ಶಿಲಾನ್ಯಾಸ: ಜಿಲ್ಲಾದ್ಯಂತ ಶ್ರೀರಾಮನಿಗೆ ಪೂಜೆ; ಶ್ರೀರಾಮನ ದೇಗುಲಗಳಲ್ಲಿ ಹೋಮ, ಭಜನೆ


Team Udayavani, Aug 6, 2020, 11:16 AM IST

ಶಿಲಾನ್ಯಾಸ: ಜಿಲ್ಲಾದ್ಯಂತ ಶ್ರೀರಾಮನಿಗೆ ಪೂಜೆ; ಶ್ರೀರಾಮನ ದೇಗುಲಗಳಲ್ಲಿ ಹೋಮ, ಭಜನೆ

ಕೋಲಾರ: ಹಿಂದೂಗಳ ಆರಾಧ್ಯ ದೈವ, ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರಕ್ಕೆ ಅಯೋಧ್ಯೆಯಲ್ಲಿ ಭೂಮಿ ಪೂಜೆ ನಡೆದ ಹಿನ್ನೆಲೆಯಲ್ಲಿ ನಗರದ ದೇಗುಲಗಳಲ್ಲಿ ಹಿಂದೂಪರ ಸಂಘಟನೆಗಳಿಂದ ವಿಶೇಷ ಪೂಜೆ, ಹೋಮ, ಧರ್ಮರಕ್ಷಣೆ ಹೋರಾಟದಲ್ಲಿ ಪ್ರಾಣತೆತ್ತ ಕುಟುಂಬಗಳಿಗೆ ಸನ್ಮಾನ ನಡೆಯಿತು.

ನಗರದ ಎಲ್ಲಾ ದೇವಾಲಯಗಳಲ್ಲೂ ಬುಧವಾರ ವಿಶೇಷ ಪೂಜೆ ನಡೆಸಿದ್ದು, ದೇವಾಲಯ, ಹಲವು ಮನೆಗಳ ಮೇಲೆ ಕೇಸರಿ ಭಗವಧ್ವಜ ಹಾರಡಿತು. ಐದು ಶತಮಾನಗಳ ಹೋರಾಟಕ್ಕೆ ಸಿಕ್ಕ ಜಯವೆಂದು ಬಣ್ಣಿಸಿದ ಅನೇಕರು, ಸಂಜೆ ತಮ್ಮ ಮನೆಗಳ ಮುಂಭಾಗ ದೀಪ ಬೆಳಗಿ ಸಂಭ್ರಮಿಸಿದರೆ, ಹಿಂದೂಪರ ಸಂಘಟನೆಗಳ ಯುವಕರು ಭಗವಧ್ವಜ ಹಿಡಿದು ಜೈಕಾರ ಹಾಕಿದರು.

ಭಗವಧ್ವಜ ಹಾರಾಟ: ನಗರದ ಬಸ್‌ನಿಲ್ದಾಣದ ಸಮೀಪವಿರುವ ಕೀಲುಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಜರಂಗದಳ ಕಾರ್ಯಕರ್ತರು ಹನುಮನಿಗೆ ವಿಶೇಷ ಪೂಜೆ, ಅಭಿಷೇಕ ನಡೆಸಿದರು. ಜಿಲ್ಲೆಯಲ್ಲಿ ಈ ಹಿಂದೆ ನಡೆದ ಹಿಂದೂಪರ ಹೋರಾಟಗಳಲ್ಲಿ ಪ್ರಾಣತೆತ್ತವರ ಕುಟುಂಬ ಸದಸ್ಯರನ್ನು ಈ ವೇಳೆ ಭಜರಂಗದಳದಿಂದ ಸನ್ಮಾನಿಸಲಾಯಿತು.ನೂರಾರು ಸಂಖ್ಯೆಯಲ್ಲಿ ಸೇರಿದ್ದ ಭಜರಂಗದಳ ಕಾರ್ಯಕರ್ತರು ಭಗವಧ್ವಜ ಹಿಡಿದು ಸಂಭ್ರಮಿಸಿದರಲ್ಲದೇ ಜೈಶ್ರೀರಾಮ್‌ ಘೋಷಣೆ ಮೊಳಗಿಸಲಾಯಿತು. ಈ ವೇಳೆ ಸಂಘಟನೆಯ ಬಾಲಾಜಿ, ಜಿಲ್ಲಾ ಸಂಚಾಲಕ ಬಾಬು, ಡಿ.ಆರ್‌.ನಾಗರಾಜ್‌, ವಿಜಯಕುಮಾರ್‌, ಅಪ್ಪಿ ಮತ್ತಿತರರಿದ್ದರು.

ಶ್ರೀರಾಮ ತಾರಕ ಹೋಮ: ನಗರದ ಕೆಇಬಿ ಗಣಪತಿ ದೇವಾಲಯದಲ್ಲಿ ವಿಶ್ವಹಿಂದೂ ಪರಿಷತ್‌ ಕಾರ್ಯಾಧ್ಯಕ್ಷ ಡಾ.ಶಿವಣ್ಣ ದಂಪತಿಗಳ ನೇತೃತ್ವದಲ್ಲಿ ಶ್ರೀರಾಮ ನಾಮ ತಾರಕ ಹೋಮ, ವಿಶೇಷ ಪೂಜೆ, ವಿನಾಯಕನಿಗೆ ಅಭಿಷೇಕ ನಡೆಸುವ ಮೂಲಕ ಸಂಭ್ರಮಿಸಲಾಯಿತು. ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಡಾ.ಶಂಕರ್‌ನಾಯಕ್‌, ಮಂಜುಳಾ ಭೀಮರಾವ್‌ ದಂಪತಿಗಳು, ಶಿಳ್ಳೆಂಗೆರೆ ಮಹೇಶ್‌ ಮತ್ತಿತರರು ಪಾಲ್ಗೊಂಡಿದ್ದರು.

ರಾಮನ ಗುಡಿಯಲ್ಲೂ ವಿಶೇಷ ಪೂಜೆ: ನಗರದ ಬಸ್‌ ನಿಲ್ದಾಣ ಸಮೀಪದ ಶ್ರೀರಾಮ ದೇವರಗುಡಿ ಬೀದಿಯ ದೇವಾಲಯದಲ್ಲಿ ಬಿಜೆಪಿ ಮುಖಂಡ ಜಯಂತಿಲಾಲ್‌ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಲಡ್ಡು ವಿತರಣೆ ನಡೆಯಿತು. ಈ ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಸದಸ್ಯ ರತ್ನಮ್ಮ, ಬಿಜೆಪಿ ನಗರ ಘಟಕದ ಅಧ್ಯಕ್ಷ ತಿಮ್ಮರಾಯಪ್ಪ, ಮುಖಂಡ ಜೈಶಂಕರ್‌, ಯುವ ಮೋರ್ಚಾ ಅಧ್ಯಕ್ಷ ಬಾಲಾಜಿ, ದಿಲೀಪ್‌, ಲಾಲ್‌ ಚಂದ್‌, ರಾಜೇಶ್‌ಕುಮಾರ್‌, ಜಿತೇಂದ್ರ ಕುಮಾರ್‌ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.