ಬಂಗಾರಪೇಟೆ; ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಚ್ಚು ರಾಗಿ ಖರೀದಿ

ಗರಿಷ್ಠ 50 ಕ್ವಿಂಟಲ್‌ ರಾಗಿ ಮಾರಾಟ ಮಾಡಲು ಅವಕಾಶ ನೀಡಿದ್ದರು.

Team Udayavani, Jun 22, 2022, 4:48 PM IST

ಬಂಗಾರಪೇಟೆ; ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಚ್ಚು ರಾಗಿ ಖರೀದಿ

ಬಂಗಾರಪೇಟೆ: ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ತೆರೆಯಲಾಗಿದ್ದ ರಾಗಿ ಖರೀದಿ ಕೇಂದ್ರ ಗಳಲ್ಲಿ ಉತ್ತಮ ಬೆಲೆ ನಿಗದಿ ಮಾಡಿರುವ ಕಾರಣ ರೈತರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ದೊರಕಿದೆ.

ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸಿದೆ. ಅದರಂತೆ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದಿಂದ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರಗಳಲ್ಲಿ ರಾಗಿಯನ್ನು ಮಾರಾಟ ಮಾಡಲು ಕಳೆದ 2 ವರ್ಷಗಳಿಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮುಂದೆ ಬಂದಿದ್ದಾರೆ. ರಾಗಿ ಕೇಂದ್ರಗಳಲ್ಲಿ ಮುಕ್ತ ಮಾರುಕಟ್ಟೆಗಿಂತಲೂ ಸುಮಾರು ಎರಡು ಪಟ್ಟು ಬೆಲೆ ನಿಗದಿಯಾಗಿರುವ ಕಾರಣ ಮಧ್ಯವರ್ತಿ ಗಳ ನೆರವಿಲ್ಲದೆ ರೈತರು ರಾಗಿ ಕೇಂದ್ರಕ್ಕೆ ಬಂದು ತಮ್ಮ ದಾಖಲೆಗಳನ್ನು ನೀಡಿ ನೋಂದಾಯಿಸಿ ಕೊಂಡು ರಾಗಿ ಪೂರೈಕೆ ಮಾಡುತ್ತಿದ್ದಾರೆ.

ಸರ್ಕಾರದಿಂದ ಪ್ರತಿ ಕ್ವಿಂಟಲ್‌ ರಾಗಿಗೆ ಕಳೆದ ವರ್ಷ 3,295 ರೂ.ಗಳಷ್ಟು ದರವನ್ನು ನಿಗದಿಪಡಿಸ ಲಾಗಿದ್ದು, ಈ ವರ್ಷ 3,377 ರೂಗಳನ್ನು ಪ್ರತಿ ಕ್ವಿಂಟಾಲ್‌ಗೆ ನಿಗದಿ ಮಾಡಿ ಬೆಲೆ ಏರಿಕೆ ಮಾಡಿರುವುದರಿಂದ ರೈತರಿಗದ ತಂದಿದೆ. ಪ್ರತಿ ಎಕರೆಗೆ 10 ಕ್ವಿಂಟಾಲ್‌ನಂತೆ ಗರಿಷ್ಟ 20 ಕ್ವಿಂಟಲ್‌ವರೆಗೆ ರಾಗಿ ಖರೀದಿಗೆ ಸರ್ಕಾರ ಅವಕಾಶ ಕಲ್ಪಿಸಿರುವ ಕಾರಣ ಹೆಚ್ಚಾಗಿ ಬೆಳೆದ ದೊಡ್ಡ ರೈತರಿಗೆ ಬೆಂಬಲ ಬೆಲೆಗೆ ರಾಗಿ ಮಾರಾಟ ಮಾಡಲು ಅವಕಾಶ ಇಲ್ಲದಂತಾಗಿದೆ.

ಕಳೆದ ಸಾಲಿನಲ್ಲಿ ಪ್ರತಿ ರೈತರಿಂದ ಐದು ಎಕರೆ ಜಮೀನಿಗೆ ಗರಿಷ್ಠ 50 ಕ್ವಿಂಟಲ್‌ ರಾಗಿ ಮಾರಾಟ ಮಾಡಲು ಅವಕಾಶ ನೀಡಿದ್ದರು. ಈ ಬಾರಿ ಪ್ರತಿಯೊಬ್ಬರ ರೈತರಿಗೆ ಎರಡು ಎಕರೆ ಜಮೀನು ಹಾಗೂ ಗರೀಷ್ಠ 20 ಕ್ವಿಂಟಾಲ್‌ ಮಾತ್ರ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಯಾವುದೇ ರೈತರು ಐದು ಎಕರೆ ಜಮೀನು ಹೊಂದಿದ್ದಲ್ಲಿ ದೊಡ್ಡ ರೈತರೆಂದು ಬ್ಲಾಕ್‌ ಮಾಡಲಾಗಿರುವುದರಿಂದ ಹೆಚ್ಚು ರಾಗಿ ಮಾರಾಟ ಮಾಡಲು ರೈತರಿಗೆ ಅವಕಾಶ ಇಲ್ಲದೇ
ಇರುವುದರಿಂದ ಅತಿ ಹೆಚ್ಚು ರಾಗಿ ಬೆಳೆದಿರುವ ರೈತರಿಗೆ ಸಂಕಷ್ಟ ಎದುರಾಗಿರುವುದರಿಂದ ಕಡಿಮೆ ಜಮೀನು ಹೊಂದಿರುವ ಬೇರೆ ರೈತರ ಹೆಸರಿನಲ್ಲಿ ರಾಗಿ ಮಾರಾಟ ಮಾಡಲಾಗುತ್ತಿದೆ.

ಸರ್ಕಾರ ಖರೀದಿ ಕೇಂದ್ರಗಳನ್ನು ಆರಂಭಿಸುವುದಕ್ಕೂ ಮುಂಚೆ ರೈತರು ಮುಕ್ತ ಮಾರುಕಟ್ಟೆಯಲ್ಲಿ ರಾಗಿಯನ್ನು ಕನಿಷ್ಠ 1,500 ರಿಂದ ಗರಿಷ್ಠ 1,800 ರೂಗಳಿಗೆ ಮಾರಾಟ ಮಾಡುತ್ತಿದ್ದರು. ಸರ್ಕಾರದಿಂದ ಪ್ರತಿ ಕ್ವಿಂಟಲ್‌ ರಾಗಿಗೆ ಈ ವರ್ಷ 3,377 ರೂ.ಗಳಷ್ಟು ಧರವನ್ನು ನಿಗದಿಪಡಿಸಲಾಗಿದ್ದು, ರೈತರು ಅವಕಾಶ ಕೇಳಿದ ಕಾರಣದಿಂದ ಎರಡು ಬಾರಿ ರಾಗಿ ಖರೀದಿಗೆ ಅವಕಾಶ ಕಲ್ಪಿಸಿದ್ದರು.

ರೈತರಿಂದ ಖರೀದಿ ಮಾಡಿದ ರಾಗಿಗೆ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡುವ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಕೇಂದ್ರಗಳತ್ತ ರೈತರು ಮುಖ ಮಾಡುತ್ತಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ರೈತರಿಂದ ರಾಗಿ ಖರೀದಿಸಲು ಜಾರಿಗೆ ತಂದಿರುವ ನಿಯಮಗಳನ್ನು ಸಡಿಲಗೊಳಿಸದೇ ಇರುವುದರಿಂದ ಕೆಲವು ರೈತರಿಗೆ ಅನ್ಯಾಯವಾಗುತ್ತಿದೆ. ಇಡೀ ಕೋಲಾರ ಜಿಲ್ಲೆಯಲ್ಲಿಯೇ ಬಂಗಾರಪೇಟೆ ತಾಲೂಕಿನಲ್ಲಿ ಅತೀ ಹೆಚ್ಚು ರೈತರು ರಾಗಿ ಮಾರಾಟಕ್ಕಾಗಿ ನೊಂದಣಿ ಮಾಡಿಸಿ ಅತೀ ಹೆಚ್ಚು ರಾಗಿಯನ್ನು ಮಾರಾಟ ಮಾಡಿದ್ದಾರೆ.

ಇದುವರೆಗೂ 56,606ಕ್ವಿಂಟಲ್‌ ರಾಗಿ ಖರೀದಿ
ತಾಲೂಕಿನಲ್ಲಿ 2019-2020ರಲ್ಲಿ ಸುಮಾರು 500 ರೈತರು ಕೇವಲ 7,242 ಕ್ವಿಂಟಾಲ್‌ ರಾಗಿಯನ್ನು ಮಾತ್ರ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿದ್ದರು. 2020-21 ನೇ ಸಾಲಿನಲ್ಲಿ ಉತ್ತಮ ಮಳೆ ಬಂದಿದ್ದರಿಂದ ರೈತರು 44829 ಕ್ವಿಂಟಲ್‌ ರಾಗಿಯನ್ನು 3,290 ರೂ.ಗಳಿಗೆ ಮಾರಾಟ ಮಾಡಿದ್ದರು. 2021-22 ನೇ ಸಾಲಿನಲ್ಲಿ 4,240 ರೈತರು ರಾಗಿ ಮಾರಾಟಕ್ಕೆ ನೊಂದಣಿ ಮಾಡಿಸಿ, 4,071 ರೈತರು 56,606 ಕ್ವಿಂಟಲ್‌ ರಾಗಿಯನ್ನು ಇದೂವರೆಗೂ ಮಾರಾಟ ಮಾಡಿದ್ದಾರೆ ಎಂದು ಕೆಸಿಎಸ್‌ಎಫ್ಸಿ ಗೋಡೌನ್‌ನ ವ್ಯವಸ್ಥಾಪಕ ಖಲೀಮುಲ್ಲಾಖಾನ್‌ ತಿಳಿಸಿದರು.

●ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.