹೆಚ್ಚು ಜನಸಂಖ್ಯೆ: ತಾಲೂಕಿನ ಬೂದಿಕೋಟೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಜನಸಂಖ್ಯೆ ಹಾಗೂ ವ್ಯಾಪ್ತಿ ಹೊಂದಿದೆ. ಕೇಂದ್ರದ ವ್ಯಾಪ್ತಿಯಲ್ಲಿ ಸುಮಾರು 58,000 ಜನಸಂಖ್ಯೆ ಇದ್ದು, ಇಷ್ಟೂ ಜನರಿಗೆ ಸಮರ್ಪಕ ವೈದ್ಯಕೀಯ ಸೇವೆಯನ್ನು ಕಲ್ಪಿಸಲು 9 ಉಪ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ. ಹಲವು ವರ್ಷಗಳ ಕಾಲ ಆರೋಗ್ಯ ಸಿಬ್ಬಂದಿಗಳು ಹಾಗೂ ಖಾಯಂ ವೈದ್ಯರು ಇಲ್ಲದೆ ಸ್ವಚ್ಛತೆ ಮರೀಚಿಕೆಯಾಗಿತ್ತು. ಕಳೆದ ಎರಡು ವರ್ಷಗಳಿಂದ ಆಸ್ಪತ್ರೆಯು ಸ್ವತ್ಛತೆಯಿಂದ ಕೂಡಿ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ: ಆಸ್ಪತ್ರೆಯಲ್ಲಿ ಸಿಗುವ ಸೇವೆಗಳ ಜೊತೆಗೆ ಆಯುಷ್ಮಾನ್‌ ಭಾರತ ಯೋಜನೆಯಿಂದ ಹಲವು ರೋಗಗಳಿಗೆ ಚಿಕಿತ್ಸೆ ದೊರೆಯುತ್ತಿದೆ. ಪ್ರತಿ ವಾರ 35ಕ್ಕೂ ಮೇಲ್ಪಟ್ಟ ಗರ್ಭಿಣಿಯರು ತಪಾಸಣೆಗೆ ಒಳಗಾಗುತ್ತಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಕಾಯಕಲ್ಪ ತಂಡದ ಸದಸ್ಯರು ಆಸ್ಪತ್ರೆಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

  • ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.