ಜನತಾ ಕರ್ಫ್ಯೂಗೆ ಬಂಗಾರಪೇಟೆ ಸಂಪೂರ್ಣ ಸ್ಥಬ್ದ


Team Udayavani, Mar 23, 2020, 3:00 AM IST

janata-kola

ಬಂಗಾರಪೇಟೆ: ಕೊರೊನಾ ತಡೆಗೆ ಭಾನುವಾರ ನಡೆದ ಜನತಾ ಕರ್ಫ್ಯೂಗೆ ತಾಲೂಕಿನಲ್ಲಿ ನೂರರಷ್ಟು ಬೆಂಬಲ ವ್ಯಕ್ತವಾಗಿದೆ. ಎಂದೂ ಕಾಣದ ಬಂದ್‌ ಭಾನುವಾರ ನಡೆದಿದೆ. ಬಸ್‌ ಸಂಚಾರ, ಅಂಗಡಿ -ಮುಗ್ಗಟ್ಟುಗಳು ಸಂಪೂರ್ಣವಾಗಿ ಮುಚ್ಚುವುದರೊಂದಿಗೆ ಜನರು ಸಹ ಬರದೇ ಇಡೀ ಬಂಗಾರಪೇಟೆಯೇ ಸ್ಥಬ್ದವಾಗಿದೆ.

ಬಸ್‌ ಸಂಚಾರವಿಲ್ಲ: ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ನಿಲ್ಲಿಸಲಾಗಿತ್ತು. ಸಾರಿಗೆ ಇಲಾಖೆಯ ಬಸ್‌ ನಿಲ್ದಾಣದಲ್ಲಿ ಸಿಬ್ಬಂದಿಯೂ ಇರಲಿಲ್ಲ. ಪುರಸಭೆಯ ಖಾಸಗಿ ಬಸ್‌ ನಿಲ್ದಾಣದಲ್ಲಿಯೂ ಯಾವುದೇ ಬಸ್‌ ಕಣ್ಣಿಗೆ ಕಾಣಲೇ ಇಲ್ಲ. ದ್ವಿಚಕ್ರ ವಾಹನದಲ್ಲಿ ಜನರು ಸಂಚಾರ ಕಡಿಮೆ ಇತ್ತು. ಗ್ರಾಮೀಣ ಪ್ರದೇಶದಲ್ಲಿ ಸಾಮನ್ಯವಾಗಿ ಆಟೋ ಸಂಚಾರ ಇರುತ್ತಿತ್ತು. ಆದರೆ, ಜನತಾ ಕರ್ಫ್ಯೂಗೆ ಬೆಂಬಲಿ ಆಟೋ ಎಲ್ಲೂ ಕಾಣಿಸಿಕೊಂಡಿಲ್ಲ. ಗ್ರಾಮೀಣ ಪ್ರದೇಶದಿಂದ ಸಾಮಾನ್ಯರು ಪಟ್ಟಣಕ್ಕೆ ಬರಲೇ ಇಲ್ಲ.

ರೈಲುಗಾಡಿಗಳ ಬರಲೇ ಇಲ್ಲ: ರೈಲು ಸಂಚಾರದಲ್ಲಿ ಬೆಂಗಳೂರು ಬಿಟ್ಟರೆ ನಂತರ ಬಂಗಾರಪೇಟೆ ರೈಲ್ವೆ ಜಂಕ್ಷನ್‌ ಹೆಚ್ಚು ರೈಲುಗಳು ಓಡಾಡುವ ಪ್ರಮುಖ ರೈಲ್ವೆ ನಿಲ್ದಾಣ. ಈ ರೈಲ್ವೆ ನಿಲ್ದಾಣದಲ್ಲಿ ಕನಿಷ್ಠ ಒಬ್ಬ ಪ್ರಯಾಣಿಕನೂ ಕಾಣಿಸಿಗಲ್ಲಿಲ್ಲ. ರೈಲ್ವೆ ಟಿಕೆಟ್‌ ಕೌಂಟರ್‌ ಸೇರಿದಂತೆ ರೈಲ್ವೆ ನಿಲ್ದಾಣದ ಆವರಣದಲ್ಲಿರುವ ಅಂಗಡಿ-ಮುಗ್ಗಟ್ಟುಗಳನ್ನು ಸಂಪೂರ್ಣ ಮುಚ್ಚಲಾಗಿತ್ತು. ಕಾಕಿನಾಡ ತಿರುಪತಿ ರೈಲ್ವೆಗಾಡಿ ಶನಿವಾರ ಆಗಮಿಸಿದ್ದು,

ಈ ರೈಲುಗಾಡಿ ಮತ್ತೆ ಕಾಕಿನಾಡಗೆ ವಾಪಸ್ಸಾಗಿದ್ದು, ಬಿಟ್ಟರೆ ಉಳಿದಂತೆ ಯಾವುದೇ ರೈಲುಗಾಡಿಗಳು ಸಂಚಾರ ಮಾಡಿಲ್ಲ. ಬಂಗಾರಪೇಟೆ ರೈಲೆº ನಿಲ್ದಾಣದಲ್ಲಿ ಮಾ.31ರವರೆಗೂ ಯಾವುದೇ ರೈಲು ಸಂಚಾರ ಇಲ್ಲ ಎಂದು ನಾಮಫ‌ಲಕದಲ್ಲಿ ಪ್ರಕಟಿಸಿದರು. ಪ್ರತಿ ದಿನ ಬಂಗಾರಪೇಟೆಯಿಂದ ರಾಜದಾನಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ 30 ಸಾವಿರ ಜನರಿಗೆ ಬ್ರೇಕ್‌ ಹಾಕಲಾಗಿದೆ.

ಅಂಗಡಿ-ಮುಗ್ಗಟ್ಟು ಬಂದ್‌: ಪಟ್ಟಣದಲ್ಲಿ ನಿತ್ಯ ಜನರು ಸೇರುತ್ತಿದ್ದ ಪ್ರಮುಖ ಬಜಾರ್‌ ರಸ್ತೆಯಲ್ಲಿ ಅಂಗಡಿಗಳು ತೆರೆದಿರಲ್ಲಿಲ್ಲ. ಯುಗಾದಿ ಹತ್ತಿರ ಇರುವುದರಿಂದ ಅಪಾರ ಸಂಖ್ಯೆಯಲ್ಲಿ ವ್ಯಾಪಾರ ಮಾಡಲು ಜಮಾಯಿಸುತ್ತಿದ್ದ ಜನರು, ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತಪಡಿಸಿದರು. ಗಡಿಭಾಗದ ಬಂಗಾರಪೇಟೆಯಲ್ಲಿ ಅಕ್ಕಿ ವ್ಯಾಪಾರಕ್ಕೆ ಹೆಸರುವಾಸಿಯಾಗಿದ್ದರೂ ಕೊರೊನಾದಿಂದ ಸಂಪೂರ್ಣ ಸ್ಥಗಿತಗೊಂಡಿತ್ತು.

ಎಲ್ಲಾ ಮನೆಗಳಿಗೆ ದಿನ ಪತ್ರಿಕೆ ಸೇರಿದರೂ ಮಾರಾಟ ಮಾಡುವವರೇ ಇಲ್ಲವಾಗಿತ್ತು. ಅಲ್ಲಲ್ಲಿ ಹಾಲು ಮಾರಾಟ ಇತ್ತು. ಮಧ್ಯಾಹ್ನದ ವೇಳೆಗೆ ಮುಚ್ಚಲಾಗಿತ್ತು. ಆಸ್ಪತ್ರೆಗಳಿಗೆ ರೋಗಿಗಳು ಬರಲಿಲ್ಲ. ಅಲ್ಲಲ್ಲಿ ಮೆಡಿಕಲ್ಸ್‌ ಶಾಪ್‌ಗ್ಳು ತೆರೆದಿದ್ದವು. ಉಳಿದಂತೆ ಬಾರ್‌ಗಳು, ಹೋಟೆಲ್‌ಗ‌ಳು, ತರಕಾರಿ, ಹಣ್ಣುಹಂಪಲು ಅಂಗಡಿಗಳು ಸೇರಿದಂತೆ ಯಾವುದೇ ಅಂಗಡಿಗಳು ತೆರೆಯದೇ ಬಂದ್‌ಗೆ ಸಹಕಾರ ನೀಡಿದ್ದರು.

ಇಂದಿರಾ ಕ್ಯಾಂಟೀನ್‌ ತೆರೆದಿತ್ತು: ಪಟ್ಟಣದ ಹೃದಯಾಭಾಗದಲ್ಲಿರುವ ಇಂದಿರಾ ಕ್ಯಾಂಟೀನ್‌ ಒಂದು ವಾರದಿಂದ ಮುಚ್ಚಲಾಗಿತ್ತು. ಆದರೆ, ಜನತ ಕಫ್ಯೂಗೆ ಇಂದಿರಾ ಕ್ಯಾಂಟೀನ್‌ ಮೇಲಾಧಿಕಾರಿಗಳ ಆದೇಶದಂತೆ ತೆರೆಯಲಾಗಿತ್ತು. ಭಿಕ್ಷುಕರು, ಅಲೆಮಾರಿಗಳು ಸೇರಿದಂತೆ ಹೋಟೆಲ್‌ನಿಂದಲೇ ಊಟ ಮಾಡುವ ಜನರಿಗೆ ಸಹಕಾರಿಯಾಗಿ ಈ ಕೆಲಸ ಮಾಡಲಾಗಿದೆ. ಅದರೆ, ಇಲ್ಲಿ ಊಟ ಮಾಡುವವರು ಹತ್ತಾರು ಜನರು ಬರಲಿಲ್ಲ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.