ಪಡಿತರ ಅಂಗಡಿಯಲ್ಲಿ ಕಳಪೆ ಆಹಾರ: ಕ್ರಮಕ್ಕೆ ಮನವಿ
Team Udayavani, Sep 20, 2018, 3:33 PM IST
ಕೋಲಾರ: ಜಿಲ್ಲೆಯ ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಹೋಬಳಿಯ ಮಹದೇವಪುರ ಡಿಪೋ ನಂ. 103
ಮಂಜುಳಮ್ಮ ಹೆಸರಿನಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿಗೆ ಕಳಪೆ ಆಹಾರ ಸಾಮಾಗ್ರಿ ವಿತರಿಸಿಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಕ್ರಿಯಾ ಸಮಿತಿ ಮತ್ತು ಮಹದೇವಪುರ, ವಡ್ಡರಹಳ್ಳಿ, ಮಿಂಡಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಡಿಪೋ ನಂ. 103 ಮಂಜುಳಮ್ಮ ಹೆಸರಿನಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಏಜೆಂಟ್ ಹರೀಶ್ ಪಡಿತರ
ಚೀಟಿಗೆ ಕಳಪೆ ಸಾಮಾಗ್ರಿ ವಿತರಿಸಿಸುತ್ತಿದ್ದಾರೆ. ತಿಂಗಳು ಪೂರ್ತಿ ವಿತರಣೆ ಮಾಡಬೇಕೆಂದು ಆದೇಶವಿದ್ದರೂ ಸಹ
ಒಂದು ದಿನ ಮಾತ್ರ ವಿತರಿಸುತ್ತಿದ್ದಾರೆ. ಮನೆಗಳಲ್ಲಿ ಗ್ಯಾಸ್ ಇದೆ ಎಂದು ಹೇಳಿ ಮೊದಲೇ ಪಟ್ಟಿ ಮಾಡಿಕೊಂಡು ಸೀಮೆಎಣ್ಣೆ ಹಾಕದೇ ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಕ್ಕಿ ವಿತರಣೆ ಮಾಡುವ ಮೊದಲು ಥಂಬ್ ತೆಗೆದುಕೊಂಡು ನಾಳೆ ಅಕ್ಕಿ ವಿತರಣೆ ಮಾಡುವುದಾಗಿ ತಿಳಿಸಿತ್ತಾರೆ. ಅ ದಿನ ಹೋಗದೆ ಮಾರನೇ ದಿನ ಹೋದ ಪಡಿತರ ಚೀಟಿದಾರರಿಗೆ ಅಕ್ಕಿ ಇಲ್ಲ ಎನ್ನುತ್ತಾರೆ. ಇದರಿಂದ ಸುತ್ತಮ್ಮುತ್ತಲಿನ ಮೂರು ಹಳ್ಳಿಗಳ ಬಡವರಿಗೆ ತುಂಬಾ ಅನಾನುಕೂಲವಾಗಿದೆ. ಈ ಸುತ್ತಮುತ್ತಲಿನ ಗ್ರಾಮಸ್ಥರು ಕೂಲಿ ನಾಲಿ ಮಾಡಿ ಜೀವನ ಸಾಗಿಸುತ್ತಿದ್ದು, ಥಂಬ್ ಕೊಡಲು ಒಂದು ದಿನದ ಕೂಲಿ ನಷ್ಟವಾಗುತ್ತದೆ. ಅಂಗಡಿಗೆ ಹೋದರೆ 2 ದಿನದ ಕೂಲಿ ನಷ್ಟವಾಗುತ್ತದೆ. 110 ರೂ. ತೆಗೆದುಕೊಂಡು ಕಳಪೆ ಆಹಾರ ಸಾಮಾಗ್ರಿ ವಿತರಿಸುತ್ತಿದ್ದಾರೆ ಎಂದು ದೂರಿದರು.
ಕೂಡಲೇ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸಾರ್ವಜನಿ ಕರಿಗೆ ಅನಕೂಲ ಮಾಡಿಕೊಡಬೇಕು.
ವಡ್ಡರಹಳ್ಳಿ ಗ್ರಾಮದಲ್ಲಿ 160 ಕಾರ್ಡು ದಾರರಿದ್ದು, ಪಕ್ಕದ ಹಳ್ಳಿಯನ್ನು ಸೇರಿಸಿ ವಡ್ಡರಹಳ್ಳಿ ಗ್ರಾಮದಲ್ಲಿ ಡಿಪೋ
ಸ್ಥಾಪಿಸಲು ಅನುಮತಿ ಕಲ್ಪಿಸಿಕೊಡ ಬೇಕೆಂದು ಅವರು ಆಗ್ರಹಿಸಿದರು.
ಈಗಾಗಲೇ ತಹಶೀಲ್ದಾರ್, ಆಹಾರ ನಿರೀಕ್ಷಕರಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮಹದೇವಪುರ, ವಡ್ಡರಹಳ್ಳಿ, ಮಿಂಡಹಳ್ಳಿ ಗ್ರಾಮಸ್ಥರಿಗೆ ಅನಕೂಲ ಮಾಡಿಕೊಡುವಂತೆ ಒತ್ತಾಯಿಸಿದರು.
ನಿಯೋಗದಲ್ಲಿ ದಲಿತ ಕ್ರಿಯಾ ಸಮಿತಿ ಜಿಲ್ಲಾ ಸಂಚಾಲಕ ಬಿ.ಎಂ. ರಮೇಶ್, ಗ್ರಾಮ ಪಂಚಾಯತಿ ಸದಸ್ಯ ವಡ್ಡರಹಳ್ಳಿ ಶಿವಪ್ಪ, ಶ್ರೀನಾಥ್, ಶಿವಕುಮಾರ್, ಗೋಪಾಲಕೃಷ್ಣ, ಮಂಜುನಾಥ್, ವೆಂಕಟರಾಮ್, ಮಹೇಶ್, ಚಂದ್ರಶೇಖರ್, ಗಜೇಂದ್ರ, ಕೃಷ್ಣಪ್ಪ, ಆನಂದ್, ವೆಂಕಟೇಶಪ್ಪ, ಮಹದೇವಪುರ ವೆಂಕಟೇಶ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು